Homeಮುಖಪುಟವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

- Advertisement -
- Advertisement -

ನಟ ಶಿವರಾಜ್‌ಕುಮಾರ್ ಇಂದು 58ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಅವರ ಆತ್ಮೀಯ ಸ್ನೇಹಿತರೂ ಆದ ನಟ-ನಿರ್ದೇಶಕ ಚಿ.ಗುರುದತ್ ಹ್ಯಾಟ್ರಿಕ್ ಹೀರೋ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಳ್ಳುತ್ತಾ ಶುಭಾಶಯ ಕೋರಿದ್ದಾರೆ.

***

ಬಾಲ್ಯದಲ್ಲಿ ಒಟ್ಟಿಗೇ ಆಡಿಕೊಂಡು ಬೆಳೆದ ಶಿವಣ್ಣ ಮತ್ತು ನಾನು `ಆನಂದ್’ (1986) ಚಿತ್ರದೊಂದಿಗೆ ಒಟ್ಟಿಗೇ ಬಣ್ಣ ಹಚ್ಚಿದವರು. `ಆನಂದ್’ ಚಿತ್ರಕ್ಕಾಗಿ ನನಗೆ ಅವರೇ ಒಂದು ತಿಂಗಳು ಕಾರು ಡ್ರೈವಿಂಗ್ ಹೇಳಿಕೊಟ್ಟಿದ್ದರು. ಚಿತ್ರೀಕರಣದಲ್ಲಿ ಡ್ರೈವಿಂಗ್ ಕೈಕೊಟ್ಟಾಗ ಅಲ್ಲಿಯೂ ಶಿವಣ್ಣನ ನೆರವು ಬೇಕಾಗುತ್ತಿತ್ತು. ಮುಂದೆ ಕೂಡ ನನ್ನ ಸಿನಿಮಾ ಬದುಕಿನ ಪ್ರಮುಖ ಹಂತಗಳಲ್ಲಿ ಅವರ ನೆರವು ಒದಗಿಬಂದಿತು. ನನ್ನನ್ನು ನಿರ್ಮಾಪಕನನ್ನಾಗಿ (ಆನಂದಜ್ಯೋತಿ) ಮತ್ತು ನಿರ್ದೇಶಕನನ್ನಾಗಿ (ಸಮರ) ಮಾಡಿದ್ದು ಕೂಡ ಶಿವಣ್ಣನೇ.

ನಾನು, ಅವರು ಮತ್ತು ಬಾಲು (ಬಾಲರಾಜ್) ನಾಯಕರಾಗಿ ನಟಿಸಿದ `ಸಂಯುಕ್ತ’ ಆಗ ಕನ್ನಡದಲ್ಲೊಂದು ಉತ್ತಮ ಥ್ರಿಲ್ಲರ್ ಸಿನಿಮಾ. ಕಾಕೋಳು ಸರೋಜಾ ರಾವ್ ಅವರ ಕಾದಂಬರಿಯನ್ನು ಆಧರಿಸಿ ಮಾಡಿದ ಈ ಸಿನಿಮಾದ ನಿರ್ದೇಶಕರು ಚಂದ್ರಶೇಖರ ಶರ್ಮಾ. ಹಾಗೆ ನೋಡಿದರೆ ಇದು ನಾನು ಮತ್ತು ಬಾಲರಾಜ್ ನಟಿಸಬೇಕೆಂದಿದ್ದ ಸಿನಿಮಾ. ಅಂತಿಮ ಹಂತದಲ್ಲಿ ಶಿವರಾಜ್‌ಕುಮಾರ್ ತಂಡಕ್ಕೆ ಸೇರಿಕೊಂಡರು. ಆಗ ಹ್ಯಾಟ್ರಿಕ್ ಹೀರೋ (ಆನಂದ್, ರಥಸಪ್ತಮಿ ಮತ್ತು ಮನಮೆಚ್ಚಿದ ಹುಡುಗಿ) ಆಗಿದ್ದ ಶಿವರಾಜಕುಮಾರ್‌ಗೆ ಇದು ನಾಲ್ಕನೇ ಸಿನಿಮಾ. ದೊಡ್ಡ ಯಶಸ್ಸು ಕಂಡ ಹೀರೋ ಎನ್ನುವ ಯಾವುದೇ ಸಣ್ಣ ಹಿಂಜರಿಕೆಯೂ ಇಲ್ಲದೆ ಖುಷಿಯಿಂದ ನಮಗೆ ಜೊತೆಯಾದರು. ನಮ್ಮಿಬ್ಬರ ಸಿನಿಮಾ ಬದುಕಿಗೆ ನೆರವಾಗುತ್ತದೆ ಎನ್ನುವ ದೃಷ್ಟಿಯಿಂದ ಯೋಜನೆಗೆ ಕೈಜೋಡಿಸಿದರು. ಮೊದಲು ಚಿಕ್ಕ ಪ್ರಾಜೆಕ್ಟ್ ಎಂದುಕೊಂಡಿದ್ದ ಇದು ಶಿವರಾಜ್ ಸೇರ್ಪಡೆಯಿಂದ ದೊಡ್ಡ ಸಿನಿಮಾ ಆಗಿ ಯಶಸ್ಸು ಕಂಡಿತು.

ಸದಾ ಚಟುವಟಿಕೆಯಿಂದಿರುವ ಶಿವರಾಜ್ ಶೂಟಿಂಗ್ ಸೆಟ್‍ನಲ್ಲಿದ್ದರೆ ಒಂದು ರೀತಿ ಉತ್ಸಾಹ. ದಿನೇಶ್‍ಬಾಬು ನಿರ್ದೇಶನದ `ಇನ್‍ಸ್ಪೆಕ್ಟರ್ ವಿಕ್ರಂ’ ಶೂಟಿಂಗ್ ಸಂದರ್ಭವೊಂದು ನನಗೆ ನೆನಪಾಗುತ್ತದೆ. ಶಿವಣ್ಣ ಹೀರೋ ಆಗಿ ನಟಿಸಿದ್ದ ಚಿತ್ರದಲ್ಲಿ ನನಗೊಂದು ಪ್ರಮುಖ ಪಾತ್ರವಿತ್ತು. ಕೆಮ್ಮಣ್ಣುಗುಂಡಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ನಾವೆಲ್ಲರೂ ಪಾಲ್ಗೊಂಡಿದ್ದೆವು. ನಿರ್ದೇಶಕ ದಿನೇಶ್ ಬಾಬು ಅವರ ಆತ್ಮೀಯರೂ ಆಗಿದ್ದ ತಮಿಳು ನಟ ನಾರಾಯಣ್ ಚಿತ್ರದ ಖಳ ಪಾತ್ರದಲ್ಲಿ ನಟಿಸುತ್ತಿದ್ದರು. ಸನ್ನಿವೇಶವೊಂದರಲ್ಲಿ ನಾರಾಯಣ್ ವೇಗವಾಗಿ ಕಾರು ಓಡಿಸಿಕೊಂಡು ಬಂದು ಒಮ್ಮೆಗೇ ಬ್ರೇಕ್ ಹಾಕಿ ಕಾರನ್ನು ತಿರುಗಿಸಿ ನಿಲ್ಲಿಸಬೇಕಿತ್ತು. ನಾಲ್ಕೈದು ಟೇಕ್‍ಗಳಾದರೂ ಶಾಟ್ ಓಕೆಯಾಗಲಿಲ್ಲ. ಕೊನೆಗೆ ನಾರಾಯಣ್‍ಗೆ ತಾವು ಡ್ಯೂಪ್ ಆಗುವುದಾಗಿ ಶಿವಣ್ಣ ಎದ್ದುನಿಂತರು! ಅದು ರಿಸ್ಕೀ ಶಾಟ್ ಆದ್ದರಿಂದ ಎಲ್ಲರೂ ಬೇಡವೆಂದೆವು. ನಮ್ಮ ಮಾತು ಕೇಳದ ಶಿವಣ್ಣ, ನಾರಾಯಣ್‍ರ ಷರ್ಟ್ ಹಾಕಿಕೊಂಡು ಕಾರು ಹತ್ತಿದರು. ಡ್ರೈವಿಂಗ್ ಎಕ್ಸ್‌ಪರ್ಟ್ ಆಗಿದ್ದರಿಂದ ಅವರಿಗೊಂದಿಷ್ಟು ಟೆಕ್ನಿಕ್‍ಗಳು ಗೊತ್ತಿದ್ದವು. ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಒಂದೇ ಟೇಕ್‍ಗೆ ರಿಸ್ಕೀ ಶಾಟ್ ಓಕೆ ಮಾಡಿದರು. ಕೊಂಚ ಎಡವಟ್ಟಾಗಿದ್ದರೂ ಕಾರು ಪಲ್ಟಿಯಾಗುವ ಸಾಧ್ಯತೆಗಳಿದ್ದವು. ಹೆದರದ ಶಿವಣ್ಣ ವಿಲನ್‍ಗೆ `ಡ್ಯೂಪ್’ ಆಗಿ ಎಲ್ಲರಿಂದಲೂ ಚಪ್ಪಾಳೆ ಗಿಟ್ಟಿಸಿದರು!

ನಾಯಕನೇ ನೃತ್ಯ ಸಂಯೋಜಿಸಿದಾಗ…

ಶಿವರಾಜ್ ಪ್ರೋತ್ಸಾಹದ ಮೇರೆಗೆ `ಸಮರ’ ಚಿತ್ರದ ಮೂಲಕ ನಾನು ನಿರ್ದೇಶಕನ ಹ್ಯಾಟ್ ಧರಿಸುವಂತಾಯ್ತು. ಶಿವರಾಜಕುಮಾರ್ ಮತ್ತು ಸುಧಾರಾಣಿ ಚಿತ್ರದ ಹೀರೋ-ಹಿರೋಯಿನ್. ಸಿಂಗಾಪೂರದಲ್ಲಿ ಚಿತ್ರದ ಎರಡು ಹಾಡುಗಳನ್ನು ಚಿತ್ರಿಸುವುದೆಂದು ನಿರ್ಧರಿಸಿದ್ದೆವು. ಅಂದುಕೊಂಡಂತೆಯೇ ಬೆಂಗಳೂರಿನಿಂದ ನಮ್ಮದೊಂದು ಚಿಕ್ಕ ತಂಡದೊಂದಿಗೆ ಸಿಂಗಾಪೂರಕ್ಕೆ ಹೋದೆವು. ನೃತ್ಯ ನಿರ್ದೇಶಕ ಜಾನ್ ಬಾಲು ಚೆನ್ನೈನಿಂದ ಬಂದು ನಮ್ಮನ್ನು ಕೂಡಿಕೊಳ್ಳಬೇಕಿತ್ತು. ಕಾರಣಾಂತರಗಳಿಂದಾಗಿ ಅವರು ಚೆನ್ನೈನಲ್ಲೇ ಉಳಿಯುವಂತಾದಾಗ ನಾವು ಕಂಗಾಲಾದೆವು.

ನಮಗೆ ಅಲ್ಲಿ ಚಿತ್ರಿಸಲು ಅನುಮತಿ ಸಿಕ್ಕಿದ್ದು ನಾಲ್ಕು ದಿನವಷ್ಟೇ. ನಿರ್ದೇಶಕನಾದ ನಾನು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಶಿವಣ್ಣ ತಾವೇ `ನೃತ್ಯ ನಿರ್ದೇಶಕ’ನಾಗುವುದಾಗಿ ಹೇಳಿದರು! ಸಂಪೂರ್ಣ ವಿಫಲವಾಗಬೇಕಿದ್ದ ಸಿಂಗಾಪೂರ್ ಟೂರ್‌ಗೆ ಮತ್ತೆ ಜೀವ ಬಂದಂತಾಯಿತು. ನಾನು ಮೇಕಪ್-ಟಚ್‍ಅಪ್, ಟ್ರ್ಯಾಲಿ ಹ್ಯಾಂಡ್ಲಿಂಗ್ ನೋಡಿಕೊಂಡರೆ ಹೀರೋ ಶಿವಣ್ಣ ನೃತ್ಯ ನಿರ್ದೇಶಕರಾದರು. ನೃತ್ಯದಲ್ಲಿ ಅಪಾರ ಪರಿಣತಿಯಿರುವ ಶಿವಣ್ಣ ಚಿತ್ರದ ಎರಡು ಹಾಡುಗಳಿಗೆ ನೃತ್ಯ ಸಂಯೋಜಿಸಿದರು. ತಮ್ಮ ನೃತ್ಯ ಸಂಯೋಜನೆಗೆ ತಾವೇ ಹೆಜ್ಜೆ ಹಾಕುತ್ತಾ ಸಿಂಗಾಪೂರ ಪ್ರವಾಸವನ್ನು ಯಶಸ್ವಿಗೊಳಿಸಿದರು.

  • ಚಿ.ಗುರುದತ್ 

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...