Homeಮುಖಪುಟಬಿಜೆಪಿ ಜತೆಗಿನ 30 ವರ್ಷಗಳ ಮೈತ್ರಿಗೆ ಗುಡ್ ಬೈ ಹೇಳಿದ ಶಿವಸೇನೆ: ಸಚಿವ ಅರವಿಂದ್ ಸಾವಂತ್...

ಬಿಜೆಪಿ ಜತೆಗಿನ 30 ವರ್ಷಗಳ ಮೈತ್ರಿಗೆ ಗುಡ್ ಬೈ ಹೇಳಿದ ಶಿವಸೇನೆ: ಸಚಿವ ಅರವಿಂದ್ ಸಾವಂತ್ ರಾಜೀನಾಮೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಚುನಾವಣೆ ಪೂರ್ವ ಮೈತ್ರಿ ಮೂಲಕ ಮಹಾರಾಷ್ಟ್ರದ ಆಡಳಿತ ಚುಕ್ಕಾಣಿ ಹಿಡಿಯಲು ಹಗ್ಗಜಗ್ಗಾಟ ನಡೆಸಿದ್ದ ಎನ್‍ಡಿಎ ಹಾಗೂ ಶಿವಸೇನೆ ಮೈತ್ರಿ ಮುರಿದುಕೊಂಡಿವೆ. ಬಿಜೆಪಿ ಹಾಕಿದ್ದ ಸವಾಲಿಗೆ ಶಿವಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಬಿಜೆಪಿ ಜತೆಗಿನ ಮೂವತ್ತು ವರ್ಷದ ಸಂಬಂಧಕ್ಕೆ ಎಳ್ಳು-ನೀರು ಬಿಟ್ಟಿದೆ.

ಚುನಾವಣಾ ಫಲಿತಾಂಶ ಬಂದು 15 ದಿನಗಳು ಕಳೆದರೂ ಸಿಎಂ ಹುದ್ದೆಗಾಗಿ ಶಿವಸೇನೆ ಮತ್ತು ಬಿಜೆಪಿ ಕದನ ನಡೆಸಿದ್ದವು. ಆದರೆ ಬಿಜೆಪಿ, ಶಿವಸೇನೆಯ 50:50 ಸೂತ್ರಕ್ಕೆ ಸೊಪ್ಪು ಹಾಕಲಿಲ್ಲ. ಇದರಿಂದ ಕೆರಳಿದ ಶಿವಸೇನೆ, ಮುಖ್ಯಮಂತ್ರಿ ಸ್ಥಾನ ನಮಗೇ ಬೇಕು ಎಂದು ಬಿಗಿಪಟ್ಟು ಸಾಧಿಸಿತ್ತು. ಸರ್ಕಾರ ರಚಿಸುವಲ್ಲಿ ವಿಫಲರಾಗಿರುವ ದೇವೇಂದ್ರ ಫಡ್ನವೀಸ್ ಈಗಾಗಲೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದು, ಶಿವಸೇನೆ ಜನಾದೇಶಕ್ಕೆ ಅಪಮಾನ ಮಾಡುತ್ತಿದೆ ಎಂದು ಕಿಡಿಕಾರಿದ್ದರು. ಅಲ್ಲದೇ ಬಿಜೆಪಿ ಸರ್ಕಾರ ರಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಶಿವಸೇನೆ ಸರ್ಕಾರ ರಚನೆ ಮಾಡಲಿ ಎಂದು ಹೇಳಿದೆ.

ಈಗ ಕಾಂಗ್ರೆಸ್ ಮತ್ತು ಎನ್‍ಸಿಪಿ ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ಶಿವಸೇನೆ ಹೇಳಿತ್ತು. ತದನಂತರ ಕಾಂಗ್ರೆಸ್ ಮತ್ತು ಎನ್‍ಸಿಪಿ ನಾಯಕರು ಸಭೆ ನಡೆಸಿದ್ದರು. ನಂತರ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿದ್ದರು. ಇನ್ನು ಮೂಲಗಳ ಮಾಹಿತಿಯ ಪ್ರಕಾರ, ಶಿವಸೇನೆ ಜತೆ ಮೈತ್ರಿ ಮಾಡಿಕೊಳ್ಳಬೇಕೆಂದರೆ ಬಿಜೆಪಿಯಿಂದ ಶಿವಸೇನೆ ಮೈತ್ರಿ ಮುರಿದುಕೊಂಡು ಬೇರೆಯಾಗಬೇಕು ಎಂದು ಎನ್‍ಸಿಪಿ ಷರತ್ತು ವಿಧಿಸಿತ್ತೆಂದು ಹೇಳಲಾಗಿದೆ. ಹೀಗಾಗಿಯೇ ಶಿವಸೇನೆ, ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡಿದ್ದು, ಎನ್‍ಸಿಪಿ ನಾಯಕ ಶರತ್‍ ಪವಾರ್‍ ಅವರನ್ನು ಶಿವಸೇನೆ ಮುಖ್ಯಸ್ಥ ಉದ್ಧವ್‍ ಠಾಕ್ರೆ ಇಂದು ಭೇಟಿಯಾಗುವ ಸಾಧ್ಯತೆ ಇದೆ.

ಇತ್ತ ಕಾಂಗ್ರೆಸ್ ನಾಯಕರೂ ಸಹ ಸಭೆ ನಡೆಸಿದ್ದಾರೆ. ಶಿವಸೇನೆ ವಕ್ತಾರ ಸಂಜಯ್ ರಾವತ್, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಬಿಜೆಪಿ ಜತೆ ಶಿವಸೇನೆ ಮೈತ್ರಿ ಮುರಿದುಕೊಳ್ಳುತ್ತಿದ್ದಂತೆ, ಕೇಂದ್ರ ಸಚಿವ ಸಂಪುಟದಲ್ಲಿ ಪಕ್ಷದಿಂದ ಮಂತ್ರಿಯಾಗಿದ್ದ ಅರವಿಂದ್ ಸಾವಂತ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಶಿವಸೇನೆ ಪಕ್ಷ ಸತ್ಯವನ್ನೇ ಹೇಳುತ್ತಿದೆ. ಸುಳ್ಳಿನ ವಾತಾವರಣದಲ್ಲಿ ಇರಲು ಮತ್ತು ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ಇತ್ತ ಸರ್ಕಾರ ರಚನೆ ಸಂಬಂಧ ಕಾಂಗ್ರೆಸ್ ಮತ್ತು ಎನ್‍ಸಿಪಿ ಸಭೆ ನಡೆಸಿದ್ದು, ಶಿವಸೇನೆಗೆ ಸಾಥ್ ನೀಡಬೇಕೋ ಬೇಡವೋ ಎಂಬುದು ಸಭೆಯ ನಂತರ ನಿರ್ಧಾರವಾಗಲಿದೆ. ಶಿವಸೇನೆಗೆ ಸಾಥ್‍ ನೀಡುವ ಆಲೋಚನೆಯಲ್ಲಿರುವ ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ್ದಾರೆ ಸಂಜಯ್ ನಿರುಪಮ್. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ನಡೆಯುತ್ತಿರುವುದು ಕದನವಲ್ಲ. ಅದೊಂದು ನಾಟಕ. ಇದೆಲ್ಲದರಿಂದ ಕಾಂಗ್ರೆಸ್ ದೂರವುಳಿಯಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...