Homeಮುಖಪುಟಪ್ರಜಾಪ್ರಭುತ್ವಕ್ಕೆ 'ಶ್ರದ್ಧಾಂಜಲಿ' ಸಲ್ಲಿಸಿದ ಶಿವಸೇನೆ ಸಂಸದ ಸಂಜಯ್ ರಾವತ್

ಪ್ರಜಾಪ್ರಭುತ್ವಕ್ಕೆ ‘ಶ್ರದ್ಧಾಂಜಲಿ’ ಸಲ್ಲಿಸಿದ ಶಿವಸೇನೆ ಸಂಸದ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪಕ್ಷವನ್ನು ನಿಜವಾದ ಶಿವಸೇನೆ ಎಂದು ಘೋಷಿಸಿ, ಎರಡೂ ಬಣದ ಶಾಸಕರನ್ನು ಅನರ್ಹಗೊಳಿಸುವ ಮನವಿಯನ್ನು ತಿರಸ್ಕರಿಸಿದ್ದಾರೆ. ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಗುರುವಾರ ಇದನ್ನು ಪ್ರಜಾಪ್ರಭುತ್ವದ ಸಾವು ಎಂದು ಕರೆದಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ’ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ, ಪ್ರಜಾಪ್ರಭುತ್ವ 1950-2023 ಶೋಕ: ಮಹಾರಾಷ್ಟ್ರ.’ ಎಂದು ಮರಾಠಿಯಲ್ಲಿ ಪ್ರಜಾಪ್ರಭುತ್ವ ಎಂದು ಬರೆದಿರುವ ಚೌಕಟ್ಟಿನ ಮೇಲೆ ಹಾರವನ್ನು ಹಾಕಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಬಾಳಾ ಠಾಕ್ರೆ ಅವರು ಸ್ಥಾಪಿಸಿದ ಪ್ರಾದೇಶಿಕ ಪಕ್ಷದ ಪ್ರಾಬಲ್ಯಕ್ಕಾಗಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ಬಣ ಮತ್ತು ಬಿಜೆಪಿ ನೇತೃತ್ವದ ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಬುಧವಾರ ಸಾಕ್ಷಿಯಾಗಿದೆ.

ಶಿವಸೇನೆಯ ಎರಡು ಬಣಗಳು ಸಲ್ಲಿಸಿರುವ ದೀರ್ಘಕಾಲದ ಅರ್ಜಿಗಳನ್ನು ಪರಿಹರಿಸುವಂತೆ ಸುಪ್ರೀಂ ಕೋರ್ಟ್ ಗಡುವು ನಿಗದಿಪಡಿಸಿದ ವಾರಗಳ ನಂತರ ನಾರ್ವೇಕರ್ ಅವರ ನಿರ್ಧಾರವು ಮಹಾರಾಷ್ಟ್ರ ವಿಧಾನಸಭೆ ರಚನೆಯ ಸ್ಥಿರತೆಯನ್ನು ಖಚಿತಪಡಿಸಿದ್ದು, ಶಿಂಧೆ ಅವರ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾವುತ್, ‘ನ್ಯಾಯವನ್ನು ಪೂರೈಸಲು ನ್ಯಾಯಮಂಡಳಿಯಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಸುಪ್ರೀಂ ಕೋರ್ಟ್ ವಿಧಾನಸಭೆ ಸ್ಪೀಕರ್‌ಗೆ ನೀಡಿದೆ. ಆದರೆ, ಈಗ ಬಿಜೆಪಿ ನಾಯಕರಾಗಿರುವ ನಮ್ಮ ಅಸೆಂಬ್ಲಿ ಸ್ಪೀಕರ್ (ರಾಹುಲ್ ನಾರ್ವೇಕರ್), ಈ ಹಿಂದೆ ಶಿವಸೇನೆ, ಕಾಂಗ್ರೆಸ್ ಮತ್ತು ಇತರ ಹಲವು ಪಕ್ಷಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ಏಕನಾಥ್ ಶಿಂಧೆಯ ‘ಅಪ್ರಾಮಾಣಿಕ ಬಣದ’ ವಕೀಲರಾಗಲು ಆಯ್ಕೆ ಮಾಡಿಕೊಂಡರು. ಹೀಗಿರುವಾಗ ನಮಗೆ ನ್ಯಾಯ ಸಿಗುವುದು ಹೇಗೆ’ ಎಂದು ಪ್ರಶ್ನಿಸಿದರು.

ತೀರ್ಪು ಪ್ರಕಟವಾದ ಕೂಡಲೇ ರಾವತ್ ಅವರು ಬಿಜೆಪಿಯನ್ನು ದೇಶದ್ರೋಹಿಗಳು ಎಂದು ಟೀಕಿಸಿದ್ದಾರೆ. ನಾರ್ವೇಕರ್ ಅವರ ತೀರ್ಪಿನ ವಿರುದ್ಧ ಶಿವಸೇನೆ (ಯುಬಿಟಿ) ಬಣ ಸುಪ್ರೀಂ ಕೋರ್ಟ್‌ಗೆ ಹೋಗಲಿದೆ ಎಂದು ಅವರು ಹೇಳಿದರು.

‘ಶಿವಸೇನೆ ಎಂದಿಗೂ ಮುಗಿಯುವುದಿಲ್ಲ ಮತ್ತು ಮಹಾರಾಷ್ಟ್ರದ ಜನರು ಈ ದೇಶದ್ರೋಹಿಗಳ ಸೇನೆಯನ್ನು ಒಪ್ಪಿಕೊಳ್ಳುವುದಿಲ್ಲ. ಇದು ಬಿಜೆಪಿಯ ಷಡ್ಯಂತ್ರ. ಮುಂದೊಂದು ದಿನ ಅವರು ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯನ್ನು ಮುಗಿಸುತ್ತಾರೆ ಎಂಬುದು ಅವರ ಕನಸಾಗಿತ್ತು. ಆದರೆ ಈ ಒಂದು ನಿರ್ಧಾರದಿಂದ ಶಿವಸೇನೆ ಮುಗಿಸಲು ಸಾಧ್ಯವಿಲ್ಲ’ ಎಂದರು.

ಸ್ಪೀಕರ್ ಆದೇಶವನ್ನು “ಪಿತೂರಿ” ಎಂದು ಹೇಳಿದ ಅವರು, ಇದು ಮರಾಠಿ ಸಮುದಾಯಕ್ಕೆ “ಕಪ್ಪು ದಿನ” ಎಂದರು. ‘ದಿಲ್ಲಿಯಿಂದ ಸ್ಪೀಕರ್ ಆದೇಶವನ್ನು ಸ್ವೀಕರಿಸಲಾಗಿದೆ, ನಾವು ಅದನ್ನು ಸ್ವೀಕರಿಸುವುದಿಲ್ಲ. ಈ ಆದೇಶ ಕಾನೂನು ಮತ್ತು ಸಂವಿಧಾನದ ಪ್ರಕಾರ ಅಲ್ಲ’ ಎಂದರು ಹೇಳಿದರು.

ಇದನ್ನೂ ಓದಿ; ಟಿಎಂಸಿ INDIA ಮೈತ್ರಿಕೂಟದ ಜೊತೆ ಇರಲಿದೆ: ಸೀಟು ಹಂಚಿಕೆ ವಿವಾದದ ಮಧ್ಯೆ ಮಮತಾ ಬ್ಯಾನರ್ಜಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....