Homeಮುಖಪುಟವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

- Advertisement -
- Advertisement -

ನಟ ಶಿವರಾಜ್‌ಕುಮಾರ್ ಇಂದು 58ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಅವರ ಆತ್ಮೀಯ ಸ್ನೇಹಿತರೂ ಆದ ನಟ-ನಿರ್ದೇಶಕ ಚಿ.ಗುರುದತ್ ಹ್ಯಾಟ್ರಿಕ್ ಹೀರೋ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಳ್ಳುತ್ತಾ ಶುಭಾಶಯ ಕೋರಿದ್ದಾರೆ.

***

ಬಾಲ್ಯದಲ್ಲಿ ಒಟ್ಟಿಗೇ ಆಡಿಕೊಂಡು ಬೆಳೆದ ಶಿವಣ್ಣ ಮತ್ತು ನಾನು `ಆನಂದ್’ (1986) ಚಿತ್ರದೊಂದಿಗೆ ಒಟ್ಟಿಗೇ ಬಣ್ಣ ಹಚ್ಚಿದವರು. `ಆನಂದ್’ ಚಿತ್ರಕ್ಕಾಗಿ ನನಗೆ ಅವರೇ ಒಂದು ತಿಂಗಳು ಕಾರು ಡ್ರೈವಿಂಗ್ ಹೇಳಿಕೊಟ್ಟಿದ್ದರು. ಚಿತ್ರೀಕರಣದಲ್ಲಿ ಡ್ರೈವಿಂಗ್ ಕೈಕೊಟ್ಟಾಗ ಅಲ್ಲಿಯೂ ಶಿವಣ್ಣನ ನೆರವು ಬೇಕಾಗುತ್ತಿತ್ತು. ಮುಂದೆ ಕೂಡ ನನ್ನ ಸಿನಿಮಾ ಬದುಕಿನ ಪ್ರಮುಖ ಹಂತಗಳಲ್ಲಿ ಅವರ ನೆರವು ಒದಗಿಬಂದಿತು. ನನ್ನನ್ನು ನಿರ್ಮಾಪಕನನ್ನಾಗಿ (ಆನಂದಜ್ಯೋತಿ) ಮತ್ತು ನಿರ್ದೇಶಕನನ್ನಾಗಿ (ಸಮರ) ಮಾಡಿದ್ದು ಕೂಡ ಶಿವಣ್ಣನೇ.

ನಾನು, ಅವರು ಮತ್ತು ಬಾಲು (ಬಾಲರಾಜ್) ನಾಯಕರಾಗಿ ನಟಿಸಿದ `ಸಂಯುಕ್ತ’ ಆಗ ಕನ್ನಡದಲ್ಲೊಂದು ಉತ್ತಮ ಥ್ರಿಲ್ಲರ್ ಸಿನಿಮಾ. ಕಾಕೋಳು ಸರೋಜಾ ರಾವ್ ಅವರ ಕಾದಂಬರಿಯನ್ನು ಆಧರಿಸಿ ಮಾಡಿದ ಈ ಸಿನಿಮಾದ ನಿರ್ದೇಶಕರು ಚಂದ್ರಶೇಖರ ಶರ್ಮಾ. ಹಾಗೆ ನೋಡಿದರೆ ಇದು ನಾನು ಮತ್ತು ಬಾಲರಾಜ್ ನಟಿಸಬೇಕೆಂದಿದ್ದ ಸಿನಿಮಾ. ಅಂತಿಮ ಹಂತದಲ್ಲಿ ಶಿವರಾಜ್‌ಕುಮಾರ್ ತಂಡಕ್ಕೆ ಸೇರಿಕೊಂಡರು. ಆಗ ಹ್ಯಾಟ್ರಿಕ್ ಹೀರೋ (ಆನಂದ್, ರಥಸಪ್ತಮಿ ಮತ್ತು ಮನಮೆಚ್ಚಿದ ಹುಡುಗಿ) ಆಗಿದ್ದ ಶಿವರಾಜಕುಮಾರ್‌ಗೆ ಇದು ನಾಲ್ಕನೇ ಸಿನಿಮಾ. ದೊಡ್ಡ ಯಶಸ್ಸು ಕಂಡ ಹೀರೋ ಎನ್ನುವ ಯಾವುದೇ ಸಣ್ಣ ಹಿಂಜರಿಕೆಯೂ ಇಲ್ಲದೆ ಖುಷಿಯಿಂದ ನಮಗೆ ಜೊತೆಯಾದರು. ನಮ್ಮಿಬ್ಬರ ಸಿನಿಮಾ ಬದುಕಿಗೆ ನೆರವಾಗುತ್ತದೆ ಎನ್ನುವ ದೃಷ್ಟಿಯಿಂದ ಯೋಜನೆಗೆ ಕೈಜೋಡಿಸಿದರು. ಮೊದಲು ಚಿಕ್ಕ ಪ್ರಾಜೆಕ್ಟ್ ಎಂದುಕೊಂಡಿದ್ದ ಇದು ಶಿವರಾಜ್ ಸೇರ್ಪಡೆಯಿಂದ ದೊಡ್ಡ ಸಿನಿಮಾ ಆಗಿ ಯಶಸ್ಸು ಕಂಡಿತು.

ಸದಾ ಚಟುವಟಿಕೆಯಿಂದಿರುವ ಶಿವರಾಜ್ ಶೂಟಿಂಗ್ ಸೆಟ್‍ನಲ್ಲಿದ್ದರೆ ಒಂದು ರೀತಿ ಉತ್ಸಾಹ. ದಿನೇಶ್‍ಬಾಬು ನಿರ್ದೇಶನದ `ಇನ್‍ಸ್ಪೆಕ್ಟರ್ ವಿಕ್ರಂ’ ಶೂಟಿಂಗ್ ಸಂದರ್ಭವೊಂದು ನನಗೆ ನೆನಪಾಗುತ್ತದೆ. ಶಿವಣ್ಣ ಹೀರೋ ಆಗಿ ನಟಿಸಿದ್ದ ಚಿತ್ರದಲ್ಲಿ ನನಗೊಂದು ಪ್ರಮುಖ ಪಾತ್ರವಿತ್ತು. ಕೆಮ್ಮಣ್ಣುಗುಂಡಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ನಾವೆಲ್ಲರೂ ಪಾಲ್ಗೊಂಡಿದ್ದೆವು. ನಿರ್ದೇಶಕ ದಿನೇಶ್ ಬಾಬು ಅವರ ಆತ್ಮೀಯರೂ ಆಗಿದ್ದ ತಮಿಳು ನಟ ನಾರಾಯಣ್ ಚಿತ್ರದ ಖಳ ಪಾತ್ರದಲ್ಲಿ ನಟಿಸುತ್ತಿದ್ದರು. ಸನ್ನಿವೇಶವೊಂದರಲ್ಲಿ ನಾರಾಯಣ್ ವೇಗವಾಗಿ ಕಾರು ಓಡಿಸಿಕೊಂಡು ಬಂದು ಒಮ್ಮೆಗೇ ಬ್ರೇಕ್ ಹಾಕಿ ಕಾರನ್ನು ತಿರುಗಿಸಿ ನಿಲ್ಲಿಸಬೇಕಿತ್ತು. ನಾಲ್ಕೈದು ಟೇಕ್‍ಗಳಾದರೂ ಶಾಟ್ ಓಕೆಯಾಗಲಿಲ್ಲ. ಕೊನೆಗೆ ನಾರಾಯಣ್‍ಗೆ ತಾವು ಡ್ಯೂಪ್ ಆಗುವುದಾಗಿ ಶಿವಣ್ಣ ಎದ್ದುನಿಂತರು! ಅದು ರಿಸ್ಕೀ ಶಾಟ್ ಆದ್ದರಿಂದ ಎಲ್ಲರೂ ಬೇಡವೆಂದೆವು. ನಮ್ಮ ಮಾತು ಕೇಳದ ಶಿವಣ್ಣ, ನಾರಾಯಣ್‍ರ ಷರ್ಟ್ ಹಾಕಿಕೊಂಡು ಕಾರು ಹತ್ತಿದರು. ಡ್ರೈವಿಂಗ್ ಎಕ್ಸ್‌ಪರ್ಟ್ ಆಗಿದ್ದರಿಂದ ಅವರಿಗೊಂದಿಷ್ಟು ಟೆಕ್ನಿಕ್‍ಗಳು ಗೊತ್ತಿದ್ದವು. ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಒಂದೇ ಟೇಕ್‍ಗೆ ರಿಸ್ಕೀ ಶಾಟ್ ಓಕೆ ಮಾಡಿದರು. ಕೊಂಚ ಎಡವಟ್ಟಾಗಿದ್ದರೂ ಕಾರು ಪಲ್ಟಿಯಾಗುವ ಸಾಧ್ಯತೆಗಳಿದ್ದವು. ಹೆದರದ ಶಿವಣ್ಣ ವಿಲನ್‍ಗೆ `ಡ್ಯೂಪ್’ ಆಗಿ ಎಲ್ಲರಿಂದಲೂ ಚಪ್ಪಾಳೆ ಗಿಟ್ಟಿಸಿದರು!

ನಾಯಕನೇ ನೃತ್ಯ ಸಂಯೋಜಿಸಿದಾಗ…

ಶಿವರಾಜ್ ಪ್ರೋತ್ಸಾಹದ ಮೇರೆಗೆ `ಸಮರ’ ಚಿತ್ರದ ಮೂಲಕ ನಾನು ನಿರ್ದೇಶಕನ ಹ್ಯಾಟ್ ಧರಿಸುವಂತಾಯ್ತು. ಶಿವರಾಜಕುಮಾರ್ ಮತ್ತು ಸುಧಾರಾಣಿ ಚಿತ್ರದ ಹೀರೋ-ಹಿರೋಯಿನ್. ಸಿಂಗಾಪೂರದಲ್ಲಿ ಚಿತ್ರದ ಎರಡು ಹಾಡುಗಳನ್ನು ಚಿತ್ರಿಸುವುದೆಂದು ನಿರ್ಧರಿಸಿದ್ದೆವು. ಅಂದುಕೊಂಡಂತೆಯೇ ಬೆಂಗಳೂರಿನಿಂದ ನಮ್ಮದೊಂದು ಚಿಕ್ಕ ತಂಡದೊಂದಿಗೆ ಸಿಂಗಾಪೂರಕ್ಕೆ ಹೋದೆವು. ನೃತ್ಯ ನಿರ್ದೇಶಕ ಜಾನ್ ಬಾಲು ಚೆನ್ನೈನಿಂದ ಬಂದು ನಮ್ಮನ್ನು ಕೂಡಿಕೊಳ್ಳಬೇಕಿತ್ತು. ಕಾರಣಾಂತರಗಳಿಂದಾಗಿ ಅವರು ಚೆನ್ನೈನಲ್ಲೇ ಉಳಿಯುವಂತಾದಾಗ ನಾವು ಕಂಗಾಲಾದೆವು.

ನಮಗೆ ಅಲ್ಲಿ ಚಿತ್ರಿಸಲು ಅನುಮತಿ ಸಿಕ್ಕಿದ್ದು ನಾಲ್ಕು ದಿನವಷ್ಟೇ. ನಿರ್ದೇಶಕನಾದ ನಾನು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಶಿವಣ್ಣ ತಾವೇ `ನೃತ್ಯ ನಿರ್ದೇಶಕ’ನಾಗುವುದಾಗಿ ಹೇಳಿದರು! ಸಂಪೂರ್ಣ ವಿಫಲವಾಗಬೇಕಿದ್ದ ಸಿಂಗಾಪೂರ್ ಟೂರ್‌ಗೆ ಮತ್ತೆ ಜೀವ ಬಂದಂತಾಯಿತು. ನಾನು ಮೇಕಪ್-ಟಚ್‍ಅಪ್, ಟ್ರ್ಯಾಲಿ ಹ್ಯಾಂಡ್ಲಿಂಗ್ ನೋಡಿಕೊಂಡರೆ ಹೀರೋ ಶಿವಣ್ಣ ನೃತ್ಯ ನಿರ್ದೇಶಕರಾದರು. ನೃತ್ಯದಲ್ಲಿ ಅಪಾರ ಪರಿಣತಿಯಿರುವ ಶಿವಣ್ಣ ಚಿತ್ರದ ಎರಡು ಹಾಡುಗಳಿಗೆ ನೃತ್ಯ ಸಂಯೋಜಿಸಿದರು. ತಮ್ಮ ನೃತ್ಯ ಸಂಯೋಜನೆಗೆ ತಾವೇ ಹೆಜ್ಜೆ ಹಾಕುತ್ತಾ ಸಿಂಗಾಪೂರ ಪ್ರವಾಸವನ್ನು ಯಶಸ್ವಿಗೊಳಿಸಿದರು.

  • ಚಿ.ಗುರುದತ್ 

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...