Homeಮುಖಪುಟಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

"ಮಹಾ ವಿಕಾಸ್ ಅಘಾಡಿ ಒಟ್ಟು ಶಕ್ತಿಯನ್ನು ನಾವು ತಪ್ಪಾಗಿ ಲೆಕ್ಕ ಹಾಕಿದ್ದೆವು" ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

- Advertisement -
- Advertisement -

ಕಳೆದ ವರ್ಷ ಶಿವಸೇನೆಯೊಂದಿಗಿನ ಗುದ್ದಾಟದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಮಹಾರಾಷ್ಟ್ರದ ವಿಧಾನಪರಿಷತ್ತಿನ ಶಿಕ್ಷಕ- ಪದವೀಧರ ಕ್ಷೇತ್ರದ 6 ಸ್ಥಾನಗಳಲ್ಲಿ ಆಡಳಿತರೂಢ ಮಹಾವಿಕಾಸ್ ಅಘಾಡಿ 4 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಆಡಳಿತಾರೂಢ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಒಕ್ಕೂಟ ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಉಳಿದ ಒಂದು ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಪಡೆದುಕೊಂಡಿದ್ದಾರೆ. ಈ ವಾರದ ಆರಂಭದಲ್ಲಿ ಮತದಾನ ನಡೆದಿತ್ತು.

ಆಡಳಿತರೂಢ ಮಹಾವಿಕಾಸ್ ಅಘಾಡಿ ಮೈತ್ರಿ ನಾಲ್ಕು ಸ್ಥಾನ ಗಳಿಸಿದ್ದರೂ ಕೂಡ, ಶಿವಸೇನೆ ಒಂದೇ ಒಂದು ಸ್ಥಾನವನ್ನು ಗೆದಿಲ್ಲ. ಶಿವಸೇನೆಯ ಏಕೈಕ ಅಭ್ಯರ್ಥಿ ಅಮರಾವತಿಯಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲಿಯೂ ಗೆಲುವು ಸಾಧಿಸಿವೆ.

ಇದನ್ನೂ ಓದಿ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ಬಿಜೆಪಿ ತನ್ನ ಭದ್ರಕೋಟೆಗಳೆಂದು ಗ್ರಹಿಸಿದ್ದ ಪದವೀಧರ ಕ್ಷೇತ್ರಗಳಲ್ಲಿ ಸೋತಿದೆ. ಇದರ ದೊಡ್ಡ ನಷ್ಟವೆಂದರೆ ಪಕ್ಷದ ಭದ್ರಕೋಟೆಯಾದ ನಾಗ್ಪುರದಲ್ಲಿ ಸೋತಿರುವುದು. ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ತಂದೆ ಗಂಗಾಧರ್ ರಾವ್ ಫಡ್ನವೀಸ್ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

1989 ರಲ್ಲಿ ಮೊದಲ ಬಾರಿಗೆ ಈ ಕ್ಷೇತ್ರವನ್ನು ಗೆದ್ದಿದ್ದ ಗಡ್ಕರಿ, 2014 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮುನ್ನ ಇಲ್ಲಿಂದಲೇ ನಾಲ್ಕು ಬಾರಿ ವಿಜಯ ಸಾಧಿಸಿದ್ದರು. ಆ ಗೆಲುವೇ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

ದೇವೇಂದ್ರ ಫಡ್ನವೀಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಸೇರಿದಂತೆ ಬಿಜೆಪಿ ನಾಯಕರು ಪುಣೆಯಲ್ಲಿ ವ್ಯಾಪಕವಾಗಿ ಪ್ರಚಾರ ನಡೆಸಿದ್ದರು, ಆದರೂ ಅಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ಗೆದ್ದಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ನಮ್ಮ ಲೆಕ್ಕಾಚಾರಕ್ಕೆ ಅನುಗುಣವಾಗಿ ಫಲಿತಾಂಶ ಬಂದಿಲ್ಲ ಎಂದಿದ್ದಾರೆ.

“ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶಗಳು ನಮ್ಮ ನಿರೀಕ್ಷೆಯಂತೆ ಬಂದಿಲ್ಲ. ನಾವು ಹೆಚ್ಚಿನ ಸ್ಥಾನಗಳನ್ನು ನಿರೀಕ್ಷಿಸುತ್ತಿದ್ದೇವು. ಆದರೆ ಒಂದನ್ನು ಮಾತ್ರ ಗೆದ್ದಿದ್ದೇವೆ. ಮೂರು ಪಕ್ಷಗಳ (ಮಹಾ ವಿಕಾಸ್ ಅಘಾಡಿ) ಒಟ್ಟು ಶಕ್ತಿಯನ್ನು ನಾವು ತಪ್ಪಾಗಿ ಲೆಕ್ಕ ಹಾಕಿದ್ದೇವೆ” ಎಂದು ಫಡ್ನವೀಸ್ ಹೇಳಿದ್ದಾರೆ.

ಸೈದ್ಧಾಂತಿಕವಾಗಿ ವಿರುದ್ಧವಾಗಿರುವ ಪಕ್ಷಗಳ ಮಹಾ ವಿಕಾಸ್ ಅಘಾಡಿಯನ್ನು ಬಿಜೆಪಿ ಅಸ್ಥಿರ ಘಟಕವೆಂದು ಪದೇ ಪದೇ ಅಪಹಾಸ್ಯ ಮಾಡಿತ್ತು. ಈ ಒಕ್ಕೂಟಕ್ಕೆ ಇದು ಮೊದಲ ಚುನಾವಣಾ ಪರೀಕ್ಷೆಯಾಗಿದ್ದು, ಇದರಲ್ಲಿ ಮಹಾ ವಿಕಾಸ್ ಅಘಾಡಿ ಗೆಲುವು ಸಾಧಿಸಿದೆ.


ಇದನ್ನೂ ಓದಿ: ಇಂದು ಮಹಾರಾಷ್ಟ್ರದ 3 ದಿನದ ಬಿಜೆಪಿ ಸರ್ಕಾರಕ್ಕೆ ಮೊದಲ ಪುಣ್ಯತಿಥಿ: ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...