Homeಮುಖಪುಟಬಿಜೆಪಿಗೆ ಬುದ್ಧಿ ಹೇಳುವಂತೆ RSS ಗೆ ಪತ್ರ ಬರೆದ ಶಿವಸೇನೆ: ಮುಂದಿನ ಸಿಎಂ ಶಿವಸೇನೆಯಿಂದ ಎಂದ...

ಬಿಜೆಪಿಗೆ ಬುದ್ಧಿ ಹೇಳುವಂತೆ RSS ಗೆ ಪತ್ರ ಬರೆದ ಶಿವಸೇನೆ: ಮುಂದಿನ ಸಿಎಂ ಶಿವಸೇನೆಯಿಂದ ಎಂದ ರಾವತ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಹಗ್ಗ-ಜಗ್ಗಾಟ ಮುಂದುವರೆದಿದೆ. ಚುನಾವಣೆಗೂ ಮೊದಲು ಶಿವಸೇನೆ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಚುನಾವಣೆ ಫಲಿತಾಂಶದ ನಂತರ ವರಸೆ ಬದಲಿಸಿದೆ. ಮೈತ್ರಿ ನಿಯಮದಂತೆ ನಡೆದುಕೊಳ್ಳದ ಬಿಜೆಪಿ ನಡೆ ಶಿವಸೇನೆಗೆ ನುಂಗಲಾರದ ತುತ್ತಾಗಿದೆ. ಸಿಎಂ ಕುರ್ಚಿಗಾಗಿ ಹರಸಾಹಸ ಪಡುತ್ತಿರುವ ಶಿವಸೇನೆ, ಎನ್.ಸಿ.ಪಿ ಹಾಗೂ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಾಗಿದ್ದು, ಬಿಜೆಪಿಗೆ ಎಚ್ಚರಿಕೆ ನೀಡಿದೆ. ಆದರೆ ಇದ್ಯಾವುದಕ್ಕೂ ಬಗ್ಗದ ಬಿಜೆಪಿ, ಸಿಎಂ ಹುದ್ದೆ ಬಿಟ್ಟು ಕೊಡುವ ಮಾತಿಲ್ಲ ಎಂದಿದೆ.

ಈ ಜಟಾಪಟಿಯ ಮಧ್ಯೆ ಶಿವಸೇನೆ ನಾಯಕ ಕಿಶೋರ್ ತಿವಾರಿ, ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿ ಆರ್.ಎಸ್.ಎಸ್ ಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರದಲ್ಲಿ ಆರ್.ಎಸ್.ಎಸ್. ಮಧ್ಯಸ್ತಿಕೆ ವಹಿಸಬೇಕು. ಮುಖ್ಯಸ್ಥ ಮೋಹನ್ ಭಾಗವತ್ ಅವರು, ಬಿಜೆಪಿಗೆ 50:50 ಸೂತ್ರ ಪಾಲಿಸುವಂತೆ ಬುದ್ಧಿ ಹೇಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೇರಲು ಶಿವಸೇನೆ ಕಸರತ್ತು: 170 ಶಾಸಕರನ್ನು ಭೇಟಿಯಾಗಲು ಸಿದ್ಧತೆ..!

ಬಿಜೆಪಿ 50:50 ಸೂತ್ರದಂತೆ ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಚುನಾವಣಾ ಪೂರ್ವದಲ್ಲಿ ಸಮಾನ ಅಧಿಕಾರ ನಿಯಮಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದ ಬಿಜೆಪಿ ಈಗ ಹಾಗೆ ನಡೆದುಕೊಳ್ಳುತ್ತಿಲ್ಲ. ಮೈತ್ರಿ ಧರ್ಮ ಪಾಲಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಸರ್ಕಾರ ರಚನೆ ಅಸಾಧ್ಯವಾಗಿದೆ. ನೀವೊಮ್ಮೆ ಬಿಜೆಪಿ ಜತೆ ಚರ್ಚಿಸಬೇಕು ಎಂದು ಕೇಳಿದೆ.

ಆದರೆ ಇದ್ಯಾವುದಕ್ಕೂ ಆರ್.ಎಸ್.ಎಸ್ ಉತ್ತರ ನೀಡಿಲ್ಲ. 2014ರಲ್ಲಿ ಬಿಜೆಪಿ ಹಾಕಿದ್ದ ಷರತ್ತುಗಳನ್ನು ಪಾಲಿಸಿದ್ದೇವೆ. ಈಗ ಅಡಕತ್ತರಿಯಲ್ಲಿ ಸಿಕ್ಕಂತಾಗಿದ್ದೇವೆ. ಒಂದು ವೇಳೆ ಬಿಜೆಪಿ ನಿಯಮವನ್ನು ಗಾಳಿಗೆ ತೂರಿದರೆ ಮುಂದಿನ ಹೆಜ್ಜೆಯಿರಿಸಲು ಶಿವಸೇನೆ ರೆಡಿಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಇತ್ತ ಶಿವಸೇನೆ ವಕ್ತಾರ ಸಂಜಯ್ ರಾವತ್ ಮಾತನಾಡಿ, ರಾಜ್ಯದ ಮುಂದಿನ ಸಿಎಂ ಶಿವಸೇನೆ ಪಕ್ಷದಿಂದಲೇ ಆಗಬೇಕು. ಇದು ಆದಷ್ಟು ಬೇಗ ಆಗಲಿದೆ. ಎನ್‌ಸಿಪಿಯ ಶರದ್ ಪವಾರ್ ಅವರಿಗೂ ಸಿಎಂ ಸ್ಥಾನ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆ ಬದಲಾಗಲಿದೆ. ಇದು ರಾಜಕೀಯ ಹಂಗಾಮಾ ಅಲ್ಲ, ನ್ಯಾಯಕ್ಕಾಗಿ ಮತ್ತು ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟ. ಸಮಾನತೆ ಮಂತ್ರ ಜಪಿಸುವ ಬಿಜೆಪಿ, ಅದನ್ನು ಅಳವಡಿಸಿಕೊಳ್ಳಬೇಕು. ಏನೇ ಆದರೂ ಜಯ ನಮ್ಮದೇ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...