Homeಮುಖಪುಟಪ್ರಜಾಪ್ರಭುತ್ವಕ್ಕೆ 'ಶ್ರದ್ಧಾಂಜಲಿ' ಸಲ್ಲಿಸಿದ ಶಿವಸೇನೆ ಸಂಸದ ಸಂಜಯ್ ರಾವತ್

ಪ್ರಜಾಪ್ರಭುತ್ವಕ್ಕೆ ‘ಶ್ರದ್ಧಾಂಜಲಿ’ ಸಲ್ಲಿಸಿದ ಶಿವಸೇನೆ ಸಂಸದ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪಕ್ಷವನ್ನು ನಿಜವಾದ ಶಿವಸೇನೆ ಎಂದು ಘೋಷಿಸಿ, ಎರಡೂ ಬಣದ ಶಾಸಕರನ್ನು ಅನರ್ಹಗೊಳಿಸುವ ಮನವಿಯನ್ನು ತಿರಸ್ಕರಿಸಿದ್ದಾರೆ. ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಗುರುವಾರ ಇದನ್ನು ಪ್ರಜಾಪ್ರಭುತ್ವದ ಸಾವು ಎಂದು ಕರೆದಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ’ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ, ಪ್ರಜಾಪ್ರಭುತ್ವ 1950-2023 ಶೋಕ: ಮಹಾರಾಷ್ಟ್ರ.’ ಎಂದು ಮರಾಠಿಯಲ್ಲಿ ಪ್ರಜಾಪ್ರಭುತ್ವ ಎಂದು ಬರೆದಿರುವ ಚೌಕಟ್ಟಿನ ಮೇಲೆ ಹಾರವನ್ನು ಹಾಕಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಬಾಳಾ ಠಾಕ್ರೆ ಅವರು ಸ್ಥಾಪಿಸಿದ ಪ್ರಾದೇಶಿಕ ಪಕ್ಷದ ಪ್ರಾಬಲ್ಯಕ್ಕಾಗಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ಬಣ ಮತ್ತು ಬಿಜೆಪಿ ನೇತೃತ್ವದ ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಬುಧವಾರ ಸಾಕ್ಷಿಯಾಗಿದೆ.

ಶಿವಸೇನೆಯ ಎರಡು ಬಣಗಳು ಸಲ್ಲಿಸಿರುವ ದೀರ್ಘಕಾಲದ ಅರ್ಜಿಗಳನ್ನು ಪರಿಹರಿಸುವಂತೆ ಸುಪ್ರೀಂ ಕೋರ್ಟ್ ಗಡುವು ನಿಗದಿಪಡಿಸಿದ ವಾರಗಳ ನಂತರ ನಾರ್ವೇಕರ್ ಅವರ ನಿರ್ಧಾರವು ಮಹಾರಾಷ್ಟ್ರ ವಿಧಾನಸಭೆ ರಚನೆಯ ಸ್ಥಿರತೆಯನ್ನು ಖಚಿತಪಡಿಸಿದ್ದು, ಶಿಂಧೆ ಅವರ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾವುತ್, ‘ನ್ಯಾಯವನ್ನು ಪೂರೈಸಲು ನ್ಯಾಯಮಂಡಳಿಯಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಸುಪ್ರೀಂ ಕೋರ್ಟ್ ವಿಧಾನಸಭೆ ಸ್ಪೀಕರ್‌ಗೆ ನೀಡಿದೆ. ಆದರೆ, ಈಗ ಬಿಜೆಪಿ ನಾಯಕರಾಗಿರುವ ನಮ್ಮ ಅಸೆಂಬ್ಲಿ ಸ್ಪೀಕರ್ (ರಾಹುಲ್ ನಾರ್ವೇಕರ್), ಈ ಹಿಂದೆ ಶಿವಸೇನೆ, ಕಾಂಗ್ರೆಸ್ ಮತ್ತು ಇತರ ಹಲವು ಪಕ್ಷಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ಏಕನಾಥ್ ಶಿಂಧೆಯ ‘ಅಪ್ರಾಮಾಣಿಕ ಬಣದ’ ವಕೀಲರಾಗಲು ಆಯ್ಕೆ ಮಾಡಿಕೊಂಡರು. ಹೀಗಿರುವಾಗ ನಮಗೆ ನ್ಯಾಯ ಸಿಗುವುದು ಹೇಗೆ’ ಎಂದು ಪ್ರಶ್ನಿಸಿದರು.

ತೀರ್ಪು ಪ್ರಕಟವಾದ ಕೂಡಲೇ ರಾವತ್ ಅವರು ಬಿಜೆಪಿಯನ್ನು ದೇಶದ್ರೋಹಿಗಳು ಎಂದು ಟೀಕಿಸಿದ್ದಾರೆ. ನಾರ್ವೇಕರ್ ಅವರ ತೀರ್ಪಿನ ವಿರುದ್ಧ ಶಿವಸೇನೆ (ಯುಬಿಟಿ) ಬಣ ಸುಪ್ರೀಂ ಕೋರ್ಟ್‌ಗೆ ಹೋಗಲಿದೆ ಎಂದು ಅವರು ಹೇಳಿದರು.

‘ಶಿವಸೇನೆ ಎಂದಿಗೂ ಮುಗಿಯುವುದಿಲ್ಲ ಮತ್ತು ಮಹಾರಾಷ್ಟ್ರದ ಜನರು ಈ ದೇಶದ್ರೋಹಿಗಳ ಸೇನೆಯನ್ನು ಒಪ್ಪಿಕೊಳ್ಳುವುದಿಲ್ಲ. ಇದು ಬಿಜೆಪಿಯ ಷಡ್ಯಂತ್ರ. ಮುಂದೊಂದು ದಿನ ಅವರು ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯನ್ನು ಮುಗಿಸುತ್ತಾರೆ ಎಂಬುದು ಅವರ ಕನಸಾಗಿತ್ತು. ಆದರೆ ಈ ಒಂದು ನಿರ್ಧಾರದಿಂದ ಶಿವಸೇನೆ ಮುಗಿಸಲು ಸಾಧ್ಯವಿಲ್ಲ’ ಎಂದರು.

ಸ್ಪೀಕರ್ ಆದೇಶವನ್ನು “ಪಿತೂರಿ” ಎಂದು ಹೇಳಿದ ಅವರು, ಇದು ಮರಾಠಿ ಸಮುದಾಯಕ್ಕೆ “ಕಪ್ಪು ದಿನ” ಎಂದರು. ‘ದಿಲ್ಲಿಯಿಂದ ಸ್ಪೀಕರ್ ಆದೇಶವನ್ನು ಸ್ವೀಕರಿಸಲಾಗಿದೆ, ನಾವು ಅದನ್ನು ಸ್ವೀಕರಿಸುವುದಿಲ್ಲ. ಈ ಆದೇಶ ಕಾನೂನು ಮತ್ತು ಸಂವಿಧಾನದ ಪ್ರಕಾರ ಅಲ್ಲ’ ಎಂದರು ಹೇಳಿದರು.

ಇದನ್ನೂ ಓದಿ; ಟಿಎಂಸಿ INDIA ಮೈತ್ರಿಕೂಟದ ಜೊತೆ ಇರಲಿದೆ: ಸೀಟು ಹಂಚಿಕೆ ವಿವಾದದ ಮಧ್ಯೆ ಮಮತಾ ಬ್ಯಾನರ್ಜಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...