Homeಮುಖಪುಟಬಿಜೆಪಿಗೆ ಬುದ್ಧಿ ಹೇಳುವಂತೆ RSS ಗೆ ಪತ್ರ ಬರೆದ ಶಿವಸೇನೆ: ಮುಂದಿನ ಸಿಎಂ ಶಿವಸೇನೆಯಿಂದ ಎಂದ...

ಬಿಜೆಪಿಗೆ ಬುದ್ಧಿ ಹೇಳುವಂತೆ RSS ಗೆ ಪತ್ರ ಬರೆದ ಶಿವಸೇನೆ: ಮುಂದಿನ ಸಿಎಂ ಶಿವಸೇನೆಯಿಂದ ಎಂದ ರಾವತ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಹಗ್ಗ-ಜಗ್ಗಾಟ ಮುಂದುವರೆದಿದೆ. ಚುನಾವಣೆಗೂ ಮೊದಲು ಶಿವಸೇನೆ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಚುನಾವಣೆ ಫಲಿತಾಂಶದ ನಂತರ ವರಸೆ ಬದಲಿಸಿದೆ. ಮೈತ್ರಿ ನಿಯಮದಂತೆ ನಡೆದುಕೊಳ್ಳದ ಬಿಜೆಪಿ ನಡೆ ಶಿವಸೇನೆಗೆ ನುಂಗಲಾರದ ತುತ್ತಾಗಿದೆ. ಸಿಎಂ ಕುರ್ಚಿಗಾಗಿ ಹರಸಾಹಸ ಪಡುತ್ತಿರುವ ಶಿವಸೇನೆ, ಎನ್.ಸಿ.ಪಿ ಹಾಗೂ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಾಗಿದ್ದು, ಬಿಜೆಪಿಗೆ ಎಚ್ಚರಿಕೆ ನೀಡಿದೆ. ಆದರೆ ಇದ್ಯಾವುದಕ್ಕೂ ಬಗ್ಗದ ಬಿಜೆಪಿ, ಸಿಎಂ ಹುದ್ದೆ ಬಿಟ್ಟು ಕೊಡುವ ಮಾತಿಲ್ಲ ಎಂದಿದೆ.

ಈ ಜಟಾಪಟಿಯ ಮಧ್ಯೆ ಶಿವಸೇನೆ ನಾಯಕ ಕಿಶೋರ್ ತಿವಾರಿ, ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿ ಆರ್.ಎಸ್.ಎಸ್ ಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರದಲ್ಲಿ ಆರ್.ಎಸ್.ಎಸ್. ಮಧ್ಯಸ್ತಿಕೆ ವಹಿಸಬೇಕು. ಮುಖ್ಯಸ್ಥ ಮೋಹನ್ ಭಾಗವತ್ ಅವರು, ಬಿಜೆಪಿಗೆ 50:50 ಸೂತ್ರ ಪಾಲಿಸುವಂತೆ ಬುದ್ಧಿ ಹೇಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೇರಲು ಶಿವಸೇನೆ ಕಸರತ್ತು: 170 ಶಾಸಕರನ್ನು ಭೇಟಿಯಾಗಲು ಸಿದ್ಧತೆ..!

ಬಿಜೆಪಿ 50:50 ಸೂತ್ರದಂತೆ ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಚುನಾವಣಾ ಪೂರ್ವದಲ್ಲಿ ಸಮಾನ ಅಧಿಕಾರ ನಿಯಮಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದ ಬಿಜೆಪಿ ಈಗ ಹಾಗೆ ನಡೆದುಕೊಳ್ಳುತ್ತಿಲ್ಲ. ಮೈತ್ರಿ ಧರ್ಮ ಪಾಲಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಸರ್ಕಾರ ರಚನೆ ಅಸಾಧ್ಯವಾಗಿದೆ. ನೀವೊಮ್ಮೆ ಬಿಜೆಪಿ ಜತೆ ಚರ್ಚಿಸಬೇಕು ಎಂದು ಕೇಳಿದೆ.

ಆದರೆ ಇದ್ಯಾವುದಕ್ಕೂ ಆರ್.ಎಸ್.ಎಸ್ ಉತ್ತರ ನೀಡಿಲ್ಲ. 2014ರಲ್ಲಿ ಬಿಜೆಪಿ ಹಾಕಿದ್ದ ಷರತ್ತುಗಳನ್ನು ಪಾಲಿಸಿದ್ದೇವೆ. ಈಗ ಅಡಕತ್ತರಿಯಲ್ಲಿ ಸಿಕ್ಕಂತಾಗಿದ್ದೇವೆ. ಒಂದು ವೇಳೆ ಬಿಜೆಪಿ ನಿಯಮವನ್ನು ಗಾಳಿಗೆ ತೂರಿದರೆ ಮುಂದಿನ ಹೆಜ್ಜೆಯಿರಿಸಲು ಶಿವಸೇನೆ ರೆಡಿಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಇತ್ತ ಶಿವಸೇನೆ ವಕ್ತಾರ ಸಂಜಯ್ ರಾವತ್ ಮಾತನಾಡಿ, ರಾಜ್ಯದ ಮುಂದಿನ ಸಿಎಂ ಶಿವಸೇನೆ ಪಕ್ಷದಿಂದಲೇ ಆಗಬೇಕು. ಇದು ಆದಷ್ಟು ಬೇಗ ಆಗಲಿದೆ. ಎನ್‌ಸಿಪಿಯ ಶರದ್ ಪವಾರ್ ಅವರಿಗೂ ಸಿಎಂ ಸ್ಥಾನ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆ ಬದಲಾಗಲಿದೆ. ಇದು ರಾಜಕೀಯ ಹಂಗಾಮಾ ಅಲ್ಲ, ನ್ಯಾಯಕ್ಕಾಗಿ ಮತ್ತು ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟ. ಸಮಾನತೆ ಮಂತ್ರ ಜಪಿಸುವ ಬಿಜೆಪಿ, ಅದನ್ನು ಅಳವಡಿಸಿಕೊಳ್ಳಬೇಕು. ಏನೇ ಆದರೂ ಜಯ ನಮ್ಮದೇ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...