Homeಮುಖಪುಟಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

ಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸತ್ ಸದಸ್ಯೆ ಮಹುವಾ ಮೊಯಿತ್ರಾ ಅವರನ್ನು ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂಬ ಆರೋಪದ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಮಂಗಳವಾರ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ. ಶಿವಸೇನೆಯ ಮುಖವಾಣಿ ಸಾಮ್ನಾ ತನ್ನ ಸಂಪಾದಕೀಯದಲ್ಲಿ, “ಇಂತಹ ಕ್ರಮಗಳು ಸರ್ವಾಧಿಕಾರಿ ಸರ್ಕಾರವು ಹೆಚ್ಚು ಭಯಭೀತವಾಗಿದೆ ಮತ್ತು ತನ್ನ ದೌರ್ಬಲ್ಯವನ್ನು ಎತ್ತಿ ತೋರಿಸಿ ಸಾಬೀತುಪಡಿಸುತ್ತಿದೆ” ಎಂದು  ಹೇಳಿದೆ.

ಅದು ತನ್ನ ಸಂಪಾದಕೀಯದಲ್ಲಿ ಮೊಯಿತ್ರಾ ಅವರನ್ನು ಪ್ರಶಂಸಿದ್ದು, ಅವರು ಸರ್ಕಾರವನ್ನು ಬೆವರುವಂತೆ ಮಾಡಿದ್ದಾರೆ ಮತ್ತು ಕೇಂದ್ರ ಸರ್ಕಾರವು “ಮಹಿಳೆಗೆ ಹೆದರುತ್ತಿದೆ” ಎಂದು ಅದು ಹೇಳಿದೆ.

ಮಹುವಾ ಮೊಯಿತ್ರಾ ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡು ದೇಶವು ಅಘೋಷಿತ ತುರ್ತು ಪರಿಸ್ಥಿತಿಯಲ್ಲಿದೆ ಎಂದು ಆರೋಪಿಸಿದ್ದರು. ಇದರ ನಂತರ ಅವರ ದೆಹಲಿಯ ನಿವಾಸದ ಹೊರಗೆ ಸಶಸ್ತ್ರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮಹುವಾ ಮೊಯಿತ್ರ ಈ ಭದ್ರತೆಯನ್ನು ತೆಗೆದು ಹಾಕಬೇಕು ಎಂದು ಹೇಳಿದ್ದರು ಜೊತೆಗೆ, ಈ ಭದ್ರತೆಯಿಂದಾಗಿ ನಾನು ಕಣ್ಗಾವಲಿನಲ್ಲಿದ್ದೇವೆ ಎಂದು ನನಗೆ ತೋರುತ್ತದೆ ಎಂದು ಪತ್ರ ಬರೆದಿದ್ದರು. ತನ್ನನ್ನು ತಾನು ಸಾಮಾನ್ಯ ಪ್ರಜೆ ಎಂದು ಕರೆದಿದ್ದ ಅವರು ತನಗೆ ಭದ್ರತಾ ರಕ್ಷಣೆಯ ಅಗತ್ಯವಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಶಾಸಕರ ರಾಜೀನಾಮೆ: ಬಹುಮತ ಕಳೆದುಕೊಂಡ ಪುದುಚೇರಿ ಕಾಂಗ್ರೆಸ್ ಸರ್ಕಾರ

ಭಾರತೀಯ ಜನತಾ ಪಕ್ಷವು ಯಾವ ರೀತಿಯ ಸಂಸ್ಕೃತಿಯನ್ನು ರಾಜಕೀಯಕ್ಕೆ ತರಲು ಬಯಸಿದೆ ಎಂದರೆ, ಅವರು ಹೊರತುಪಡಿಸಿ ಬೇರೆ ಯಾರೂ ಉಳಿಯಬಾರದು ಎಂಬ ಹಾದಿಯಲ್ಲಿ ಅವರು ನಡೆದುಕೊಳ್ಳುತ್ತಿದ್ದಾರೆ. ಅವರು ಜನರ ಮನಸ್ಥಿತಿಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಶಿವಸೇನೆ ಹೇಳಿದೆ.

ಇಂದಿನ ಈ ಕಷ್ಟದ ಸಂದರ್ಭಗಳಲ್ಲೂ ನಿರ್ಭಯವಾಗಿ ಹೋರಾಡುವ ಜನರಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉದ್ಧವ್ ಠಾಕ್ರೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖಂಡ ಶರದ್ ಪವಾರ್, ಪಂಜಾಬ್‌ನ ಬಾದಲ್‌ ಕುಟುಂಬ ಮತ್ತು ರೈತ ಮುಖಂಡ ರಾಜೇಶ್ ಟಿಕಾಯತ್‌ ಅವರಂತಹ ಅನೇಕ ಜನರು ಸರ್ಕಾರವು ಮೇಲ್ವಿಚಾರಣೆ ಮಾಡುವ ಎಲ್ಲಾ ವ್ಯವಸ್ಥೆಯನ್ನು ಹೊಂದಿದ್ದರೂ ಕೂಡಾ ನಿರ್ಭಯವಾಗಿ ಹೋರಾಡುತ್ತಿದ್ದಾರೆ ಎಂದು ಶಿವಸೇನೆ ಹೇಳಿದೆ.

ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ಕೇಂದ್ರವು ಮೊಯಿತ್ರಾ ಮೇಲೆ ಕಣ್ಣಿಟ್ಟಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಅವರು ಮಯಿತ್ರ ಅವರ ಗೌಪ್ಯತೆಯ ಹಕ್ಕಿನ ಬಗ್ಗೆ ಬೆಂಬಲಿಸಿದ್ದು, ಅವರು ಕೇಳದೆ ದೆಹಲಿ ಪೊಲೀಸರು ಯಾಕೆ ಅವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಅಭ್ಯರ್ಥಿಗಳಾಗಲು ಬಯಸುವವರು ₹ 25 ಸಾವಿರ ಪಾವತಿಸಿ: ಕಮಲ್ ಹಾಸನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...