Homeಮುಖಪುಟಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

ಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸತ್ ಸದಸ್ಯೆ ಮಹುವಾ ಮೊಯಿತ್ರಾ ಅವರನ್ನು ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂಬ ಆರೋಪದ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಮಂಗಳವಾರ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ. ಶಿವಸೇನೆಯ ಮುಖವಾಣಿ ಸಾಮ್ನಾ ತನ್ನ ಸಂಪಾದಕೀಯದಲ್ಲಿ, “ಇಂತಹ ಕ್ರಮಗಳು ಸರ್ವಾಧಿಕಾರಿ ಸರ್ಕಾರವು ಹೆಚ್ಚು ಭಯಭೀತವಾಗಿದೆ ಮತ್ತು ತನ್ನ ದೌರ್ಬಲ್ಯವನ್ನು ಎತ್ತಿ ತೋರಿಸಿ ಸಾಬೀತುಪಡಿಸುತ್ತಿದೆ” ಎಂದು  ಹೇಳಿದೆ.

ಅದು ತನ್ನ ಸಂಪಾದಕೀಯದಲ್ಲಿ ಮೊಯಿತ್ರಾ ಅವರನ್ನು ಪ್ರಶಂಸಿದ್ದು, ಅವರು ಸರ್ಕಾರವನ್ನು ಬೆವರುವಂತೆ ಮಾಡಿದ್ದಾರೆ ಮತ್ತು ಕೇಂದ್ರ ಸರ್ಕಾರವು “ಮಹಿಳೆಗೆ ಹೆದರುತ್ತಿದೆ” ಎಂದು ಅದು ಹೇಳಿದೆ.

ಮಹುವಾ ಮೊಯಿತ್ರಾ ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡು ದೇಶವು ಅಘೋಷಿತ ತುರ್ತು ಪರಿಸ್ಥಿತಿಯಲ್ಲಿದೆ ಎಂದು ಆರೋಪಿಸಿದ್ದರು. ಇದರ ನಂತರ ಅವರ ದೆಹಲಿಯ ನಿವಾಸದ ಹೊರಗೆ ಸಶಸ್ತ್ರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮಹುವಾ ಮೊಯಿತ್ರ ಈ ಭದ್ರತೆಯನ್ನು ತೆಗೆದು ಹಾಕಬೇಕು ಎಂದು ಹೇಳಿದ್ದರು ಜೊತೆಗೆ, ಈ ಭದ್ರತೆಯಿಂದಾಗಿ ನಾನು ಕಣ್ಗಾವಲಿನಲ್ಲಿದ್ದೇವೆ ಎಂದು ನನಗೆ ತೋರುತ್ತದೆ ಎಂದು ಪತ್ರ ಬರೆದಿದ್ದರು. ತನ್ನನ್ನು ತಾನು ಸಾಮಾನ್ಯ ಪ್ರಜೆ ಎಂದು ಕರೆದಿದ್ದ ಅವರು ತನಗೆ ಭದ್ರತಾ ರಕ್ಷಣೆಯ ಅಗತ್ಯವಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಶಾಸಕರ ರಾಜೀನಾಮೆ: ಬಹುಮತ ಕಳೆದುಕೊಂಡ ಪುದುಚೇರಿ ಕಾಂಗ್ರೆಸ್ ಸರ್ಕಾರ

ಭಾರತೀಯ ಜನತಾ ಪಕ್ಷವು ಯಾವ ರೀತಿಯ ಸಂಸ್ಕೃತಿಯನ್ನು ರಾಜಕೀಯಕ್ಕೆ ತರಲು ಬಯಸಿದೆ ಎಂದರೆ, ಅವರು ಹೊರತುಪಡಿಸಿ ಬೇರೆ ಯಾರೂ ಉಳಿಯಬಾರದು ಎಂಬ ಹಾದಿಯಲ್ಲಿ ಅವರು ನಡೆದುಕೊಳ್ಳುತ್ತಿದ್ದಾರೆ. ಅವರು ಜನರ ಮನಸ್ಥಿತಿಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಶಿವಸೇನೆ ಹೇಳಿದೆ.

ಇಂದಿನ ಈ ಕಷ್ಟದ ಸಂದರ್ಭಗಳಲ್ಲೂ ನಿರ್ಭಯವಾಗಿ ಹೋರಾಡುವ ಜನರಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉದ್ಧವ್ ಠಾಕ್ರೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖಂಡ ಶರದ್ ಪವಾರ್, ಪಂಜಾಬ್‌ನ ಬಾದಲ್‌ ಕುಟುಂಬ ಮತ್ತು ರೈತ ಮುಖಂಡ ರಾಜೇಶ್ ಟಿಕಾಯತ್‌ ಅವರಂತಹ ಅನೇಕ ಜನರು ಸರ್ಕಾರವು ಮೇಲ್ವಿಚಾರಣೆ ಮಾಡುವ ಎಲ್ಲಾ ವ್ಯವಸ್ಥೆಯನ್ನು ಹೊಂದಿದ್ದರೂ ಕೂಡಾ ನಿರ್ಭಯವಾಗಿ ಹೋರಾಡುತ್ತಿದ್ದಾರೆ ಎಂದು ಶಿವಸೇನೆ ಹೇಳಿದೆ.

ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ಕೇಂದ್ರವು ಮೊಯಿತ್ರಾ ಮೇಲೆ ಕಣ್ಣಿಟ್ಟಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಅವರು ಮಯಿತ್ರ ಅವರ ಗೌಪ್ಯತೆಯ ಹಕ್ಕಿನ ಬಗ್ಗೆ ಬೆಂಬಲಿಸಿದ್ದು, ಅವರು ಕೇಳದೆ ದೆಹಲಿ ಪೊಲೀಸರು ಯಾಕೆ ಅವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಅಭ್ಯರ್ಥಿಗಳಾಗಲು ಬಯಸುವವರು ₹ 25 ಸಾವಿರ ಪಾವತಿಸಿ: ಕಮಲ್ ಹಾಸನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...