Homeಮುಖಪುಟಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ...

ಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ ಶಿಂಧೆ ಬಣ

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂಬ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರ ನಿಲುವು ಮತ್ತು ಸಿಎಂ ಶಿಂಧೆ ಸೇರಿದಂತೆ ಅವರ ಬಣದ 38 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಉದ್ಧವ್‌ ಠಾಕ್ರೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಈ ಬೆನ್ನಲ್ಲೇ ಶಿಂಧೆ ಬಣ ಕೂಡ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ್ದು, ಉದ್ಧವ್‌ ಬಣದ 14 ಶಾಸಕರನ್ನು ಅನರ್ಹಗೊಳಿಸದಿರುವ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿದೆ.

ಉದ್ಧವ್ ಬಣಕ್ಕೆ ಸೇರಿದ ಹದಿನಾಲ್ಕು ಶಾಸಕರ ವಿರುದ್ಧ ಸಲ್ಲಿಸಿದ್ದ ಅನರ್ಹತೆ ಅರ್ಜಿಗಳನ್ನು ಮಹಾರಾಷ್ಟ್ರ ಸ್ಪೀಕರ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಶಿವಸೇನೆ ಮುಖ್ಯ ಸಚೇತಕರೂ ಆಗಿರುವ ಏಕನಾಥ್ ಶಿಂಧೆ ಬಣದ ಸದಸ್ಯ ಭರತ್ ಗೋಗಾವಲೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಉದ್ಧವ್ ಠಾಕ್ರೆ ಬಣದ ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಅಲ್ಲದೆ ಶಿವಸೇನೆ ಪಕ್ಷದ ಸದಸ್ಯತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದ್ದಾರೆ ಎಂದು ಗೋಗಾವಲೆ ತಮ್ಮ ಅರ್ಜಿಯಲ್ಲಿ ಆಪಾದಿಸಿದ್ದಾರೆ.

ಜುಲೈ 4, 2023ರಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತ ಯಾಚನೆ ಸಮಯದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಸೇರಿಕೊಂಡು ಠಾಕ್ರೆ ಬಣದ ಶಾಸಕರು ಶಿವಸೇನೆ ಸರ್ಕಾರದ ವಿರುದ್ಧ ಮತ ಚಲಾಯಿಸಿದ್ದಾರೆ. ಈ ಅಂಶವನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಶಿಂಧೆ ಬಣ ಹೇಳಿಕೊಂಡಿದೆ.

ಪ್ರಕರಣದ ಹಿನ್ನೆಲೆ :

ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಜೊತೆಗೂಡಿ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಿತ್ತು. ಉದ್ದವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಸುಸೂತ್ರವಾಗಿ ನಡೆಯುತ್ತಿದ್ದಾಗ, 2022 ಜೂನ್ ತಿಂಗಳಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಶಾಸಕರು ಉದ್ದವ್ ಆಡಳಿತದ ವಿರುದ್ದ ದಿಢೀರ್ ಬಂಡೆದಿದ್ದರು. ಬಳಿಕ ಕೆಲ ದಿನಗಳ ರಾಜಕೀಯ ಮೇಲಾಟದ ಬಳಿಕ ಶಿಂಧೆ ಬಣ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿತ್ತು. ಶಿವಸೇನೆಯ ಒಟ್ಟು 55 ಶಾಸಕರ ಪೈಕಿ ಸುಮಾರು 37 ಮಂದಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದರು. ಈ ಮೂಲಕ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು.

ಬಳಿಕ, ಉದ್ದವ್ ಠಾಕ್ರೆ ಬಣ ಸಿಎಂ ಏಕನಾಥ್ ಶಿಂಧೆ ಸೇರಿದಂತೆ ಅವರ ಬಣದ ಶಾಸಕರನ್ನು ಅಮಾನತುಗೊಳಿಸುವಂತೆ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ್ದರು. ಸ್ಪೀಕರ್ ರಾಹುಲ್ ನಾರ್ವೇಕರ್‌ ಅರ್ಜಿ ಕುರಿತು ಯಾವುದೇ ತೀರ್ಮಾನ ಕೈಗೊಳ್ಳದೆ ಒಂದು ವರ್ಷ ವಿಳಂಬ ಮಾಡಿದ್ದರು. ಈ ಹಿನ್ನೆಲೆ ಉದ್ದವ್ ಬಣ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡ ಬಳಿಕ, ಜನವರಿ 10,2024ರಂದು ಸ್ಪೀಕರ್ ನಾರ್ವೇಕರ್ ಶಿಂಧೆ ಬಣದ ಪರ ನಿಲುವು ತಾಳಿದ್ದರು.

ಶಿಂಧೆ ಬಣವು 55 ಶಾಸಕರ ಪೈಕಿ 37 ಮಂದಿಯ ಬಹುಮತ ಹೊಂದಿದ ಪರಿಣಾಮ ಉದ್ದವ್ ಬಣದ ಸುನಿಲ್ ಪ್ರಭು ಅವರು ಪಕ್ಷದ ವಿಪ್ ಅಲ್ಲ ಎಂದು ಸ್ಪೀಕರ್‌ ನಾರ್ವೇಕರ್‌ ಜನವರಿ 10ರಂದು ನಿರ್ಧರಿಸಿದ್ದರು. ಹೀಗಾಗಿ ಶಿವಸೇನೆ ಶಾಸಕಾಂಗ ಪಕ್ಷದ ಸಭೆ ಕರೆಯಲು ಸುನಿಲ್‌ ಪ್ರಭು ಅವರಿಗೆ ಯಾವುದೇ ಅಧಿಕಾರ ಇಲ್ಲ ಮತ್ತು ಸಭೆ ಕರೆ ನೀಡುವ ವಾಟ್ಸಾಪ್‌ ಸಂದೇಶವನ್ನು 12 ಗಂಟೆಗಳಷ್ಟು ಕಡಿಮೆ ಅವಧಿಯಲ್ಲಿ ಕಳಿಸಲಾಗಿದೆ ಎಂದು ಒತ್ತಿ ಹೇಳಿದ್ದರು.

ಇದಲ್ಲದೆ, ಭರತ್ ಗೋಗಾವಲೆ ಅವರನ್ನು ಪಕ್ಷದ ವಿಪ್ ಆಗಿ ನೇಮಿಸಿರುವುದು ಮತ್ತು ಏಕನಾಥ್ ಶಿಂಧೆ ಅವರು ನಾಯಕರಾಗಿ ಆಯ್ಕೆಯಾಗಿರುವುದು ಸಿಂಧುವಾಗಿದೆ ಎಂದು ಎಂದು ಅವರು ತೀರ್ಪು ನೀಡಿದ್ದರು.

ಇದನ್ನೂ ಓದಿ : ಮಥುರಾ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...