Homeಮುಖಪುಟಶಿವಸೇನೆ V/S ಶಿವಸೇನೆ: ತೀರ್ಪು ಸ್ವೀಕಾರಾರ್ಹವಲ್ಲ, ಕಿಡಿಕಾರಿದ ಉದ್ಧವ್ ಬಣ

ಶಿವಸೇನೆ V/S ಶಿವಸೇನೆ: ತೀರ್ಪು ಸ್ವೀಕಾರಾರ್ಹವಲ್ಲ, ಕಿಡಿಕಾರಿದ ಉದ್ಧವ್ ಬಣ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ತೀರ್ಪಿನ ಬಗ್ಗೆ ಶಿವಸೇನಾ (ಯುಬಿಟಿ) ನಾಯಕರು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ‘ಈ ತೀರ್ಪು ನಮಗೆ ಅನಿರೀಕ್ಷಿತವಲ್ಲ’ ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ. ಆದರೆ, ಪಕ್ಷವು ಸುಪ್ರೀಂ ಕೋರ್ಟಿನಲ್ಲಿ ತೀರ್ಪನ್ನು ಪ್ರಶ್ನಿಸುತ್ತದೆ ಎಂದು ಹೇಳಿದರು.

ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನೆ ಉಭಯ ಬಣಗಳ ಅಡ್ಡ ಅರ್ಜಿಗಳ ಕುರಿತು ನಾರ್ವೇಕರ್ ಬುಧವಾರ ತೀರ್ಪು ನೀಡಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣವೇ ನಿಜವಾದ ಶಿವಸೇನೆ ಎಂದು ಹೇಳಿದ್ದು, ಉದ್ಧವ್ ಠಾಕ್ರೆ (ಯುಬಿಟಿ) ಬಣ ಸಲ್ಲಿಸಿದ ಅರ್ಜಿಗಳನ್ನು ವಜಾಗೊಳಿಸಿದ್ದಾರೆ.

‘ಈ ತೀರ್ಪು ಸ್ವೀಕಾರಾರ್ಹವಲ್ಲ ಮತ್ತು ಪಕ್ಷವು ಸುಪ್ರೀಂ ಕೋರ್ಟಿನಲ್ಲಿ ಅದನ್ನು ಪ್ರಶ್ನಿಸುತ್ತದೆ’ ಎಂದು ಠಾಕ್ರೆ ಹೇಳಿದರು.

‘ನನಗೇನೂ ಆಶ್ಚರ್ಯವಿಲ್ಲ. ನಾವು ‘ವಹೀ ಹೋತಾ ಹೈ ಜೋ ಮಂಜೂರ್-ಎ-ಖುದಾ ಹೋತಾ ಹೈ’ ಎಂದು ಕೇಳಿದ್ದೇವೆ ಮತ್ತು 2014ರ ನಂತರ ಹೊಸ ಸಂಪ್ರದಾಯವು ಪ್ರಾರಂಭವಾಗಿದೆ, ‘ವಹೀ ಹೋತಾ ಹೈ ಜೋ ಮಂಜೂರ್-ಇ-ನರೇಂದ್ರ ಮೋದಿ ಔರ್ ಅಮಿತ್ ಶಾ ಹೋತಾ ಹೈ’ ಎಂದು ಲೇವಡಿ ಮಾಡಿದ್ದಾರೆ.

‘ಮಹಾರಾಷ್ಟ್ರದಲ್ಲಿ ನಡೆಯುತ್ತಿರುವುದನ್ನು ನಾವು ನೋಡುತ್ತೇವೆ. ಇದು ನೈತಿಕತೆ ಜೊತೆಗಿನ ದುರದೃಷ್ಟಕರ ರಾಜಿಯಾಗಿದೆ. ಸುಪ್ರೀಂ ಕೋರ್ಟಿನಿಂದ ‘ಕಾನೂನುಬಾಹಿರ’ ಮತ್ತು ‘ಅಸಂವಿಧಾನಿಕ’ ಎಂದು ಕರೆಯಲಾದ ಯಾವುದನ್ನಾದರೂ ‘ಕಾನೂನನ್ನಾಗಿ’ ಆಗಿ ಪರಿವರ್ತಿಸಲಾಗುತ್ತಿದೆ. ಇದು ದುರದೃಷ್ಟಕರ’ ಎಂದು ಅವರು ಹೇಳಿದರು.

ಶಿವಸೇನೆ (ಯುಬಿಟಿ ಬಣ) ನಾಯಕ ಸಂಜಯ್ ರಾವುತ್ ಅವರು ಈ ತೀರ್ಪನ್ನು ಪಕ್ಷವನ್ನು ಮುಗಿಸಲು ಬಿಜೆಪಿಯ ಪಿತೂರಿ ಎಂದು ಆರೋಪಿಸಿದ್ದಾರೆ.

‘ಇದು ಬಿಜೆಪಿಯ ಪಿತೂರಿಯಾಗಿದೆ; ಮುಂದೊಂದು ದಿನ ನಾವು ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯನ್ನು ಮುಗಿಸುತ್ತೇವೆ ಎಂಬುದು ಅವರ ಕನಸಾಗಿತ್ತು. ಆದರೆ ಈ ಒಂದು ನಿರ್ಧಾರದಿಂದ ಶಿವಸೇನೆ ಮುಗಿಸಲು ಸಾಧ್ಯವಿಲ್ಲ…ನಾವು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ’ ಎಂದು ಅವರು ಹೇಳಿದರು.

ತೀರ್ಪಿನ ನಂತರ ಪ್ರತಿಕ್ರಿಯಿಸಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ‘ಠಾಕ್ರೆ ಅವರು ಉನ್ನತ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ’ ಎಂದು ಹೇಳಿದರು.

‘ಈ ನಿರ್ಧಾರದ ನಂತರ, ಉದ್ಧವ್ ಸುಪ್ರೀಂ ಕೋರ್ಟಿಗೆ ಹೋಗಬೇಕಾಗುತ್ತದೆ … ಅವರು ಅಲ್ಲಿ ನ್ಯಾಯ ಪಡೆಯುವ ಭರವಸೆಯಲ್ಲಿದ್ದಾರೆ. ಈ ತೀರ್ಪನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ ಎಂದು ಅಂಬಾದಾಸ್ ದಾನ್ವೆ ಹೇಳಿದ್ದಾರೆ.

ಮತ್ತೊಂದೆಡೆ, ಈ ನಿರ್ಧಾರವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ಮಹಾರಾಷ್ಟ್ರ ಸಚಿವ ಮತ್ತು ಶಿವಸೇನೆ (ಶಿಂಧೆ ಬಣ) ನಾಯಕ ದೀಪಕ್ ಕೇಸರ್ಕರ್ ಹೇಳಿದ್ದಾರೆ.

ಈ ನಿರ್ಧಾರದಿಂದ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಪಕ್ಷದಲ್ಲಿಯೂ ಪ್ರಜಾಪ್ರಭುತ್ವ ಇರಬೇಕು ಎಂಬುದು ಈ ನಿರ್ಧಾರದ ಸತ್ಯ… ಇದೊಂದು ಮಹತ್ವದ ತೀರ್ಪು… ಎಲ್ಲ ಸಂಗತಿಗಳನ್ನು ವಿಶ್ಲೇಷಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಸರಿಯಾದ ನಿರ್ಧಾರ ಎಂದರು.

ಕೇಂದ್ರ ಸಚಿವ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷ ರಾಮದಾಸ್ ಅಠವಳೆ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿ, ಇದು ಠಾಕ್ರೆಗೆ ದೊಡ್ಡ ಆಘಾತವಾಗಿದೆ ಎಂದು ಹೇಳಿದ್ದಾರೆ.

‘ತೀರ್ಪು ಉದ್ಧವ್ ಠಾಕ್ರೆಗೆ ದೊಡ್ಡ ಆಘಾತವಾಗಿದೆ. ಏಕನಾಥ್ ಶಿಂಧೆ ಸಿಎಂ ಆಗಿ ಉಳಿಯುತ್ತಾರೆ ಮತ್ತು ಅವರ ಬಣ ನಿಜವಾದ ಶಿವಸೇನೆ ರಾಜಕೀಯ ಪಕ್ಷವಾಗಿದೆ. ಈ ನಿರ್ಧಾರವು ಸಂವಿಧಾನದ ಪ್ರಕಾರವಾಗಿದೆ, ಇದು ಲೋಕಸಭೆ ಚುನಾವಣೆಯಲ್ಲಿ ನಮಗೆ ಲಾಭವಾಗಲಿದೆ’ ಎಂದು ಅವರು ಹೇಳಿದ್ದಾರೆ.

ನಾರ್ವೇಕರ್ ಅವರು ತಮ್ಮ ತೀರ್ಪಿನಲ್ಲಿ ಪಕ್ಷದ ನಾಯಕತ್ವ ರಚನೆಯನ್ನು ನಿರ್ಧರಿಸುವಲ್ಲಿ ಪಕ್ಷದ ಸಂವಿಧಾನದ ಪ್ರಸ್ತುತತೆಯನ್ನು ಒತ್ತಿಹೇಳಿದರು. ಇದು ಅಧಿಕೃತ ಶಿವಸೇನಾ ಬಣವನ್ನು ಗುರುತಿಸುವಲ್ಲಿ ನಿರ್ಣಾಯಕವಾಗಿದೆ.

ಇದನ್ನೂ ಓದಿ; ಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...