Homeಮುಖಪುಟಶಿವಸೇನೆ V/S ಶಿವಸೇನೆ: ತೀರ್ಪು ಸ್ವೀಕಾರಾರ್ಹವಲ್ಲ, ಕಿಡಿಕಾರಿದ ಉದ್ಧವ್ ಬಣ

ಶಿವಸೇನೆ V/S ಶಿವಸೇನೆ: ತೀರ್ಪು ಸ್ವೀಕಾರಾರ್ಹವಲ್ಲ, ಕಿಡಿಕಾರಿದ ಉದ್ಧವ್ ಬಣ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ತೀರ್ಪಿನ ಬಗ್ಗೆ ಶಿವಸೇನಾ (ಯುಬಿಟಿ) ನಾಯಕರು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ‘ಈ ತೀರ್ಪು ನಮಗೆ ಅನಿರೀಕ್ಷಿತವಲ್ಲ’ ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ. ಆದರೆ, ಪಕ್ಷವು ಸುಪ್ರೀಂ ಕೋರ್ಟಿನಲ್ಲಿ ತೀರ್ಪನ್ನು ಪ್ರಶ್ನಿಸುತ್ತದೆ ಎಂದು ಹೇಳಿದರು.

ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನೆ ಉಭಯ ಬಣಗಳ ಅಡ್ಡ ಅರ್ಜಿಗಳ ಕುರಿತು ನಾರ್ವೇಕರ್ ಬುಧವಾರ ತೀರ್ಪು ನೀಡಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣವೇ ನಿಜವಾದ ಶಿವಸೇನೆ ಎಂದು ಹೇಳಿದ್ದು, ಉದ್ಧವ್ ಠಾಕ್ರೆ (ಯುಬಿಟಿ) ಬಣ ಸಲ್ಲಿಸಿದ ಅರ್ಜಿಗಳನ್ನು ವಜಾಗೊಳಿಸಿದ್ದಾರೆ.

‘ಈ ತೀರ್ಪು ಸ್ವೀಕಾರಾರ್ಹವಲ್ಲ ಮತ್ತು ಪಕ್ಷವು ಸುಪ್ರೀಂ ಕೋರ್ಟಿನಲ್ಲಿ ಅದನ್ನು ಪ್ರಶ್ನಿಸುತ್ತದೆ’ ಎಂದು ಠಾಕ್ರೆ ಹೇಳಿದರು.

‘ನನಗೇನೂ ಆಶ್ಚರ್ಯವಿಲ್ಲ. ನಾವು ‘ವಹೀ ಹೋತಾ ಹೈ ಜೋ ಮಂಜೂರ್-ಎ-ಖುದಾ ಹೋತಾ ಹೈ’ ಎಂದು ಕೇಳಿದ್ದೇವೆ ಮತ್ತು 2014ರ ನಂತರ ಹೊಸ ಸಂಪ್ರದಾಯವು ಪ್ರಾರಂಭವಾಗಿದೆ, ‘ವಹೀ ಹೋತಾ ಹೈ ಜೋ ಮಂಜೂರ್-ಇ-ನರೇಂದ್ರ ಮೋದಿ ಔರ್ ಅಮಿತ್ ಶಾ ಹೋತಾ ಹೈ’ ಎಂದು ಲೇವಡಿ ಮಾಡಿದ್ದಾರೆ.

‘ಮಹಾರಾಷ್ಟ್ರದಲ್ಲಿ ನಡೆಯುತ್ತಿರುವುದನ್ನು ನಾವು ನೋಡುತ್ತೇವೆ. ಇದು ನೈತಿಕತೆ ಜೊತೆಗಿನ ದುರದೃಷ್ಟಕರ ರಾಜಿಯಾಗಿದೆ. ಸುಪ್ರೀಂ ಕೋರ್ಟಿನಿಂದ ‘ಕಾನೂನುಬಾಹಿರ’ ಮತ್ತು ‘ಅಸಂವಿಧಾನಿಕ’ ಎಂದು ಕರೆಯಲಾದ ಯಾವುದನ್ನಾದರೂ ‘ಕಾನೂನನ್ನಾಗಿ’ ಆಗಿ ಪರಿವರ್ತಿಸಲಾಗುತ್ತಿದೆ. ಇದು ದುರದೃಷ್ಟಕರ’ ಎಂದು ಅವರು ಹೇಳಿದರು.

ಶಿವಸೇನೆ (ಯುಬಿಟಿ ಬಣ) ನಾಯಕ ಸಂಜಯ್ ರಾವುತ್ ಅವರು ಈ ತೀರ್ಪನ್ನು ಪಕ್ಷವನ್ನು ಮುಗಿಸಲು ಬಿಜೆಪಿಯ ಪಿತೂರಿ ಎಂದು ಆರೋಪಿಸಿದ್ದಾರೆ.

‘ಇದು ಬಿಜೆಪಿಯ ಪಿತೂರಿಯಾಗಿದೆ; ಮುಂದೊಂದು ದಿನ ನಾವು ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯನ್ನು ಮುಗಿಸುತ್ತೇವೆ ಎಂಬುದು ಅವರ ಕನಸಾಗಿತ್ತು. ಆದರೆ ಈ ಒಂದು ನಿರ್ಧಾರದಿಂದ ಶಿವಸೇನೆ ಮುಗಿಸಲು ಸಾಧ್ಯವಿಲ್ಲ…ನಾವು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ’ ಎಂದು ಅವರು ಹೇಳಿದರು.

ತೀರ್ಪಿನ ನಂತರ ಪ್ರತಿಕ್ರಿಯಿಸಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ‘ಠಾಕ್ರೆ ಅವರು ಉನ್ನತ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ’ ಎಂದು ಹೇಳಿದರು.

‘ಈ ನಿರ್ಧಾರದ ನಂತರ, ಉದ್ಧವ್ ಸುಪ್ರೀಂ ಕೋರ್ಟಿಗೆ ಹೋಗಬೇಕಾಗುತ್ತದೆ … ಅವರು ಅಲ್ಲಿ ನ್ಯಾಯ ಪಡೆಯುವ ಭರವಸೆಯಲ್ಲಿದ್ದಾರೆ. ಈ ತೀರ್ಪನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ ಎಂದು ಅಂಬಾದಾಸ್ ದಾನ್ವೆ ಹೇಳಿದ್ದಾರೆ.

ಮತ್ತೊಂದೆಡೆ, ಈ ನಿರ್ಧಾರವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ಮಹಾರಾಷ್ಟ್ರ ಸಚಿವ ಮತ್ತು ಶಿವಸೇನೆ (ಶಿಂಧೆ ಬಣ) ನಾಯಕ ದೀಪಕ್ ಕೇಸರ್ಕರ್ ಹೇಳಿದ್ದಾರೆ.

ಈ ನಿರ್ಧಾರದಿಂದ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಪಕ್ಷದಲ್ಲಿಯೂ ಪ್ರಜಾಪ್ರಭುತ್ವ ಇರಬೇಕು ಎಂಬುದು ಈ ನಿರ್ಧಾರದ ಸತ್ಯ… ಇದೊಂದು ಮಹತ್ವದ ತೀರ್ಪು… ಎಲ್ಲ ಸಂಗತಿಗಳನ್ನು ವಿಶ್ಲೇಷಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಸರಿಯಾದ ನಿರ್ಧಾರ ಎಂದರು.

ಕೇಂದ್ರ ಸಚಿವ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷ ರಾಮದಾಸ್ ಅಠವಳೆ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿ, ಇದು ಠಾಕ್ರೆಗೆ ದೊಡ್ಡ ಆಘಾತವಾಗಿದೆ ಎಂದು ಹೇಳಿದ್ದಾರೆ.

‘ತೀರ್ಪು ಉದ್ಧವ್ ಠಾಕ್ರೆಗೆ ದೊಡ್ಡ ಆಘಾತವಾಗಿದೆ. ಏಕನಾಥ್ ಶಿಂಧೆ ಸಿಎಂ ಆಗಿ ಉಳಿಯುತ್ತಾರೆ ಮತ್ತು ಅವರ ಬಣ ನಿಜವಾದ ಶಿವಸೇನೆ ರಾಜಕೀಯ ಪಕ್ಷವಾಗಿದೆ. ಈ ನಿರ್ಧಾರವು ಸಂವಿಧಾನದ ಪ್ರಕಾರವಾಗಿದೆ, ಇದು ಲೋಕಸಭೆ ಚುನಾವಣೆಯಲ್ಲಿ ನಮಗೆ ಲಾಭವಾಗಲಿದೆ’ ಎಂದು ಅವರು ಹೇಳಿದ್ದಾರೆ.

ನಾರ್ವೇಕರ್ ಅವರು ತಮ್ಮ ತೀರ್ಪಿನಲ್ಲಿ ಪಕ್ಷದ ನಾಯಕತ್ವ ರಚನೆಯನ್ನು ನಿರ್ಧರಿಸುವಲ್ಲಿ ಪಕ್ಷದ ಸಂವಿಧಾನದ ಪ್ರಸ್ತುತತೆಯನ್ನು ಒತ್ತಿಹೇಳಿದರು. ಇದು ಅಧಿಕೃತ ಶಿವಸೇನಾ ಬಣವನ್ನು ಗುರುತಿಸುವಲ್ಲಿ ನಿರ್ಣಾಯಕವಾಗಿದೆ.

ಇದನ್ನೂ ಓದಿ; ಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...