Homeಮುಖಪುಟಶಿವಸೇನೆ ಹೆಸರು, ಚಿಹ್ನೆ ಶಿಂಧೆ ಬಣಕ್ಕೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಠಾಕ್ರೆ

ಶಿವಸೇನೆ ಹೆಸರು, ಚಿಹ್ನೆ ಶಿಂಧೆ ಬಣಕ್ಕೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಠಾಕ್ರೆ

- Advertisement -
- Advertisement -

ಚುನಾವಣಾ ಆಯೋಗವು ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿರುವ ನಿರ್ಧಾರದ ಬಗ್ಗೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಸೋಮವಾರ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಈ ವಿಷಯವನ್ನು ಆರಂಭಿಕ ಪಟ್ಟಿಗಾಗಿ ಪ್ರಸ್ತಾಪಿಸಿದರು. ಆದರೆ, ಈ ವಿಷಯವು ಉಲ್ಲೇಖಿತ ಪಟ್ಟಿಯ ಭಾಗವಾಗಿಲ್ಲದ ಕಾರಣ ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

“ನಿಯಮವು ಎಲ್ಲರಿಗೂ ಒಂದೇ ರೀತಿಯಲ್ಲಿ ಅನ್ವಯಿಸುತ್ತದೆ. ಹಾಗಾಗಿ ಸೂಕ್ತ ಪ್ರಕ್ರಿಯೆಯ ಮೂಲಕ ನಾಳೆ ಬನ್ನಿ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು ಎಂದು ಪಿಟಿಐ ವರದಿ ಮಾಡಿದೆ.

ಈ ಹಿಂದೆ, ಮಹಾರಾಷ್ಟ್ರದಲ್ಲಿ ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ ಪಕ್ಷಗಳ ಸಮ್ಮಿಶ್ರ ಸರ್ಕಾರವಿತ್ತು. ಆದರೆ, ಕಳೆದ ವ‍ರ್ಷ ಜೂನ್‌ನಲ್ಲಿ ಠಾಕ್ರೆ ನಾಯಕತ್ವದ ವಿರುದ್ಧ ಶಿಂಧೆ ಹಾಗೂ ಅವರ ಬೆಂಬಲಿತ ಶಾಸಕರ ಗುಂಪು ಬಂಡಾಯವೆದ್ದಿತು. ಇದರಿಂದ ಶಿವಸೇನೆ ವಿಭಜನೆಯಾಗಿ ಸರ್ಕಾರ ಪತನವಾಯಿತು.

ಇದನ್ನೂ ಓದಿ: ಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

ಭಾರತದ ಚುನಾವಣಾ ಆಯೋಗವು ಫೆಬ್ರವರಿ 17 ರಂದು, ನೀಡಿರುವ ಆದೇಶದಿಂದ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ಭಾರಿ ಹಿನ್ನಡೆಯಾಗಿದೆ. ಪಕ್ಷದ ಹೆಸರು “ಶಿವಸೇನಾ” ಮತ್ತು “ಬಿಲ್ಲು ಮತ್ತು ಬಾಣ” ಚಿಹ್ನೆಯನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನೀಡಿದೆ.

ಚುನಾವಣಾ ಸಮಿತಿಯ ನಿರ್ಧಾರದ ನಂತರ, ಶಿವಸೇನೆಯ ವೆಬ್‌ಸೈಟ್ shivsena.in ಅನ್ನು ಅಳಿಸಲಾಗಿದೆ ಮತ್ತು ಅದರ ಟ್ವಿಟರ್ ಖಾತೆಯ ಹೆಸರನ್ನು ”ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ” ಎಂದು ಬದಲಾಯಿಸಲಾಗಿದೆ.

ಸೋಮವಾರ ಮುಂಬೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳುವಂತೆ ಠಾಕ್ರೆ ಅವರು ತಮ್ಮ ಬಣದ ಎಲ್ಲಾ ಶಾಸಕರನ್ನು ಕೇಳಿಕೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಜಾಗರೂಕರಾಗಿರಿ: ರಾಜಕೀಯ ಪಕ್ಷಗಳಿಗೆ ಠಾಕ್ರೆ ಎಚ್ಚರಿಕೆ

ಚುನಾವಣಾ ಆಯೋಗದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಬೇಕು ಎಂದು ರವಿವಾರ ಠಾಕ್ರೆ ಇತರ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಶಿವಸೇನೆಗೆ ಏನಾಯಿತು, ನಮ್ಮನ್ನು ಹೇಗೆ ನಡೆಸಿಕೊಳ್ಳಲಾಗಿದೆ, ನಿಮಗೂ ಆಗಬಹುದು, ಎಲ್ಲಾ ಪಕ್ಷಗಳು ತಮ್ಮ ಕಣ್ಣುಗಳನ್ನು ತೆರೆದಿರಬೇಕು ಮತ್ತು ಜಾಗರೂಕರಾಗಿರಬೇಕು” ಎಂದು ಠಾಕ್ರೆ ಹೇಳಿದ್ದಾರೆ.

ಶಿಂಧೆಯವರ ಬಂಡಾಯವನ್ನು ನೆನಪಿಸಿಕೊಂಡ ಠಾಕ್ರೆ, ಪಕ್ಷ ಬಿಡಲು ಬಯಸುವವರು ಹೊರಹೋಗಲು ಸ್ವತಂತ್ರರು, ಅವರು ಬೇರೆ ಪಕ್ಷದೊಂದಿಗೆ ವಿಲೀನವಾಗಬೇಕಿತ್ತು. ಆದರೆ ಈ ವ್ಯಕ್ತಿ ನಮ್ಮನ್ನೇ ನಮ್ಮ ಸ್ವಂತ ಮನೆಯಿಂದ ಹೊರಹಾಕಲು ಮತ್ತು ನಮ್ಮ ಮನೆಯನ್ನೇ ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹೇಳಿದರು.

“ನನ್ನ ತಂದೆ [ಬಾಳಾ ಸಾಹೇಬ್ ಠಾಕ್ರೆ] ಈ ಜನರನ್ನು ಬೆಳೆಸಿದರು ಮತ್ತು ಶಿವಸೈನಿಕರು ಅವರನ್ನು ಬೆಂಬಲಿಸಿದರು. ಆದರೆ ಈಗ ಅವರೇ ಮಾಲೀಕರಾಗಲು ಬಯಸುತ್ತಾರೆ ಮತ್ತು ನಮ್ಮ ಸಂಸ್ಥೆಗಳು (ಚುನಾವಣಾ ಆಯೋಗ) ಕಳ್ಳನನ್ನೇ ಮನೆಯ ಮಾಲೀಕರನ್ನಾಗಿ ಮಾಡಿ ನಿರ್ಧಾರ ತಗೆದುಕೊಂಡಿದೆ. ದೇಶದಲ್ಲಿ ಏನಾಗುತ್ತಿದೆ?” ಎಂದು ಪ್ರಶ್ನೆ ಮಾಡಿದ್ದಾರೆ.

ಸರದಿಯ ಆಧಾರದ ಮೇಲೆ ಕೇಸರಿ ಪಕ್ಷವು ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳುವ ತನ್ನ ಬದ್ಧತೆಯನ್ನು ತೋರಿದ್ದರೆ, ಭಾರತೀಯ ಜನತಾ ಪಕ್ಷದೊಂದಿಗಿನ ಶಿವಸೇನೆಯ ಮೈತ್ರಿಯು ಉಳಿಯುತ್ತಿತ್ತು ಎಂದು ಠಾಕ್ರೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...