Homeಮುಖಪುಟವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

- Advertisement -
- Advertisement -

ನಟ ಶಿವರಾಜ್‌ಕುಮಾರ್ ಇಂದು 58ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಅವರ ಆತ್ಮೀಯ ಸ್ನೇಹಿತರೂ ಆದ ನಟ-ನಿರ್ದೇಶಕ ಚಿ.ಗುರುದತ್ ಹ್ಯಾಟ್ರಿಕ್ ಹೀರೋ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಳ್ಳುತ್ತಾ ಶುಭಾಶಯ ಕೋರಿದ್ದಾರೆ.

***

ಬಾಲ್ಯದಲ್ಲಿ ಒಟ್ಟಿಗೇ ಆಡಿಕೊಂಡು ಬೆಳೆದ ಶಿವಣ್ಣ ಮತ್ತು ನಾನು `ಆನಂದ್’ (1986) ಚಿತ್ರದೊಂದಿಗೆ ಒಟ್ಟಿಗೇ ಬಣ್ಣ ಹಚ್ಚಿದವರು. `ಆನಂದ್’ ಚಿತ್ರಕ್ಕಾಗಿ ನನಗೆ ಅವರೇ ಒಂದು ತಿಂಗಳು ಕಾರು ಡ್ರೈವಿಂಗ್ ಹೇಳಿಕೊಟ್ಟಿದ್ದರು. ಚಿತ್ರೀಕರಣದಲ್ಲಿ ಡ್ರೈವಿಂಗ್ ಕೈಕೊಟ್ಟಾಗ ಅಲ್ಲಿಯೂ ಶಿವಣ್ಣನ ನೆರವು ಬೇಕಾಗುತ್ತಿತ್ತು. ಮುಂದೆ ಕೂಡ ನನ್ನ ಸಿನಿಮಾ ಬದುಕಿನ ಪ್ರಮುಖ ಹಂತಗಳಲ್ಲಿ ಅವರ ನೆರವು ಒದಗಿಬಂದಿತು. ನನ್ನನ್ನು ನಿರ್ಮಾಪಕನನ್ನಾಗಿ (ಆನಂದಜ್ಯೋತಿ) ಮತ್ತು ನಿರ್ದೇಶಕನನ್ನಾಗಿ (ಸಮರ) ಮಾಡಿದ್ದು ಕೂಡ ಶಿವಣ್ಣನೇ.

ನಾನು, ಅವರು ಮತ್ತು ಬಾಲು (ಬಾಲರಾಜ್) ನಾಯಕರಾಗಿ ನಟಿಸಿದ `ಸಂಯುಕ್ತ’ ಆಗ ಕನ್ನಡದಲ್ಲೊಂದು ಉತ್ತಮ ಥ್ರಿಲ್ಲರ್ ಸಿನಿಮಾ. ಕಾಕೋಳು ಸರೋಜಾ ರಾವ್ ಅವರ ಕಾದಂಬರಿಯನ್ನು ಆಧರಿಸಿ ಮಾಡಿದ ಈ ಸಿನಿಮಾದ ನಿರ್ದೇಶಕರು ಚಂದ್ರಶೇಖರ ಶರ್ಮಾ. ಹಾಗೆ ನೋಡಿದರೆ ಇದು ನಾನು ಮತ್ತು ಬಾಲರಾಜ್ ನಟಿಸಬೇಕೆಂದಿದ್ದ ಸಿನಿಮಾ. ಅಂತಿಮ ಹಂತದಲ್ಲಿ ಶಿವರಾಜ್‌ಕುಮಾರ್ ತಂಡಕ್ಕೆ ಸೇರಿಕೊಂಡರು. ಆಗ ಹ್ಯಾಟ್ರಿಕ್ ಹೀರೋ (ಆನಂದ್, ರಥಸಪ್ತಮಿ ಮತ್ತು ಮನಮೆಚ್ಚಿದ ಹುಡುಗಿ) ಆಗಿದ್ದ ಶಿವರಾಜಕುಮಾರ್‌ಗೆ ಇದು ನಾಲ್ಕನೇ ಸಿನಿಮಾ. ದೊಡ್ಡ ಯಶಸ್ಸು ಕಂಡ ಹೀರೋ ಎನ್ನುವ ಯಾವುದೇ ಸಣ್ಣ ಹಿಂಜರಿಕೆಯೂ ಇಲ್ಲದೆ ಖುಷಿಯಿಂದ ನಮಗೆ ಜೊತೆಯಾದರು. ನಮ್ಮಿಬ್ಬರ ಸಿನಿಮಾ ಬದುಕಿಗೆ ನೆರವಾಗುತ್ತದೆ ಎನ್ನುವ ದೃಷ್ಟಿಯಿಂದ ಯೋಜನೆಗೆ ಕೈಜೋಡಿಸಿದರು. ಮೊದಲು ಚಿಕ್ಕ ಪ್ರಾಜೆಕ್ಟ್ ಎಂದುಕೊಂಡಿದ್ದ ಇದು ಶಿವರಾಜ್ ಸೇರ್ಪಡೆಯಿಂದ ದೊಡ್ಡ ಸಿನಿಮಾ ಆಗಿ ಯಶಸ್ಸು ಕಂಡಿತು.

ಸದಾ ಚಟುವಟಿಕೆಯಿಂದಿರುವ ಶಿವರಾಜ್ ಶೂಟಿಂಗ್ ಸೆಟ್‍ನಲ್ಲಿದ್ದರೆ ಒಂದು ರೀತಿ ಉತ್ಸಾಹ. ದಿನೇಶ್‍ಬಾಬು ನಿರ್ದೇಶನದ `ಇನ್‍ಸ್ಪೆಕ್ಟರ್ ವಿಕ್ರಂ’ ಶೂಟಿಂಗ್ ಸಂದರ್ಭವೊಂದು ನನಗೆ ನೆನಪಾಗುತ್ತದೆ. ಶಿವಣ್ಣ ಹೀರೋ ಆಗಿ ನಟಿಸಿದ್ದ ಚಿತ್ರದಲ್ಲಿ ನನಗೊಂದು ಪ್ರಮುಖ ಪಾತ್ರವಿತ್ತು. ಕೆಮ್ಮಣ್ಣುಗುಂಡಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ನಾವೆಲ್ಲರೂ ಪಾಲ್ಗೊಂಡಿದ್ದೆವು. ನಿರ್ದೇಶಕ ದಿನೇಶ್ ಬಾಬು ಅವರ ಆತ್ಮೀಯರೂ ಆಗಿದ್ದ ತಮಿಳು ನಟ ನಾರಾಯಣ್ ಚಿತ್ರದ ಖಳ ಪಾತ್ರದಲ್ಲಿ ನಟಿಸುತ್ತಿದ್ದರು. ಸನ್ನಿವೇಶವೊಂದರಲ್ಲಿ ನಾರಾಯಣ್ ವೇಗವಾಗಿ ಕಾರು ಓಡಿಸಿಕೊಂಡು ಬಂದು ಒಮ್ಮೆಗೇ ಬ್ರೇಕ್ ಹಾಕಿ ಕಾರನ್ನು ತಿರುಗಿಸಿ ನಿಲ್ಲಿಸಬೇಕಿತ್ತು. ನಾಲ್ಕೈದು ಟೇಕ್‍ಗಳಾದರೂ ಶಾಟ್ ಓಕೆಯಾಗಲಿಲ್ಲ. ಕೊನೆಗೆ ನಾರಾಯಣ್‍ಗೆ ತಾವು ಡ್ಯೂಪ್ ಆಗುವುದಾಗಿ ಶಿವಣ್ಣ ಎದ್ದುನಿಂತರು! ಅದು ರಿಸ್ಕೀ ಶಾಟ್ ಆದ್ದರಿಂದ ಎಲ್ಲರೂ ಬೇಡವೆಂದೆವು. ನಮ್ಮ ಮಾತು ಕೇಳದ ಶಿವಣ್ಣ, ನಾರಾಯಣ್‍ರ ಷರ್ಟ್ ಹಾಕಿಕೊಂಡು ಕಾರು ಹತ್ತಿದರು. ಡ್ರೈವಿಂಗ್ ಎಕ್ಸ್‌ಪರ್ಟ್ ಆಗಿದ್ದರಿಂದ ಅವರಿಗೊಂದಿಷ್ಟು ಟೆಕ್ನಿಕ್‍ಗಳು ಗೊತ್ತಿದ್ದವು. ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಒಂದೇ ಟೇಕ್‍ಗೆ ರಿಸ್ಕೀ ಶಾಟ್ ಓಕೆ ಮಾಡಿದರು. ಕೊಂಚ ಎಡವಟ್ಟಾಗಿದ್ದರೂ ಕಾರು ಪಲ್ಟಿಯಾಗುವ ಸಾಧ್ಯತೆಗಳಿದ್ದವು. ಹೆದರದ ಶಿವಣ್ಣ ವಿಲನ್‍ಗೆ `ಡ್ಯೂಪ್’ ಆಗಿ ಎಲ್ಲರಿಂದಲೂ ಚಪ್ಪಾಳೆ ಗಿಟ್ಟಿಸಿದರು!

ನಾಯಕನೇ ನೃತ್ಯ ಸಂಯೋಜಿಸಿದಾಗ…

ಶಿವರಾಜ್ ಪ್ರೋತ್ಸಾಹದ ಮೇರೆಗೆ `ಸಮರ’ ಚಿತ್ರದ ಮೂಲಕ ನಾನು ನಿರ್ದೇಶಕನ ಹ್ಯಾಟ್ ಧರಿಸುವಂತಾಯ್ತು. ಶಿವರಾಜಕುಮಾರ್ ಮತ್ತು ಸುಧಾರಾಣಿ ಚಿತ್ರದ ಹೀರೋ-ಹಿರೋಯಿನ್. ಸಿಂಗಾಪೂರದಲ್ಲಿ ಚಿತ್ರದ ಎರಡು ಹಾಡುಗಳನ್ನು ಚಿತ್ರಿಸುವುದೆಂದು ನಿರ್ಧರಿಸಿದ್ದೆವು. ಅಂದುಕೊಂಡಂತೆಯೇ ಬೆಂಗಳೂರಿನಿಂದ ನಮ್ಮದೊಂದು ಚಿಕ್ಕ ತಂಡದೊಂದಿಗೆ ಸಿಂಗಾಪೂರಕ್ಕೆ ಹೋದೆವು. ನೃತ್ಯ ನಿರ್ದೇಶಕ ಜಾನ್ ಬಾಲು ಚೆನ್ನೈನಿಂದ ಬಂದು ನಮ್ಮನ್ನು ಕೂಡಿಕೊಳ್ಳಬೇಕಿತ್ತು. ಕಾರಣಾಂತರಗಳಿಂದಾಗಿ ಅವರು ಚೆನ್ನೈನಲ್ಲೇ ಉಳಿಯುವಂತಾದಾಗ ನಾವು ಕಂಗಾಲಾದೆವು.

ನಮಗೆ ಅಲ್ಲಿ ಚಿತ್ರಿಸಲು ಅನುಮತಿ ಸಿಕ್ಕಿದ್ದು ನಾಲ್ಕು ದಿನವಷ್ಟೇ. ನಿರ್ದೇಶಕನಾದ ನಾನು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಶಿವಣ್ಣ ತಾವೇ `ನೃತ್ಯ ನಿರ್ದೇಶಕ’ನಾಗುವುದಾಗಿ ಹೇಳಿದರು! ಸಂಪೂರ್ಣ ವಿಫಲವಾಗಬೇಕಿದ್ದ ಸಿಂಗಾಪೂರ್ ಟೂರ್‌ಗೆ ಮತ್ತೆ ಜೀವ ಬಂದಂತಾಯಿತು. ನಾನು ಮೇಕಪ್-ಟಚ್‍ಅಪ್, ಟ್ರ್ಯಾಲಿ ಹ್ಯಾಂಡ್ಲಿಂಗ್ ನೋಡಿಕೊಂಡರೆ ಹೀರೋ ಶಿವಣ್ಣ ನೃತ್ಯ ನಿರ್ದೇಶಕರಾದರು. ನೃತ್ಯದಲ್ಲಿ ಅಪಾರ ಪರಿಣತಿಯಿರುವ ಶಿವಣ್ಣ ಚಿತ್ರದ ಎರಡು ಹಾಡುಗಳಿಗೆ ನೃತ್ಯ ಸಂಯೋಜಿಸಿದರು. ತಮ್ಮ ನೃತ್ಯ ಸಂಯೋಜನೆಗೆ ತಾವೇ ಹೆಜ್ಜೆ ಹಾಕುತ್ತಾ ಸಿಂಗಾಪೂರ ಪ್ರವಾಸವನ್ನು ಯಶಸ್ವಿಗೊಳಿಸಿದರು.

  • ಚಿ.ಗುರುದತ್ 

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...