Homeಮುಖಪುಟವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

- Advertisement -
- Advertisement -

ನಟ ಶಿವರಾಜ್‌ಕುಮಾರ್ ಇಂದು 58ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಅವರ ಆತ್ಮೀಯ ಸ್ನೇಹಿತರೂ ಆದ ನಟ-ನಿರ್ದೇಶಕ ಚಿ.ಗುರುದತ್ ಹ್ಯಾಟ್ರಿಕ್ ಹೀರೋ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಳ್ಳುತ್ತಾ ಶುಭಾಶಯ ಕೋರಿದ್ದಾರೆ.

***

ಬಾಲ್ಯದಲ್ಲಿ ಒಟ್ಟಿಗೇ ಆಡಿಕೊಂಡು ಬೆಳೆದ ಶಿವಣ್ಣ ಮತ್ತು ನಾನು `ಆನಂದ್’ (1986) ಚಿತ್ರದೊಂದಿಗೆ ಒಟ್ಟಿಗೇ ಬಣ್ಣ ಹಚ್ಚಿದವರು. `ಆನಂದ್’ ಚಿತ್ರಕ್ಕಾಗಿ ನನಗೆ ಅವರೇ ಒಂದು ತಿಂಗಳು ಕಾರು ಡ್ರೈವಿಂಗ್ ಹೇಳಿಕೊಟ್ಟಿದ್ದರು. ಚಿತ್ರೀಕರಣದಲ್ಲಿ ಡ್ರೈವಿಂಗ್ ಕೈಕೊಟ್ಟಾಗ ಅಲ್ಲಿಯೂ ಶಿವಣ್ಣನ ನೆರವು ಬೇಕಾಗುತ್ತಿತ್ತು. ಮುಂದೆ ಕೂಡ ನನ್ನ ಸಿನಿಮಾ ಬದುಕಿನ ಪ್ರಮುಖ ಹಂತಗಳಲ್ಲಿ ಅವರ ನೆರವು ಒದಗಿಬಂದಿತು. ನನ್ನನ್ನು ನಿರ್ಮಾಪಕನನ್ನಾಗಿ (ಆನಂದಜ್ಯೋತಿ) ಮತ್ತು ನಿರ್ದೇಶಕನನ್ನಾಗಿ (ಸಮರ) ಮಾಡಿದ್ದು ಕೂಡ ಶಿವಣ್ಣನೇ.

ನಾನು, ಅವರು ಮತ್ತು ಬಾಲು (ಬಾಲರಾಜ್) ನಾಯಕರಾಗಿ ನಟಿಸಿದ `ಸಂಯುಕ್ತ’ ಆಗ ಕನ್ನಡದಲ್ಲೊಂದು ಉತ್ತಮ ಥ್ರಿಲ್ಲರ್ ಸಿನಿಮಾ. ಕಾಕೋಳು ಸರೋಜಾ ರಾವ್ ಅವರ ಕಾದಂಬರಿಯನ್ನು ಆಧರಿಸಿ ಮಾಡಿದ ಈ ಸಿನಿಮಾದ ನಿರ್ದೇಶಕರು ಚಂದ್ರಶೇಖರ ಶರ್ಮಾ. ಹಾಗೆ ನೋಡಿದರೆ ಇದು ನಾನು ಮತ್ತು ಬಾಲರಾಜ್ ನಟಿಸಬೇಕೆಂದಿದ್ದ ಸಿನಿಮಾ. ಅಂತಿಮ ಹಂತದಲ್ಲಿ ಶಿವರಾಜ್‌ಕುಮಾರ್ ತಂಡಕ್ಕೆ ಸೇರಿಕೊಂಡರು. ಆಗ ಹ್ಯಾಟ್ರಿಕ್ ಹೀರೋ (ಆನಂದ್, ರಥಸಪ್ತಮಿ ಮತ್ತು ಮನಮೆಚ್ಚಿದ ಹುಡುಗಿ) ಆಗಿದ್ದ ಶಿವರಾಜಕುಮಾರ್‌ಗೆ ಇದು ನಾಲ್ಕನೇ ಸಿನಿಮಾ. ದೊಡ್ಡ ಯಶಸ್ಸು ಕಂಡ ಹೀರೋ ಎನ್ನುವ ಯಾವುದೇ ಸಣ್ಣ ಹಿಂಜರಿಕೆಯೂ ಇಲ್ಲದೆ ಖುಷಿಯಿಂದ ನಮಗೆ ಜೊತೆಯಾದರು. ನಮ್ಮಿಬ್ಬರ ಸಿನಿಮಾ ಬದುಕಿಗೆ ನೆರವಾಗುತ್ತದೆ ಎನ್ನುವ ದೃಷ್ಟಿಯಿಂದ ಯೋಜನೆಗೆ ಕೈಜೋಡಿಸಿದರು. ಮೊದಲು ಚಿಕ್ಕ ಪ್ರಾಜೆಕ್ಟ್ ಎಂದುಕೊಂಡಿದ್ದ ಇದು ಶಿವರಾಜ್ ಸೇರ್ಪಡೆಯಿಂದ ದೊಡ್ಡ ಸಿನಿಮಾ ಆಗಿ ಯಶಸ್ಸು ಕಂಡಿತು.

ಸದಾ ಚಟುವಟಿಕೆಯಿಂದಿರುವ ಶಿವರಾಜ್ ಶೂಟಿಂಗ್ ಸೆಟ್‍ನಲ್ಲಿದ್ದರೆ ಒಂದು ರೀತಿ ಉತ್ಸಾಹ. ದಿನೇಶ್‍ಬಾಬು ನಿರ್ದೇಶನದ `ಇನ್‍ಸ್ಪೆಕ್ಟರ್ ವಿಕ್ರಂ’ ಶೂಟಿಂಗ್ ಸಂದರ್ಭವೊಂದು ನನಗೆ ನೆನಪಾಗುತ್ತದೆ. ಶಿವಣ್ಣ ಹೀರೋ ಆಗಿ ನಟಿಸಿದ್ದ ಚಿತ್ರದಲ್ಲಿ ನನಗೊಂದು ಪ್ರಮುಖ ಪಾತ್ರವಿತ್ತು. ಕೆಮ್ಮಣ್ಣುಗುಂಡಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ನಾವೆಲ್ಲರೂ ಪಾಲ್ಗೊಂಡಿದ್ದೆವು. ನಿರ್ದೇಶಕ ದಿನೇಶ್ ಬಾಬು ಅವರ ಆತ್ಮೀಯರೂ ಆಗಿದ್ದ ತಮಿಳು ನಟ ನಾರಾಯಣ್ ಚಿತ್ರದ ಖಳ ಪಾತ್ರದಲ್ಲಿ ನಟಿಸುತ್ತಿದ್ದರು. ಸನ್ನಿವೇಶವೊಂದರಲ್ಲಿ ನಾರಾಯಣ್ ವೇಗವಾಗಿ ಕಾರು ಓಡಿಸಿಕೊಂಡು ಬಂದು ಒಮ್ಮೆಗೇ ಬ್ರೇಕ್ ಹಾಕಿ ಕಾರನ್ನು ತಿರುಗಿಸಿ ನಿಲ್ಲಿಸಬೇಕಿತ್ತು. ನಾಲ್ಕೈದು ಟೇಕ್‍ಗಳಾದರೂ ಶಾಟ್ ಓಕೆಯಾಗಲಿಲ್ಲ. ಕೊನೆಗೆ ನಾರಾಯಣ್‍ಗೆ ತಾವು ಡ್ಯೂಪ್ ಆಗುವುದಾಗಿ ಶಿವಣ್ಣ ಎದ್ದುನಿಂತರು! ಅದು ರಿಸ್ಕೀ ಶಾಟ್ ಆದ್ದರಿಂದ ಎಲ್ಲರೂ ಬೇಡವೆಂದೆವು. ನಮ್ಮ ಮಾತು ಕೇಳದ ಶಿವಣ್ಣ, ನಾರಾಯಣ್‍ರ ಷರ್ಟ್ ಹಾಕಿಕೊಂಡು ಕಾರು ಹತ್ತಿದರು. ಡ್ರೈವಿಂಗ್ ಎಕ್ಸ್‌ಪರ್ಟ್ ಆಗಿದ್ದರಿಂದ ಅವರಿಗೊಂದಿಷ್ಟು ಟೆಕ್ನಿಕ್‍ಗಳು ಗೊತ್ತಿದ್ದವು. ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಒಂದೇ ಟೇಕ್‍ಗೆ ರಿಸ್ಕೀ ಶಾಟ್ ಓಕೆ ಮಾಡಿದರು. ಕೊಂಚ ಎಡವಟ್ಟಾಗಿದ್ದರೂ ಕಾರು ಪಲ್ಟಿಯಾಗುವ ಸಾಧ್ಯತೆಗಳಿದ್ದವು. ಹೆದರದ ಶಿವಣ್ಣ ವಿಲನ್‍ಗೆ `ಡ್ಯೂಪ್’ ಆಗಿ ಎಲ್ಲರಿಂದಲೂ ಚಪ್ಪಾಳೆ ಗಿಟ್ಟಿಸಿದರು!

ನಾಯಕನೇ ನೃತ್ಯ ಸಂಯೋಜಿಸಿದಾಗ…

ಶಿವರಾಜ್ ಪ್ರೋತ್ಸಾಹದ ಮೇರೆಗೆ `ಸಮರ’ ಚಿತ್ರದ ಮೂಲಕ ನಾನು ನಿರ್ದೇಶಕನ ಹ್ಯಾಟ್ ಧರಿಸುವಂತಾಯ್ತು. ಶಿವರಾಜಕುಮಾರ್ ಮತ್ತು ಸುಧಾರಾಣಿ ಚಿತ್ರದ ಹೀರೋ-ಹಿರೋಯಿನ್. ಸಿಂಗಾಪೂರದಲ್ಲಿ ಚಿತ್ರದ ಎರಡು ಹಾಡುಗಳನ್ನು ಚಿತ್ರಿಸುವುದೆಂದು ನಿರ್ಧರಿಸಿದ್ದೆವು. ಅಂದುಕೊಂಡಂತೆಯೇ ಬೆಂಗಳೂರಿನಿಂದ ನಮ್ಮದೊಂದು ಚಿಕ್ಕ ತಂಡದೊಂದಿಗೆ ಸಿಂಗಾಪೂರಕ್ಕೆ ಹೋದೆವು. ನೃತ್ಯ ನಿರ್ದೇಶಕ ಜಾನ್ ಬಾಲು ಚೆನ್ನೈನಿಂದ ಬಂದು ನಮ್ಮನ್ನು ಕೂಡಿಕೊಳ್ಳಬೇಕಿತ್ತು. ಕಾರಣಾಂತರಗಳಿಂದಾಗಿ ಅವರು ಚೆನ್ನೈನಲ್ಲೇ ಉಳಿಯುವಂತಾದಾಗ ನಾವು ಕಂಗಾಲಾದೆವು.

ನಮಗೆ ಅಲ್ಲಿ ಚಿತ್ರಿಸಲು ಅನುಮತಿ ಸಿಕ್ಕಿದ್ದು ನಾಲ್ಕು ದಿನವಷ್ಟೇ. ನಿರ್ದೇಶಕನಾದ ನಾನು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಶಿವಣ್ಣ ತಾವೇ `ನೃತ್ಯ ನಿರ್ದೇಶಕ’ನಾಗುವುದಾಗಿ ಹೇಳಿದರು! ಸಂಪೂರ್ಣ ವಿಫಲವಾಗಬೇಕಿದ್ದ ಸಿಂಗಾಪೂರ್ ಟೂರ್‌ಗೆ ಮತ್ತೆ ಜೀವ ಬಂದಂತಾಯಿತು. ನಾನು ಮೇಕಪ್-ಟಚ್‍ಅಪ್, ಟ್ರ್ಯಾಲಿ ಹ್ಯಾಂಡ್ಲಿಂಗ್ ನೋಡಿಕೊಂಡರೆ ಹೀರೋ ಶಿವಣ್ಣ ನೃತ್ಯ ನಿರ್ದೇಶಕರಾದರು. ನೃತ್ಯದಲ್ಲಿ ಅಪಾರ ಪರಿಣತಿಯಿರುವ ಶಿವಣ್ಣ ಚಿತ್ರದ ಎರಡು ಹಾಡುಗಳಿಗೆ ನೃತ್ಯ ಸಂಯೋಜಿಸಿದರು. ತಮ್ಮ ನೃತ್ಯ ಸಂಯೋಜನೆಗೆ ತಾವೇ ಹೆಜ್ಜೆ ಹಾಕುತ್ತಾ ಸಿಂಗಾಪೂರ ಪ್ರವಾಸವನ್ನು ಯಶಸ್ವಿಗೊಳಿಸಿದರು.

  • ಚಿ.ಗುರುದತ್ 

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...