Homeಮುಖಪುಟರಾಹುಲ್ ಗಾಂಧಿ ನಾಲಿಗೆ ಕಡಿಯುವವರಿಗೆ ₹11 ಲಕ್ಷ ನೀಡುತ್ತೇನೆ ಎಂದ ಶಿವಸೇನೆ ಶಾಸಕ

ರಾಹುಲ್ ಗಾಂಧಿ ನಾಲಿಗೆ ಕಡಿಯುವವರಿಗೆ ₹11 ಲಕ್ಷ ನೀಡುತ್ತೇನೆ ಎಂದ ಶಿವಸೇನೆ ಶಾಸಕ

- Advertisement -
- Advertisement -

‘ಸಮಾಜದಲ್ಲಿ ಸಮಾನತೆ ಸೃಷ್ಟಿಯಾದರೆ ಮೀಸಲಾತಿ ರದ್ದುಪಡಿಸುವ ಬಗ್ಗೆ ಕಾಂಗ್ರೆಸ್ ಯೋಚಿಸುತ್ತದೆ’ ಎಂದು ಅಮೆರಿಕಾದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಿರುವ ಬಿಜೆಪಿ ನಾಯಕರು ದೇಶದಾದ್ಯಂತ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಇದೀಗ, “ಮೀಸಲು ವ್ಯವಸ್ಥೆಯನ್ನು ರದ್ದುಪಡಿಸುವ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ ₹11 ಲಕ್ಷ ನೀಡುತ್ತೇನೆ” ಎಂದು ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಘೋಷಿಸಿದ್ದಾರೆ.

ಆದರೆ, ಶಾಸಕರ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರವಿದೆ.

“ರಾಹುಲ್ ಗಾಂಧಿ ಅವರು ವಿದೇಶದಲ್ಲಿದ್ದಾಗ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಮುಗಿಸಲು ಬಯಸುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ತೆರೆದಿಟ್ಟಿದೆ” ಎಂದು ಗಾಯಕ್ವಾಡ್ ಅವರು ವಿಲಕ್ಷಣ ಬಹುಮಾನವನ್ನು ಘೋಷಿಸುವ ಮೊದಲು ಸುದ್ದಿಗಾರರಿಗೆ ತಿಳಿಸಿದರು.

“ಇತ್ತೀಚಿನ ಅಮೇರಿಕಾ ಭೇಟಿಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ಮೀಸಲಾತಿಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡಿದರು. ಇದು ಮೀಸಲಾತಿಯನ್ನು ಅಂತರ್ಗತವಾಗಿ ವಿರೋಧಿಸುವ ಮನಸ್ಥಿತಿಯನ್ನು ತೋರಿಸುತ್ತದೆ. ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು ₹11 ಲಕ್ಷ ಬಹುಮಾನ ನೀಡುತ್ತೇನೆ” ಎಂದು ಗಾಯಕ್ವಾಡ್ ಹೇಳಿದರು.

“ರಾಹುಲ್ ಗಾಂಧಿಯವರ ಹೇಳಿಕೆಗಳು ಜನರ ದೊಡ್ಡ ವಿಶ್ವಾಸಘಾತುಕತನವಾಗಿದೆ. ಮರಾಠರು, ಧಂಗರುಗಳು ಮತ್ತು ಒಬಿಸಿಗಳಂತಹ ಸಮುದಾಯಗಳು ಮೀಸಲಾತಿಗಾಗಿ ಹೋರಾಡುತ್ತಿವೆ. ಆದರೆ, ಅದಕ್ಕೂ ಮೊದಲು, ಅದರ ಪ್ರಯೋಜನಗಳನ್ನು ಕೊನೆಗೊಳಿಸುವ ಬಗ್ಗೆ ಅವರು ಮಾತನಾಡುತ್ತಿದ್ದಾರೆ” ಎಂದು ಶಾಸಕರು ಹೇಳಿದರು.

“ರಾಹುಲ್ ಗಾಂಧಿಯವರು ಸಂವಿಧಾನದ ಪುಸ್ತಕವನ್ನು ತೋರಿಸುತ್ತಿದ್ದರು ಮತ್ತು ಬಿಜೆಪಿ ಅದನ್ನು ಬದಲಾಯಿಸುತ್ತದೆ ಎಂದು ಸುಳ್ಳು ಕಥೆಯನ್ನು ಹರಡುತ್ತಿದ್ದರು. ಆದರೆ, ಕಾಂಗ್ರೆಸ್ ದೇಶವನ್ನು 400 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ಯಲು ಯೋಜಿಸುತ್ತಿದೆ” ಎಂದು ಅವರು ಹೇಳಿದರು.

ಗಾಯಕ್ವಾಡ್ ಅವರ ಹೇಳಿಕೆಗಳಿಂದ ರಾಜ್ಯ ಬಿಜೆಪಿ ಅಂತರ ಕಾಯ್ದುಕೊಂಡಿದೆ. “ನಾನು ಗಾಯಕ್ವಾಡ್ ಅವರ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ ಅಥವಾ ಅನುಮೋದಿಸುವುದಿಲ್ಲ. ಆದರೆ, ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮೀಸಲಾತಿಯನ್ನು ವಿರೋಧಿಸಿದರು, ಇದು ಪ್ರಗತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ನಾವು ಮರೆಯುವಂತಿಲ್ಲ” ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಬವಾಂಕುಲೆ ಹೇಳಿದರು.

“ಮೀಸಲಾತಿ ನೀಡುವುದು ಎಂದರೆ ಮೂರ್ಖರನ್ನು ಬೆಂಬಲಿಸುವುದು ಎಂದು ರಾಜೀವ್ ಗಾಂಧಿ ಹೇಳಿದ್ದರು. ಈಗ ರಾಹುಲ್ ಗಾಂಧಿ ಅವರು ಮೀಸಲಾತಿಯನ್ನು ಕೊನೆಗೊಳಿಸುವುದಾಗಿ ಹೇಳುತ್ತಾರೆ” ಎಂದು ಬಿಜೆಪಿ ನಾಯಕ ಹೇಳಿದರು.

“ನಾವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಸಂವೇದನಾಶೀಲಗೊಳಿಸುತ್ತೇವೆ ಮತ್ತು ನೆಹರು, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಅಭಿಪ್ರಾಯಗಳ ಬಗ್ಗೆ ಅವರಿಗೆ ತಿಳಿಸುತ್ತೇವೆ, ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಕೂಡ ಈ ಬಗ್ಗೆ ಯೋಚಿಸಬೇಕು” ಎಂದು ಅವರು ಹೇಳಿದರು.

ಮಹಾರಾಷ್ಟ್ರ ಕಾಂಗ್ರೆಸ್‌ನ ವಕ್ತಾರ ಅತುಲ್ ಲೋಂಧೆ ಮಾತನಾಡಿ, “ಸಂಜಯ್ ಗಾಯಕ್‌ವಾಡ್ ಸಮಾಜ ಮತ್ತು ರಾಜಕೀಯದಲ್ಲಿ ಬದುಕಲು ಅರ್ಹರಲ್ಲ. ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಗಾಯಕ್‌ವಾಡ್ ವಿರುದ್ಧ ಅಪರಾಧಿ ನರಹತ್ಯೆಯ ಆರೋಪವನ್ನು ಹೊರಿಸುತ್ತಾರೆಯೇ ಎಂಬುದನ್ನು ನಾವು ನೋಡಬೇಕಾಗಿದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಎಂಎಲ್ ಸಿ ಭಾಯ್ ಜಗತಾಪ್ ಪ್ರತಿಕ್ರಿಯಿಸಿ, “ನಾನು ಅಂತಹ ಜನರು ಮತ್ತು ಹೇಳಿಕೆಗಳನ್ನು ಖಂಡಿಸುತ್ತೇನೆ, ಈ ಜನರು ರಾಜ್ಯದ ರಾಜಕೀಯವನ್ನು ಹಾಳು ಮಾಡಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ವಿವಾದಿತ ರಾಜಕಾರಣಿ ಗಾಯಕ್ವಾಡ್

ವಿದರ್ಭ ಪ್ರದೇಶದ ಬುಲ್ಧಾನ ವಿಧಾನಸಭಾ ಕ್ಷೇತ್ರದ ಶಾಸಕ ಗಾಯಕ್ವಾಡ್ ಅವರು ವಿವಾದಗಳಿಗೆ ಹೊಸದೇನಲ್ಲ. ಕಳೆದ ತಿಂಗಳು ಶಿವಸೇನೆ ಶಾಸಕರ ಕಾರನ್ನು ಪೊಲೀಸರು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಾಹನದೊಳಗೆ ವಾಂತಿ ಮಾಡಿಕೊಂಡ ನಂತರ ಪೊಲೀಸರು ಸ್ವಯಂಪ್ರೇರಣೆಯಿಂದ ವಾಹನವನ್ನು ಸ್ವಚ್ಛಗೊಳಿಸಿದರು ಎಂದು ಗಾಯಕ್ವಾಡ್ ನಂತರ ವಿವರಿಸಿದ್ದರು.

ಫೆಬ್ರವರಿಯಲ್ಲಿ, ಗಾಯಕ್ವಾಡ್ ಅವರು 1987 ರಲ್ಲಿ ಹುಲಿಯನ್ನು ಬೇಟೆಯಾಡಿದ್ದರು ಮತ್ತು ಅದರ ಹಲ್ಲಿನ ಕುತ್ತಿಗೆಗೆ ಹಾಕಿಕೊಂಡಿದ್ದಾರೆ ಎಂದು ಹೇಳಿದ್ದರು. ರಾಜ್ಯ ಅರಣ್ಯ ಇಲಾಖೆಯು ಹುಲಿ ದಂತವನ್ನು ವಿಧಿವಿಜ್ಞಾನದ ಗುರುತಿಗಾಗಿ ಕಳುಹಿಸಿ, ಗಾಯಕ್ವಾಡ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆರೋಪ ಹೊರಿಸಿತು.

ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿದ್ದೇನು?

“ಭಾರತದಲ್ಲಿ ಸಮಾನತೆಯ ವಾತಾವರಣ ಮೂಡಿದಾಗ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಕಾಂಗ್ರೆಸ್ ಪಕ್ಷವು ಆಲೋಚಿಸಲಿದೆ; ಈಗ ಸಮಾನತೆಯ ಪರಿಸ್ಥಿತಿ ಇಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಅಮೆರಿಕಾದ ಪ್ರತಿಷ್ಠಿತ ಜಾರ್ಜ್‌ಟೌನ್‌ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿದ್ದ ಅವರು, ‘ಮೀಸಲಾತಿಯು ಎಷ್ಟು ಕಾಲ ಮುಂದುವರಿಯಲಿದೆ’ ಎಂಬ ಪ್ರಶ್ನೆಗೆ ಉತ್ತರಿಸಿ, “ಹಣಕಾಸಿನ ಅಂಕಿ–ಅಂಶಗಳನ್ನು ಗಮನಿಸಿದಾಗ; ಪ್ರತಿ ₹100ರಲ್ಲಿ ಆದಿವಾಸಿ ಸಮುದಾಯಗಳಿಗೆ ಸಿಗುತ್ತಿರುವುದು 10 ಪೈಸೆ ಮಾತ್ರ, ದಲಿತರಿಗೆ ಸಿಗುತ್ತಿರುವುದು ₹5, ಒಬಿಸಿಗಳಿಗೆ ಕೂಡ ಸರಿಸುಮಾರು ಇಷ್ಟೇ ಮೊತ್ತ ಸಿಗುತ್ತಿದೆ ಎಂಬುದು ಗೊತ್ತಾಗುತ್ತದೆ. ಈ ಸಮುದಾಯಗಳ ಪಾಲ್ಗೊಳ್ಳುವಿಕೆಗೆ ಅವಕಾಶ ಸಿಗುತ್ತಿಲ್ಲ ಎಂಬುದು ವಾಸ್ತವ. ದೇಶದ ಶೇ 90ರಷ್ಟು ಮಂದಿಗೆ ಪಾಲುದಾರಿಕೆಯ ಅವಕಾಶ ಸಿಗುತ್ತಿಲ್ಲ. ಭಾರತದ ‍ಉದ್ಯಮಿಗಳ ಪಟ್ಟಿಯನ್ನು ಗಮನಿಸಿ. ಆದಿವಾಸಿ ಸಮುದಾಯಗಳಿಗೆ ಸೇರಿದವರ ಹೆಸರನ್ನು ತೋರಿಸಿ, ದಲಿತರ ಹೆಸರು ತೋರಿಸಿ, ಒಬಿಸಿ ಹೆಸರು ತೋರಿಸಿ. ಮುಂಚೂಣಿ 200 ಉದ್ಯಮಿಗಳ ಪೈಕಿ ಒಬಿಸಿಗೆ ಸೇರಿದ ಒಬ್ಬರು ಮಾತ್ರ ಇದ್ದಾರೆ. ಒಬಿಸಿಗೆ ಸೇರಿದವರ ಸಂಖ್ಯೆಯು ಭಾರತದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟಿದೆ. ಆದರೆ ನಾವು ರೋಗಲಕ್ಷಣಕ್ಕೆ ಚಿಕಿತ್ಸೆ ನೀಡುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ; ಸಂಸದೀಯ ಸ್ಥಾಯಿ ಸಮಿತಿ: ಲೋಕಸಭೆಯಲ್ಲಿ 3, ರಾಜ್ಯಸಭೆಯ 1 ಸ್ಥಾನ ಕಾಂಗ್ರೆಸ್ ಪಾಲಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. what is action taken by BJP. Nadda, sha and honorable pm .instead of condemn the statement,and dismissing him from the party they celebrating. Nonsense government. Shameful.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...