Homeಮುಖಪುಟಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ...

ಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ ಶಿಂಧೆ ಬಣ

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂಬ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರ ನಿಲುವು ಮತ್ತು ಸಿಎಂ ಶಿಂಧೆ ಸೇರಿದಂತೆ ಅವರ ಬಣದ 38 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಉದ್ಧವ್‌ ಠಾಕ್ರೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಈ ಬೆನ್ನಲ್ಲೇ ಶಿಂಧೆ ಬಣ ಕೂಡ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ್ದು, ಉದ್ಧವ್‌ ಬಣದ 14 ಶಾಸಕರನ್ನು ಅನರ್ಹಗೊಳಿಸದಿರುವ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿದೆ.

ಉದ್ಧವ್ ಬಣಕ್ಕೆ ಸೇರಿದ ಹದಿನಾಲ್ಕು ಶಾಸಕರ ವಿರುದ್ಧ ಸಲ್ಲಿಸಿದ್ದ ಅನರ್ಹತೆ ಅರ್ಜಿಗಳನ್ನು ಮಹಾರಾಷ್ಟ್ರ ಸ್ಪೀಕರ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಶಿವಸೇನೆ ಮುಖ್ಯ ಸಚೇತಕರೂ ಆಗಿರುವ ಏಕನಾಥ್ ಶಿಂಧೆ ಬಣದ ಸದಸ್ಯ ಭರತ್ ಗೋಗಾವಲೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಉದ್ಧವ್ ಠಾಕ್ರೆ ಬಣದ ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಅಲ್ಲದೆ ಶಿವಸೇನೆ ಪಕ್ಷದ ಸದಸ್ಯತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದ್ದಾರೆ ಎಂದು ಗೋಗಾವಲೆ ತಮ್ಮ ಅರ್ಜಿಯಲ್ಲಿ ಆಪಾದಿಸಿದ್ದಾರೆ.

ಜುಲೈ 4, 2023ರಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತ ಯಾಚನೆ ಸಮಯದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಸೇರಿಕೊಂಡು ಠಾಕ್ರೆ ಬಣದ ಶಾಸಕರು ಶಿವಸೇನೆ ಸರ್ಕಾರದ ವಿರುದ್ಧ ಮತ ಚಲಾಯಿಸಿದ್ದಾರೆ. ಈ ಅಂಶವನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಶಿಂಧೆ ಬಣ ಹೇಳಿಕೊಂಡಿದೆ.

ಪ್ರಕರಣದ ಹಿನ್ನೆಲೆ :

ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಜೊತೆಗೂಡಿ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಿತ್ತು. ಉದ್ದವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಸುಸೂತ್ರವಾಗಿ ನಡೆಯುತ್ತಿದ್ದಾಗ, 2022 ಜೂನ್ ತಿಂಗಳಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಶಾಸಕರು ಉದ್ದವ್ ಆಡಳಿತದ ವಿರುದ್ದ ದಿಢೀರ್ ಬಂಡೆದಿದ್ದರು. ಬಳಿಕ ಕೆಲ ದಿನಗಳ ರಾಜಕೀಯ ಮೇಲಾಟದ ಬಳಿಕ ಶಿಂಧೆ ಬಣ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿತ್ತು. ಶಿವಸೇನೆಯ ಒಟ್ಟು 55 ಶಾಸಕರ ಪೈಕಿ ಸುಮಾರು 37 ಮಂದಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದರು. ಈ ಮೂಲಕ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು.

ಬಳಿಕ, ಉದ್ದವ್ ಠಾಕ್ರೆ ಬಣ ಸಿಎಂ ಏಕನಾಥ್ ಶಿಂಧೆ ಸೇರಿದಂತೆ ಅವರ ಬಣದ ಶಾಸಕರನ್ನು ಅಮಾನತುಗೊಳಿಸುವಂತೆ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ್ದರು. ಸ್ಪೀಕರ್ ರಾಹುಲ್ ನಾರ್ವೇಕರ್‌ ಅರ್ಜಿ ಕುರಿತು ಯಾವುದೇ ತೀರ್ಮಾನ ಕೈಗೊಳ್ಳದೆ ಒಂದು ವರ್ಷ ವಿಳಂಬ ಮಾಡಿದ್ದರು. ಈ ಹಿನ್ನೆಲೆ ಉದ್ದವ್ ಬಣ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡ ಬಳಿಕ, ಜನವರಿ 10,2024ರಂದು ಸ್ಪೀಕರ್ ನಾರ್ವೇಕರ್ ಶಿಂಧೆ ಬಣದ ಪರ ನಿಲುವು ತಾಳಿದ್ದರು.

ಶಿಂಧೆ ಬಣವು 55 ಶಾಸಕರ ಪೈಕಿ 37 ಮಂದಿಯ ಬಹುಮತ ಹೊಂದಿದ ಪರಿಣಾಮ ಉದ್ದವ್ ಬಣದ ಸುನಿಲ್ ಪ್ರಭು ಅವರು ಪಕ್ಷದ ವಿಪ್ ಅಲ್ಲ ಎಂದು ಸ್ಪೀಕರ್‌ ನಾರ್ವೇಕರ್‌ ಜನವರಿ 10ರಂದು ನಿರ್ಧರಿಸಿದ್ದರು. ಹೀಗಾಗಿ ಶಿವಸೇನೆ ಶಾಸಕಾಂಗ ಪಕ್ಷದ ಸಭೆ ಕರೆಯಲು ಸುನಿಲ್‌ ಪ್ರಭು ಅವರಿಗೆ ಯಾವುದೇ ಅಧಿಕಾರ ಇಲ್ಲ ಮತ್ತು ಸಭೆ ಕರೆ ನೀಡುವ ವಾಟ್ಸಾಪ್‌ ಸಂದೇಶವನ್ನು 12 ಗಂಟೆಗಳಷ್ಟು ಕಡಿಮೆ ಅವಧಿಯಲ್ಲಿ ಕಳಿಸಲಾಗಿದೆ ಎಂದು ಒತ್ತಿ ಹೇಳಿದ್ದರು.

ಇದಲ್ಲದೆ, ಭರತ್ ಗೋಗಾವಲೆ ಅವರನ್ನು ಪಕ್ಷದ ವಿಪ್ ಆಗಿ ನೇಮಿಸಿರುವುದು ಮತ್ತು ಏಕನಾಥ್ ಶಿಂಧೆ ಅವರು ನಾಯಕರಾಗಿ ಆಯ್ಕೆಯಾಗಿರುವುದು ಸಿಂಧುವಾಗಿದೆ ಎಂದು ಎಂದು ಅವರು ತೀರ್ಪು ನೀಡಿದ್ದರು.

ಇದನ್ನೂ ಓದಿ : ಮಥುರಾ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...