Homeಮುಖಪುಟಬಿಜೆಪಿ ಜತೆಗಿನ 30 ವರ್ಷಗಳ ಮೈತ್ರಿಗೆ ಗುಡ್ ಬೈ ಹೇಳಿದ ಶಿವಸೇನೆ: ಸಚಿವ ಅರವಿಂದ್ ಸಾವಂತ್...

ಬಿಜೆಪಿ ಜತೆಗಿನ 30 ವರ್ಷಗಳ ಮೈತ್ರಿಗೆ ಗುಡ್ ಬೈ ಹೇಳಿದ ಶಿವಸೇನೆ: ಸಚಿವ ಅರವಿಂದ್ ಸಾವಂತ್ ರಾಜೀನಾಮೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಚುನಾವಣೆ ಪೂರ್ವ ಮೈತ್ರಿ ಮೂಲಕ ಮಹಾರಾಷ್ಟ್ರದ ಆಡಳಿತ ಚುಕ್ಕಾಣಿ ಹಿಡಿಯಲು ಹಗ್ಗಜಗ್ಗಾಟ ನಡೆಸಿದ್ದ ಎನ್‍ಡಿಎ ಹಾಗೂ ಶಿವಸೇನೆ ಮೈತ್ರಿ ಮುರಿದುಕೊಂಡಿವೆ. ಬಿಜೆಪಿ ಹಾಕಿದ್ದ ಸವಾಲಿಗೆ ಶಿವಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಬಿಜೆಪಿ ಜತೆಗಿನ ಮೂವತ್ತು ವರ್ಷದ ಸಂಬಂಧಕ್ಕೆ ಎಳ್ಳು-ನೀರು ಬಿಟ್ಟಿದೆ.

ಚುನಾವಣಾ ಫಲಿತಾಂಶ ಬಂದು 15 ದಿನಗಳು ಕಳೆದರೂ ಸಿಎಂ ಹುದ್ದೆಗಾಗಿ ಶಿವಸೇನೆ ಮತ್ತು ಬಿಜೆಪಿ ಕದನ ನಡೆಸಿದ್ದವು. ಆದರೆ ಬಿಜೆಪಿ, ಶಿವಸೇನೆಯ 50:50 ಸೂತ್ರಕ್ಕೆ ಸೊಪ್ಪು ಹಾಕಲಿಲ್ಲ. ಇದರಿಂದ ಕೆರಳಿದ ಶಿವಸೇನೆ, ಮುಖ್ಯಮಂತ್ರಿ ಸ್ಥಾನ ನಮಗೇ ಬೇಕು ಎಂದು ಬಿಗಿಪಟ್ಟು ಸಾಧಿಸಿತ್ತು. ಸರ್ಕಾರ ರಚಿಸುವಲ್ಲಿ ವಿಫಲರಾಗಿರುವ ದೇವೇಂದ್ರ ಫಡ್ನವೀಸ್ ಈಗಾಗಲೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದು, ಶಿವಸೇನೆ ಜನಾದೇಶಕ್ಕೆ ಅಪಮಾನ ಮಾಡುತ್ತಿದೆ ಎಂದು ಕಿಡಿಕಾರಿದ್ದರು. ಅಲ್ಲದೇ ಬಿಜೆಪಿ ಸರ್ಕಾರ ರಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಶಿವಸೇನೆ ಸರ್ಕಾರ ರಚನೆ ಮಾಡಲಿ ಎಂದು ಹೇಳಿದೆ.

ಈಗ ಕಾಂಗ್ರೆಸ್ ಮತ್ತು ಎನ್‍ಸಿಪಿ ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ಶಿವಸೇನೆ ಹೇಳಿತ್ತು. ತದನಂತರ ಕಾಂಗ್ರೆಸ್ ಮತ್ತು ಎನ್‍ಸಿಪಿ ನಾಯಕರು ಸಭೆ ನಡೆಸಿದ್ದರು. ನಂತರ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿದ್ದರು. ಇನ್ನು ಮೂಲಗಳ ಮಾಹಿತಿಯ ಪ್ರಕಾರ, ಶಿವಸೇನೆ ಜತೆ ಮೈತ್ರಿ ಮಾಡಿಕೊಳ್ಳಬೇಕೆಂದರೆ ಬಿಜೆಪಿಯಿಂದ ಶಿವಸೇನೆ ಮೈತ್ರಿ ಮುರಿದುಕೊಂಡು ಬೇರೆಯಾಗಬೇಕು ಎಂದು ಎನ್‍ಸಿಪಿ ಷರತ್ತು ವಿಧಿಸಿತ್ತೆಂದು ಹೇಳಲಾಗಿದೆ. ಹೀಗಾಗಿಯೇ ಶಿವಸೇನೆ, ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡಿದ್ದು, ಎನ್‍ಸಿಪಿ ನಾಯಕ ಶರತ್‍ ಪವಾರ್‍ ಅವರನ್ನು ಶಿವಸೇನೆ ಮುಖ್ಯಸ್ಥ ಉದ್ಧವ್‍ ಠಾಕ್ರೆ ಇಂದು ಭೇಟಿಯಾಗುವ ಸಾಧ್ಯತೆ ಇದೆ.

ಇತ್ತ ಕಾಂಗ್ರೆಸ್ ನಾಯಕರೂ ಸಹ ಸಭೆ ನಡೆಸಿದ್ದಾರೆ. ಶಿವಸೇನೆ ವಕ್ತಾರ ಸಂಜಯ್ ರಾವತ್, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಬಿಜೆಪಿ ಜತೆ ಶಿವಸೇನೆ ಮೈತ್ರಿ ಮುರಿದುಕೊಳ್ಳುತ್ತಿದ್ದಂತೆ, ಕೇಂದ್ರ ಸಚಿವ ಸಂಪುಟದಲ್ಲಿ ಪಕ್ಷದಿಂದ ಮಂತ್ರಿಯಾಗಿದ್ದ ಅರವಿಂದ್ ಸಾವಂತ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಶಿವಸೇನೆ ಪಕ್ಷ ಸತ್ಯವನ್ನೇ ಹೇಳುತ್ತಿದೆ. ಸುಳ್ಳಿನ ವಾತಾವರಣದಲ್ಲಿ ಇರಲು ಮತ್ತು ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ಇತ್ತ ಸರ್ಕಾರ ರಚನೆ ಸಂಬಂಧ ಕಾಂಗ್ರೆಸ್ ಮತ್ತು ಎನ್‍ಸಿಪಿ ಸಭೆ ನಡೆಸಿದ್ದು, ಶಿವಸೇನೆಗೆ ಸಾಥ್ ನೀಡಬೇಕೋ ಬೇಡವೋ ಎಂಬುದು ಸಭೆಯ ನಂತರ ನಿರ್ಧಾರವಾಗಲಿದೆ. ಶಿವಸೇನೆಗೆ ಸಾಥ್‍ ನೀಡುವ ಆಲೋಚನೆಯಲ್ಲಿರುವ ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ್ದಾರೆ ಸಂಜಯ್ ನಿರುಪಮ್. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ನಡೆಯುತ್ತಿರುವುದು ಕದನವಲ್ಲ. ಅದೊಂದು ನಾಟಕ. ಇದೆಲ್ಲದರಿಂದ ಕಾಂಗ್ರೆಸ್ ದೂರವುಳಿಯಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...