Homeಮುಖಪುಟವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

- Advertisement -
- Advertisement -

ನಟ ಶಿವರಾಜ್‌ಕುಮಾರ್ ಇಂದು 58ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಅವರ ಆತ್ಮೀಯ ಸ್ನೇಹಿತರೂ ಆದ ನಟ-ನಿರ್ದೇಶಕ ಚಿ.ಗುರುದತ್ ಹ್ಯಾಟ್ರಿಕ್ ಹೀರೋ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಳ್ಳುತ್ತಾ ಶುಭಾಶಯ ಕೋರಿದ್ದಾರೆ.

***

ಬಾಲ್ಯದಲ್ಲಿ ಒಟ್ಟಿಗೇ ಆಡಿಕೊಂಡು ಬೆಳೆದ ಶಿವಣ್ಣ ಮತ್ತು ನಾನು `ಆನಂದ್’ (1986) ಚಿತ್ರದೊಂದಿಗೆ ಒಟ್ಟಿಗೇ ಬಣ್ಣ ಹಚ್ಚಿದವರು. `ಆನಂದ್’ ಚಿತ್ರಕ್ಕಾಗಿ ನನಗೆ ಅವರೇ ಒಂದು ತಿಂಗಳು ಕಾರು ಡ್ರೈವಿಂಗ್ ಹೇಳಿಕೊಟ್ಟಿದ್ದರು. ಚಿತ್ರೀಕರಣದಲ್ಲಿ ಡ್ರೈವಿಂಗ್ ಕೈಕೊಟ್ಟಾಗ ಅಲ್ಲಿಯೂ ಶಿವಣ್ಣನ ನೆರವು ಬೇಕಾಗುತ್ತಿತ್ತು. ಮುಂದೆ ಕೂಡ ನನ್ನ ಸಿನಿಮಾ ಬದುಕಿನ ಪ್ರಮುಖ ಹಂತಗಳಲ್ಲಿ ಅವರ ನೆರವು ಒದಗಿಬಂದಿತು. ನನ್ನನ್ನು ನಿರ್ಮಾಪಕನನ್ನಾಗಿ (ಆನಂದಜ್ಯೋತಿ) ಮತ್ತು ನಿರ್ದೇಶಕನನ್ನಾಗಿ (ಸಮರ) ಮಾಡಿದ್ದು ಕೂಡ ಶಿವಣ್ಣನೇ.

ನಾನು, ಅವರು ಮತ್ತು ಬಾಲು (ಬಾಲರಾಜ್) ನಾಯಕರಾಗಿ ನಟಿಸಿದ `ಸಂಯುಕ್ತ’ ಆಗ ಕನ್ನಡದಲ್ಲೊಂದು ಉತ್ತಮ ಥ್ರಿಲ್ಲರ್ ಸಿನಿಮಾ. ಕಾಕೋಳು ಸರೋಜಾ ರಾವ್ ಅವರ ಕಾದಂಬರಿಯನ್ನು ಆಧರಿಸಿ ಮಾಡಿದ ಈ ಸಿನಿಮಾದ ನಿರ್ದೇಶಕರು ಚಂದ್ರಶೇಖರ ಶರ್ಮಾ. ಹಾಗೆ ನೋಡಿದರೆ ಇದು ನಾನು ಮತ್ತು ಬಾಲರಾಜ್ ನಟಿಸಬೇಕೆಂದಿದ್ದ ಸಿನಿಮಾ. ಅಂತಿಮ ಹಂತದಲ್ಲಿ ಶಿವರಾಜ್‌ಕುಮಾರ್ ತಂಡಕ್ಕೆ ಸೇರಿಕೊಂಡರು. ಆಗ ಹ್ಯಾಟ್ರಿಕ್ ಹೀರೋ (ಆನಂದ್, ರಥಸಪ್ತಮಿ ಮತ್ತು ಮನಮೆಚ್ಚಿದ ಹುಡುಗಿ) ಆಗಿದ್ದ ಶಿವರಾಜಕುಮಾರ್‌ಗೆ ಇದು ನಾಲ್ಕನೇ ಸಿನಿಮಾ. ದೊಡ್ಡ ಯಶಸ್ಸು ಕಂಡ ಹೀರೋ ಎನ್ನುವ ಯಾವುದೇ ಸಣ್ಣ ಹಿಂಜರಿಕೆಯೂ ಇಲ್ಲದೆ ಖುಷಿಯಿಂದ ನಮಗೆ ಜೊತೆಯಾದರು. ನಮ್ಮಿಬ್ಬರ ಸಿನಿಮಾ ಬದುಕಿಗೆ ನೆರವಾಗುತ್ತದೆ ಎನ್ನುವ ದೃಷ್ಟಿಯಿಂದ ಯೋಜನೆಗೆ ಕೈಜೋಡಿಸಿದರು. ಮೊದಲು ಚಿಕ್ಕ ಪ್ರಾಜೆಕ್ಟ್ ಎಂದುಕೊಂಡಿದ್ದ ಇದು ಶಿವರಾಜ್ ಸೇರ್ಪಡೆಯಿಂದ ದೊಡ್ಡ ಸಿನಿಮಾ ಆಗಿ ಯಶಸ್ಸು ಕಂಡಿತು.

ಸದಾ ಚಟುವಟಿಕೆಯಿಂದಿರುವ ಶಿವರಾಜ್ ಶೂಟಿಂಗ್ ಸೆಟ್‍ನಲ್ಲಿದ್ದರೆ ಒಂದು ರೀತಿ ಉತ್ಸಾಹ. ದಿನೇಶ್‍ಬಾಬು ನಿರ್ದೇಶನದ `ಇನ್‍ಸ್ಪೆಕ್ಟರ್ ವಿಕ್ರಂ’ ಶೂಟಿಂಗ್ ಸಂದರ್ಭವೊಂದು ನನಗೆ ನೆನಪಾಗುತ್ತದೆ. ಶಿವಣ್ಣ ಹೀರೋ ಆಗಿ ನಟಿಸಿದ್ದ ಚಿತ್ರದಲ್ಲಿ ನನಗೊಂದು ಪ್ರಮುಖ ಪಾತ್ರವಿತ್ತು. ಕೆಮ್ಮಣ್ಣುಗುಂಡಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ನಾವೆಲ್ಲರೂ ಪಾಲ್ಗೊಂಡಿದ್ದೆವು. ನಿರ್ದೇಶಕ ದಿನೇಶ್ ಬಾಬು ಅವರ ಆತ್ಮೀಯರೂ ಆಗಿದ್ದ ತಮಿಳು ನಟ ನಾರಾಯಣ್ ಚಿತ್ರದ ಖಳ ಪಾತ್ರದಲ್ಲಿ ನಟಿಸುತ್ತಿದ್ದರು. ಸನ್ನಿವೇಶವೊಂದರಲ್ಲಿ ನಾರಾಯಣ್ ವೇಗವಾಗಿ ಕಾರು ಓಡಿಸಿಕೊಂಡು ಬಂದು ಒಮ್ಮೆಗೇ ಬ್ರೇಕ್ ಹಾಕಿ ಕಾರನ್ನು ತಿರುಗಿಸಿ ನಿಲ್ಲಿಸಬೇಕಿತ್ತು. ನಾಲ್ಕೈದು ಟೇಕ್‍ಗಳಾದರೂ ಶಾಟ್ ಓಕೆಯಾಗಲಿಲ್ಲ. ಕೊನೆಗೆ ನಾರಾಯಣ್‍ಗೆ ತಾವು ಡ್ಯೂಪ್ ಆಗುವುದಾಗಿ ಶಿವಣ್ಣ ಎದ್ದುನಿಂತರು! ಅದು ರಿಸ್ಕೀ ಶಾಟ್ ಆದ್ದರಿಂದ ಎಲ್ಲರೂ ಬೇಡವೆಂದೆವು. ನಮ್ಮ ಮಾತು ಕೇಳದ ಶಿವಣ್ಣ, ನಾರಾಯಣ್‍ರ ಷರ್ಟ್ ಹಾಕಿಕೊಂಡು ಕಾರು ಹತ್ತಿದರು. ಡ್ರೈವಿಂಗ್ ಎಕ್ಸ್‌ಪರ್ಟ್ ಆಗಿದ್ದರಿಂದ ಅವರಿಗೊಂದಿಷ್ಟು ಟೆಕ್ನಿಕ್‍ಗಳು ಗೊತ್ತಿದ್ದವು. ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಒಂದೇ ಟೇಕ್‍ಗೆ ರಿಸ್ಕೀ ಶಾಟ್ ಓಕೆ ಮಾಡಿದರು. ಕೊಂಚ ಎಡವಟ್ಟಾಗಿದ್ದರೂ ಕಾರು ಪಲ್ಟಿಯಾಗುವ ಸಾಧ್ಯತೆಗಳಿದ್ದವು. ಹೆದರದ ಶಿವಣ್ಣ ವಿಲನ್‍ಗೆ `ಡ್ಯೂಪ್’ ಆಗಿ ಎಲ್ಲರಿಂದಲೂ ಚಪ್ಪಾಳೆ ಗಿಟ್ಟಿಸಿದರು!

ನಾಯಕನೇ ನೃತ್ಯ ಸಂಯೋಜಿಸಿದಾಗ…

ಶಿವರಾಜ್ ಪ್ರೋತ್ಸಾಹದ ಮೇರೆಗೆ `ಸಮರ’ ಚಿತ್ರದ ಮೂಲಕ ನಾನು ನಿರ್ದೇಶಕನ ಹ್ಯಾಟ್ ಧರಿಸುವಂತಾಯ್ತು. ಶಿವರಾಜಕುಮಾರ್ ಮತ್ತು ಸುಧಾರಾಣಿ ಚಿತ್ರದ ಹೀರೋ-ಹಿರೋಯಿನ್. ಸಿಂಗಾಪೂರದಲ್ಲಿ ಚಿತ್ರದ ಎರಡು ಹಾಡುಗಳನ್ನು ಚಿತ್ರಿಸುವುದೆಂದು ನಿರ್ಧರಿಸಿದ್ದೆವು. ಅಂದುಕೊಂಡಂತೆಯೇ ಬೆಂಗಳೂರಿನಿಂದ ನಮ್ಮದೊಂದು ಚಿಕ್ಕ ತಂಡದೊಂದಿಗೆ ಸಿಂಗಾಪೂರಕ್ಕೆ ಹೋದೆವು. ನೃತ್ಯ ನಿರ್ದೇಶಕ ಜಾನ್ ಬಾಲು ಚೆನ್ನೈನಿಂದ ಬಂದು ನಮ್ಮನ್ನು ಕೂಡಿಕೊಳ್ಳಬೇಕಿತ್ತು. ಕಾರಣಾಂತರಗಳಿಂದಾಗಿ ಅವರು ಚೆನ್ನೈನಲ್ಲೇ ಉಳಿಯುವಂತಾದಾಗ ನಾವು ಕಂಗಾಲಾದೆವು.

ನಮಗೆ ಅಲ್ಲಿ ಚಿತ್ರಿಸಲು ಅನುಮತಿ ಸಿಕ್ಕಿದ್ದು ನಾಲ್ಕು ದಿನವಷ್ಟೇ. ನಿರ್ದೇಶಕನಾದ ನಾನು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಶಿವಣ್ಣ ತಾವೇ `ನೃತ್ಯ ನಿರ್ದೇಶಕ’ನಾಗುವುದಾಗಿ ಹೇಳಿದರು! ಸಂಪೂರ್ಣ ವಿಫಲವಾಗಬೇಕಿದ್ದ ಸಿಂಗಾಪೂರ್ ಟೂರ್‌ಗೆ ಮತ್ತೆ ಜೀವ ಬಂದಂತಾಯಿತು. ನಾನು ಮೇಕಪ್-ಟಚ್‍ಅಪ್, ಟ್ರ್ಯಾಲಿ ಹ್ಯಾಂಡ್ಲಿಂಗ್ ನೋಡಿಕೊಂಡರೆ ಹೀರೋ ಶಿವಣ್ಣ ನೃತ್ಯ ನಿರ್ದೇಶಕರಾದರು. ನೃತ್ಯದಲ್ಲಿ ಅಪಾರ ಪರಿಣತಿಯಿರುವ ಶಿವಣ್ಣ ಚಿತ್ರದ ಎರಡು ಹಾಡುಗಳಿಗೆ ನೃತ್ಯ ಸಂಯೋಜಿಸಿದರು. ತಮ್ಮ ನೃತ್ಯ ಸಂಯೋಜನೆಗೆ ತಾವೇ ಹೆಜ್ಜೆ ಹಾಕುತ್ತಾ ಸಿಂಗಾಪೂರ ಪ್ರವಾಸವನ್ನು ಯಶಸ್ವಿಗೊಳಿಸಿದರು.

  • ಚಿ.ಗುರುದತ್ 

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...