Homeಮುಖಪುಟಶಿವಸೇನೆ V/S ಶಿವಸೇನೆ: ತೀರ್ಪು ಸ್ವೀಕಾರಾರ್ಹವಲ್ಲ, ಕಿಡಿಕಾರಿದ ಉದ್ಧವ್ ಬಣ

ಶಿವಸೇನೆ V/S ಶಿವಸೇನೆ: ತೀರ್ಪು ಸ್ವೀಕಾರಾರ್ಹವಲ್ಲ, ಕಿಡಿಕಾರಿದ ಉದ್ಧವ್ ಬಣ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ತೀರ್ಪಿನ ಬಗ್ಗೆ ಶಿವಸೇನಾ (ಯುಬಿಟಿ) ನಾಯಕರು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ‘ಈ ತೀರ್ಪು ನಮಗೆ ಅನಿರೀಕ್ಷಿತವಲ್ಲ’ ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ. ಆದರೆ, ಪಕ್ಷವು ಸುಪ್ರೀಂ ಕೋರ್ಟಿನಲ್ಲಿ ತೀರ್ಪನ್ನು ಪ್ರಶ್ನಿಸುತ್ತದೆ ಎಂದು ಹೇಳಿದರು.

ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನೆ ಉಭಯ ಬಣಗಳ ಅಡ್ಡ ಅರ್ಜಿಗಳ ಕುರಿತು ನಾರ್ವೇಕರ್ ಬುಧವಾರ ತೀರ್ಪು ನೀಡಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣವೇ ನಿಜವಾದ ಶಿವಸೇನೆ ಎಂದು ಹೇಳಿದ್ದು, ಉದ್ಧವ್ ಠಾಕ್ರೆ (ಯುಬಿಟಿ) ಬಣ ಸಲ್ಲಿಸಿದ ಅರ್ಜಿಗಳನ್ನು ವಜಾಗೊಳಿಸಿದ್ದಾರೆ.

‘ಈ ತೀರ್ಪು ಸ್ವೀಕಾರಾರ್ಹವಲ್ಲ ಮತ್ತು ಪಕ್ಷವು ಸುಪ್ರೀಂ ಕೋರ್ಟಿನಲ್ಲಿ ಅದನ್ನು ಪ್ರಶ್ನಿಸುತ್ತದೆ’ ಎಂದು ಠಾಕ್ರೆ ಹೇಳಿದರು.

‘ನನಗೇನೂ ಆಶ್ಚರ್ಯವಿಲ್ಲ. ನಾವು ‘ವಹೀ ಹೋತಾ ಹೈ ಜೋ ಮಂಜೂರ್-ಎ-ಖುದಾ ಹೋತಾ ಹೈ’ ಎಂದು ಕೇಳಿದ್ದೇವೆ ಮತ್ತು 2014ರ ನಂತರ ಹೊಸ ಸಂಪ್ರದಾಯವು ಪ್ರಾರಂಭವಾಗಿದೆ, ‘ವಹೀ ಹೋತಾ ಹೈ ಜೋ ಮಂಜೂರ್-ಇ-ನರೇಂದ್ರ ಮೋದಿ ಔರ್ ಅಮಿತ್ ಶಾ ಹೋತಾ ಹೈ’ ಎಂದು ಲೇವಡಿ ಮಾಡಿದ್ದಾರೆ.

‘ಮಹಾರಾಷ್ಟ್ರದಲ್ಲಿ ನಡೆಯುತ್ತಿರುವುದನ್ನು ನಾವು ನೋಡುತ್ತೇವೆ. ಇದು ನೈತಿಕತೆ ಜೊತೆಗಿನ ದುರದೃಷ್ಟಕರ ರಾಜಿಯಾಗಿದೆ. ಸುಪ್ರೀಂ ಕೋರ್ಟಿನಿಂದ ‘ಕಾನೂನುಬಾಹಿರ’ ಮತ್ತು ‘ಅಸಂವಿಧಾನಿಕ’ ಎಂದು ಕರೆಯಲಾದ ಯಾವುದನ್ನಾದರೂ ‘ಕಾನೂನನ್ನಾಗಿ’ ಆಗಿ ಪರಿವರ್ತಿಸಲಾಗುತ್ತಿದೆ. ಇದು ದುರದೃಷ್ಟಕರ’ ಎಂದು ಅವರು ಹೇಳಿದರು.

ಶಿವಸೇನೆ (ಯುಬಿಟಿ ಬಣ) ನಾಯಕ ಸಂಜಯ್ ರಾವುತ್ ಅವರು ಈ ತೀರ್ಪನ್ನು ಪಕ್ಷವನ್ನು ಮುಗಿಸಲು ಬಿಜೆಪಿಯ ಪಿತೂರಿ ಎಂದು ಆರೋಪಿಸಿದ್ದಾರೆ.

‘ಇದು ಬಿಜೆಪಿಯ ಪಿತೂರಿಯಾಗಿದೆ; ಮುಂದೊಂದು ದಿನ ನಾವು ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯನ್ನು ಮುಗಿಸುತ್ತೇವೆ ಎಂಬುದು ಅವರ ಕನಸಾಗಿತ್ತು. ಆದರೆ ಈ ಒಂದು ನಿರ್ಧಾರದಿಂದ ಶಿವಸೇನೆ ಮುಗಿಸಲು ಸಾಧ್ಯವಿಲ್ಲ…ನಾವು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ’ ಎಂದು ಅವರು ಹೇಳಿದರು.

ತೀರ್ಪಿನ ನಂತರ ಪ್ರತಿಕ್ರಿಯಿಸಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ‘ಠಾಕ್ರೆ ಅವರು ಉನ್ನತ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ’ ಎಂದು ಹೇಳಿದರು.

‘ಈ ನಿರ್ಧಾರದ ನಂತರ, ಉದ್ಧವ್ ಸುಪ್ರೀಂ ಕೋರ್ಟಿಗೆ ಹೋಗಬೇಕಾಗುತ್ತದೆ … ಅವರು ಅಲ್ಲಿ ನ್ಯಾಯ ಪಡೆಯುವ ಭರವಸೆಯಲ್ಲಿದ್ದಾರೆ. ಈ ತೀರ್ಪನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ ಎಂದು ಅಂಬಾದಾಸ್ ದಾನ್ವೆ ಹೇಳಿದ್ದಾರೆ.

ಮತ್ತೊಂದೆಡೆ, ಈ ನಿರ್ಧಾರವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ಮಹಾರಾಷ್ಟ್ರ ಸಚಿವ ಮತ್ತು ಶಿವಸೇನೆ (ಶಿಂಧೆ ಬಣ) ನಾಯಕ ದೀಪಕ್ ಕೇಸರ್ಕರ್ ಹೇಳಿದ್ದಾರೆ.

ಈ ನಿರ್ಧಾರದಿಂದ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಪಕ್ಷದಲ್ಲಿಯೂ ಪ್ರಜಾಪ್ರಭುತ್ವ ಇರಬೇಕು ಎಂಬುದು ಈ ನಿರ್ಧಾರದ ಸತ್ಯ… ಇದೊಂದು ಮಹತ್ವದ ತೀರ್ಪು… ಎಲ್ಲ ಸಂಗತಿಗಳನ್ನು ವಿಶ್ಲೇಷಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಸರಿಯಾದ ನಿರ್ಧಾರ ಎಂದರು.

ಕೇಂದ್ರ ಸಚಿವ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷ ರಾಮದಾಸ್ ಅಠವಳೆ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿ, ಇದು ಠಾಕ್ರೆಗೆ ದೊಡ್ಡ ಆಘಾತವಾಗಿದೆ ಎಂದು ಹೇಳಿದ್ದಾರೆ.

‘ತೀರ್ಪು ಉದ್ಧವ್ ಠಾಕ್ರೆಗೆ ದೊಡ್ಡ ಆಘಾತವಾಗಿದೆ. ಏಕನಾಥ್ ಶಿಂಧೆ ಸಿಎಂ ಆಗಿ ಉಳಿಯುತ್ತಾರೆ ಮತ್ತು ಅವರ ಬಣ ನಿಜವಾದ ಶಿವಸೇನೆ ರಾಜಕೀಯ ಪಕ್ಷವಾಗಿದೆ. ಈ ನಿರ್ಧಾರವು ಸಂವಿಧಾನದ ಪ್ರಕಾರವಾಗಿದೆ, ಇದು ಲೋಕಸಭೆ ಚುನಾವಣೆಯಲ್ಲಿ ನಮಗೆ ಲಾಭವಾಗಲಿದೆ’ ಎಂದು ಅವರು ಹೇಳಿದ್ದಾರೆ.

ನಾರ್ವೇಕರ್ ಅವರು ತಮ್ಮ ತೀರ್ಪಿನಲ್ಲಿ ಪಕ್ಷದ ನಾಯಕತ್ವ ರಚನೆಯನ್ನು ನಿರ್ಧರಿಸುವಲ್ಲಿ ಪಕ್ಷದ ಸಂವಿಧಾನದ ಪ್ರಸ್ತುತತೆಯನ್ನು ಒತ್ತಿಹೇಳಿದರು. ಇದು ಅಧಿಕೃತ ಶಿವಸೇನಾ ಬಣವನ್ನು ಗುರುತಿಸುವಲ್ಲಿ ನಿರ್ಣಾಯಕವಾಗಿದೆ.

ಇದನ್ನೂ ಓದಿ; ಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...