HomeUncategorizedರಾಷ್ಟ್ರಪತಿ ಆಡಳಿತ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ ನಿರ್ಧಾರದಿಂದ ಹಿಂದೆ ಸರಿದ ಶಿವಸೇನೆ..!

ರಾಷ್ಟ್ರಪತಿ ಆಡಳಿತ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ ನಿರ್ಧಾರದಿಂದ ಹಿಂದೆ ಸರಿದ ಶಿವಸೇನೆ..!

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆಯ ಅವಧಿ ವಿಸ್ತರಣೆಗೆ ಮನವಿ ಮಾಡಿದ್ದರೂ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಗಣನೆಗೆ ತೆಗೆದುಕೊಳ್ಳದೇ ರಾಷ್ಟ್ರಪತಿ ಆಡಳಿತ ಹೇರಿದನ್ನು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ನಿರ್ಧರಿಸಿತ್ತು. ಆದರೆ ಇಂದು ಸುಪ್ರೀಂಗೆ ಹೋಗುವ ನಿರ್ಧಾರದಿಂದ ಹಿಂದೆ ಸರಿದಿದೆ.

ರಾಜ್ಯಪಾಲರ ನಡೆಯ ವಿರುದ್ಧ ಸುಪ್ರೀಂಕೋರ್ಟ್‌‌ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದ ಶಿವಸೇನೆ ಏಕಾಏಕಿ ತನ್ನ ಹೆಜ್ಜೆಯನ್ನು ಹಿಂದಕ್ಕಿಟ್ಟಿದೆ. ಇನ್ನೂ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಬೆಂಬಲ ಹಾಗೂ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಮೊದಲು ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಮುಂದಿಟ್ಟಿರುವ ಮೈತ್ರಿ ಮನವಿ ಯಶಸ್ವಿಯಾಗಲಿ. ನಂತರ ರಾಜ್ಯಪಾಲರು ಅವಧಿ ವಿಸ್ತರಿಸದಿರುವ ಬಗ್ಗೆ ಸುಪ್ರೀಂಕೋರ್ಟ್‌‌ಗೆ ಮೊರೆ ಹೋಗುವುದಾಗಿ ಶಿವಸೇನೆ ತಿಳಿಸಿದೆ.

ಇದನ್ನೂ ಓದಿ: ಮೈತ್ರಿ ಕಸರತ್ತು ಕೈ ಬಿಡದ ಶಿವಸೇನೆ: ಸಿಎಂ ಹುದ್ದೆ ಹಂಚಿಕೆಗೆ ಎನ್‌ಸಿಪಿ ಷರತ್ತು.

ಅಲ್ಲದೇ ಶಿವಸೇನೆ ಪಕ್ಷದ ವಕೀಲರು ಸಹ ಮೊದಲು ಮೈತ್ರಿ ಬಗ್ಗೆ ನಿರ್ಧಾರವಾಗಲಿ. ಅನಂತರ ತುರ್ತು ಅರ್ಜಿ ವಿಚಾರಣೆಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯ ಆದೇಶ ಪ್ರಶ್ನಿಸಲು ಹೊಸ ಅರ್ಜಿ ಸಲ್ಲಿಸುವುದಾಗಿ ಸೇನಾ ವಕೀಲ ಸುನೀಲ್ ಫರ್ನಾಂಡಿಸ್‌ ತಿಳಿಸಿದ್ದಾರೆ.

ಹೊಸ ಅರ್ಜಿಯನ್ನು ಯಾವಾಗ ಸಲ್ಲಿಸಬೇಕು ಎಂಬ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಅರ್ಜಿ ತುರ್ತು ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರ ಬಳಿ ಮನವಿ ಮಾಡುವ ಮೊದಲು ಪಕ್ಷಗಳ ನಿಲುವು ದೃಢವಾಗಲಿ ಎಂದು ಫರ್ನಾಂಡಿಸ್‌ ಸಲಹೆ ನೀಡಿದ್ದಾರೆ.

ಶಿವಸೇನೆಯ ಉದ್ಧವ್‌ ಠಾಕ್ರೆ ಅವರಿಗೆ ಮೈತ್ರಿ ರಚನೆ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಅಲ್ಲದೇ ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಇನ್ನೂ ಸ್ವಲ್ಪ ಕಾಲಾವಕಾಶ ಬೇಕೆಂದು ಹೇಳಿವೆ. ಇನ್ನು ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ೪೮ ಗಂಟೆಗಳ ಕಾಲಾವಕಾಶ ನೀಡಿದ್ದರು. ಆದರೆ ಶಿವಸೇನೆಗೆ ಕೇವಲ ೨೪ ಗಂಟೆ ಅವಕಾಶ ನೀಡಿದ್ದರು. ಅವಧಿ ವಿಸ್ತರಣೆಗೆ ಮನವಿ ಮಾಡಿದ್ದರೂ ಗಣನೆಗೆ ತೆಗೆದುಕೊಳ್ಳದೆ, ತಿರಸ್ಕರಿಸಿದ್ದಾರೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...