Homeಮುಖಪುಟಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

"ಮಹಾ ವಿಕಾಸ್ ಅಘಾಡಿ ಒಟ್ಟು ಶಕ್ತಿಯನ್ನು ನಾವು ತಪ್ಪಾಗಿ ಲೆಕ್ಕ ಹಾಕಿದ್ದೆವು" ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

- Advertisement -
- Advertisement -

ಕಳೆದ ವರ್ಷ ಶಿವಸೇನೆಯೊಂದಿಗಿನ ಗುದ್ದಾಟದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಮಹಾರಾಷ್ಟ್ರದ ವಿಧಾನಪರಿಷತ್ತಿನ ಶಿಕ್ಷಕ- ಪದವೀಧರ ಕ್ಷೇತ್ರದ 6 ಸ್ಥಾನಗಳಲ್ಲಿ ಆಡಳಿತರೂಢ ಮಹಾವಿಕಾಸ್ ಅಘಾಡಿ 4 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಆಡಳಿತಾರೂಢ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಒಕ್ಕೂಟ ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಉಳಿದ ಒಂದು ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಪಡೆದುಕೊಂಡಿದ್ದಾರೆ. ಈ ವಾರದ ಆರಂಭದಲ್ಲಿ ಮತದಾನ ನಡೆದಿತ್ತು.

ಆಡಳಿತರೂಢ ಮಹಾವಿಕಾಸ್ ಅಘಾಡಿ ಮೈತ್ರಿ ನಾಲ್ಕು ಸ್ಥಾನ ಗಳಿಸಿದ್ದರೂ ಕೂಡ, ಶಿವಸೇನೆ ಒಂದೇ ಒಂದು ಸ್ಥಾನವನ್ನು ಗೆದಿಲ್ಲ. ಶಿವಸೇನೆಯ ಏಕೈಕ ಅಭ್ಯರ್ಥಿ ಅಮರಾವತಿಯಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲಿಯೂ ಗೆಲುವು ಸಾಧಿಸಿವೆ.

ಇದನ್ನೂ ಓದಿ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ಬಿಜೆಪಿ ತನ್ನ ಭದ್ರಕೋಟೆಗಳೆಂದು ಗ್ರಹಿಸಿದ್ದ ಪದವೀಧರ ಕ್ಷೇತ್ರಗಳಲ್ಲಿ ಸೋತಿದೆ. ಇದರ ದೊಡ್ಡ ನಷ್ಟವೆಂದರೆ ಪಕ್ಷದ ಭದ್ರಕೋಟೆಯಾದ ನಾಗ್ಪುರದಲ್ಲಿ ಸೋತಿರುವುದು. ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ತಂದೆ ಗಂಗಾಧರ್ ರಾವ್ ಫಡ್ನವೀಸ್ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

1989 ರಲ್ಲಿ ಮೊದಲ ಬಾರಿಗೆ ಈ ಕ್ಷೇತ್ರವನ್ನು ಗೆದ್ದಿದ್ದ ಗಡ್ಕರಿ, 2014 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮುನ್ನ ಇಲ್ಲಿಂದಲೇ ನಾಲ್ಕು ಬಾರಿ ವಿಜಯ ಸಾಧಿಸಿದ್ದರು. ಆ ಗೆಲುವೇ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

ದೇವೇಂದ್ರ ಫಡ್ನವೀಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಸೇರಿದಂತೆ ಬಿಜೆಪಿ ನಾಯಕರು ಪುಣೆಯಲ್ಲಿ ವ್ಯಾಪಕವಾಗಿ ಪ್ರಚಾರ ನಡೆಸಿದ್ದರು, ಆದರೂ ಅಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ಗೆದ್ದಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ನಮ್ಮ ಲೆಕ್ಕಾಚಾರಕ್ಕೆ ಅನುಗುಣವಾಗಿ ಫಲಿತಾಂಶ ಬಂದಿಲ್ಲ ಎಂದಿದ್ದಾರೆ.

“ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶಗಳು ನಮ್ಮ ನಿರೀಕ್ಷೆಯಂತೆ ಬಂದಿಲ್ಲ. ನಾವು ಹೆಚ್ಚಿನ ಸ್ಥಾನಗಳನ್ನು ನಿರೀಕ್ಷಿಸುತ್ತಿದ್ದೇವು. ಆದರೆ ಒಂದನ್ನು ಮಾತ್ರ ಗೆದ್ದಿದ್ದೇವೆ. ಮೂರು ಪಕ್ಷಗಳ (ಮಹಾ ವಿಕಾಸ್ ಅಘಾಡಿ) ಒಟ್ಟು ಶಕ್ತಿಯನ್ನು ನಾವು ತಪ್ಪಾಗಿ ಲೆಕ್ಕ ಹಾಕಿದ್ದೇವೆ” ಎಂದು ಫಡ್ನವೀಸ್ ಹೇಳಿದ್ದಾರೆ.

ಸೈದ್ಧಾಂತಿಕವಾಗಿ ವಿರುದ್ಧವಾಗಿರುವ ಪಕ್ಷಗಳ ಮಹಾ ವಿಕಾಸ್ ಅಘಾಡಿಯನ್ನು ಬಿಜೆಪಿ ಅಸ್ಥಿರ ಘಟಕವೆಂದು ಪದೇ ಪದೇ ಅಪಹಾಸ್ಯ ಮಾಡಿತ್ತು. ಈ ಒಕ್ಕೂಟಕ್ಕೆ ಇದು ಮೊದಲ ಚುನಾವಣಾ ಪರೀಕ್ಷೆಯಾಗಿದ್ದು, ಇದರಲ್ಲಿ ಮಹಾ ವಿಕಾಸ್ ಅಘಾಡಿ ಗೆಲುವು ಸಾಧಿಸಿದೆ.


ಇದನ್ನೂ ಓದಿ: ಇಂದು ಮಹಾರಾಷ್ಟ್ರದ 3 ದಿನದ ಬಿಜೆಪಿ ಸರ್ಕಾರಕ್ಕೆ ಮೊದಲ ಪುಣ್ಯತಿಥಿ: ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...