Homeಮುಖಪುಟಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವಿಡಿಯೋ ಟ್ವೀಟ್ ಮಾಡಿದ ಶಿವಸೇನೆ ಸಂಸದ!

ಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವಿಡಿಯೋ ಟ್ವೀಟ್ ಮಾಡಿದ ಶಿವಸೇನೆ ಸಂಸದ!

- Advertisement -
- Advertisement -

ಬಾಲಿವುಡ್ ನಟ ಶಾರುಖ್ ಖಾನ್‌ ಪುತ್ರ ಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವೀಡಿಯೊವೊಂದನ್ನು ಶಿವಸೇನೆ ಸಂಸದ ಸಂಜಯ್‌‌ ರಾವತ್ ಹಂಚಿಕೊಂಡಿದ್ದು, ಡ್ರಗ್ಸ್ ಪ್ರಕರಣದ ಕುರಿತು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, “ಆಘಾತಕಾರಿ” ಎಂದು ಕರೆದಿದ್ದಾರೆ. ಎನ್‌ಸಿಬಿ ಅವರು ಆರ್ಯನ್ ಡ್ರಗ್ಸ್ ಪ್ರಕರಣದ ಸಾಕ್ಷಿಗಳನ್ನು ಖಾಲಿ ಕಾಗದಕ್ಕೆ ಸಹಿ ಹಾಕಿಸಿರುವುದು ಅಘಾತಕಾರಿಯಾಗಿದೆ ಎಂದು ಆರೋಪಿಸಿದ್ದಾರೆ.

“ಪ್ರಕರಣವು ಮಹಾರಾಷ್ಟ್ರದ ಹೆಸರನ್ನು ಹಾಳುಮಾಡುವ ಪ್ರಯತ್ನವಾಗಿದೆ” ಎಂದು ಸಂಜಯ್ ರಾವತ್‌ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಆರ್ಯನ್‌ ಖಾನ್‌ಗೆ ಡ್ರಗ್ಸ್ ಪೂರೈಕೆ ಆರೋಪ ನಿರಾಕರಿಸಿದ ನಟಿ ಅನನ್ಯ ಪಾಂಡೆ: ವರದಿ

ಸಂಜಯ್ ರಾವತ್‌ ಹೊಸ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು, “ ಎನ್‌ಸಿಬಿ ಅವರು ಆರ್ಯನ್ ಡ್ರಗ್ಸ್ ಪ್ರಕರಣದ ಸಾಕ್ಷಿಗಳನ್ನು ಖಾಲಿ ಕಾಗದಕ್ಕೆ ಸಹಿ ಹಾಕಿಸಿರುವುದು ಅಘಾತಕಾರಿಯಾಗಿದೆ. ಅವರಿಗೆ ಭಾರೀ ಹಣದ ಬೇಡಿಕೆ ನೀಡಲಾಗಿತ್ತು ಎಂದು ವರದಿಗಳಿವೆ. ಸಿಎಂ ಉದ್ಧವ್ ಠಾಕ್ರೆ ಈ ಪ್ರಕರಣ ಮಹಾರಾಷ್ಟ್ರವನ್ನು ಅವಹೇಳನ ಮಾಡಲು ಮಾಡಲಾಗಿದೆ ಎಂದು ಹೇಳಿದರು. ಇದು ನಿಜವಾಗುತ್ತಿರುವಂತೆ ತೋರುತ್ತಿದ್ದು, ಮಹಾರಾಷ್ಟ್ರದ ಗೃಹಮಂತ್ರಿಗಳೆ ಪೋಲಿಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ: ಪೇಪರ್‌ವರ್ಕ್‌ಗಾಗಿ ನಟ ಶಾರುಖ್ ಖಾನ್ ಮನೆಗೆ ಎನ್‌ಸಿಬಿತಲೆಮರೆಸಿಕೊಂಡಿರುವ ಕೆಪಿ ಗೋಸಾವಿಯ ಸಹಾಯಕ ಪ್ರಭಾಕರ್ ಸೈಲ್, ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಅಧಿಕಾರಿಗಳು ಖಾಲಿ ಪಂಚನಾಮಕ್ಕೆ ಸಹಿ ಹಾಕಿಸಿದ್ದರು ಎಂದು ಆರೋಪಿಸಿದ್ದಾರೆ. ಇದರ ಬೆನ್ನಿಗೆ ಸಂಜಯ್ ರಾವತ್ ಈ ಬಗ್ಗೆ ಆರೋಪಿಸಿದ್ದಾರೆ.

“ನಾನು ಗೋಸಾವಿಯ ಅಂಗರಕ್ಷಕನಾಗಿ ಕೆಲಸ ಮಾಡುತ್ತಿದ್ದೆ. ಎನ್‌ಸಿಬಿ ದಾಳಿ ನಡೆಸಿದ ರಾತ್ರಿ ತಾನು ಗೋಸಾವಿಯ ಜೊತೆಗಿದ್ದೆ. ಅಧಿಕಾರಿಗಳು ಪಂಚನಾಮವಾಗಿ ಖಾಲಿ ಕಾಗದಗಳಿಗೆ ಸಹಿ ಹಾಕುವಂತೆ ಮಾಡಿದ್ದಾರೆ” ಎಂದು ಪ್ರಭಾಕರ್‌ ಸೈಲ್ ಹೇಳಿದ್ದಾರೆ ಎಂದು ಇಂಡಿಯಾ ಟುಡೆ ಹೇಳಿದ್ದಾರೆ.

 

ಕೆಪಿ ಗೋಸಾವಿ ‘ಅನುಮಾನಾಸ್ಪದವಾಗಿ’ ನಾಪತ್ತೆಯಾದ ನಂತರ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ಸೈಲ್ ಆರೋಪಿಸಿದ್ದಾರೆ.

ಇದೇ ವೇಳೆ ಪ್ರಭಾಕರ್ ಸೈಲ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಮೀರ್ ವಾಂಖೆಡೆ, ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದರು.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...