Homeಮುಖಪುಟಶಿವಸೇನೆ ಹೆಸರು, ಚಿಹ್ನೆ ಶಿಂಧೆ ಬಣಕ್ಕೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಠಾಕ್ರೆ

ಶಿವಸೇನೆ ಹೆಸರು, ಚಿಹ್ನೆ ಶಿಂಧೆ ಬಣಕ್ಕೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಠಾಕ್ರೆ

- Advertisement -
- Advertisement -

ಚುನಾವಣಾ ಆಯೋಗವು ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿರುವ ನಿರ್ಧಾರದ ಬಗ್ಗೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಸೋಮವಾರ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಈ ವಿಷಯವನ್ನು ಆರಂಭಿಕ ಪಟ್ಟಿಗಾಗಿ ಪ್ರಸ್ತಾಪಿಸಿದರು. ಆದರೆ, ಈ ವಿಷಯವು ಉಲ್ಲೇಖಿತ ಪಟ್ಟಿಯ ಭಾಗವಾಗಿಲ್ಲದ ಕಾರಣ ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

“ನಿಯಮವು ಎಲ್ಲರಿಗೂ ಒಂದೇ ರೀತಿಯಲ್ಲಿ ಅನ್ವಯಿಸುತ್ತದೆ. ಹಾಗಾಗಿ ಸೂಕ್ತ ಪ್ರಕ್ರಿಯೆಯ ಮೂಲಕ ನಾಳೆ ಬನ್ನಿ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು ಎಂದು ಪಿಟಿಐ ವರದಿ ಮಾಡಿದೆ.

ಈ ಹಿಂದೆ, ಮಹಾರಾಷ್ಟ್ರದಲ್ಲಿ ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ ಪಕ್ಷಗಳ ಸಮ್ಮಿಶ್ರ ಸರ್ಕಾರವಿತ್ತು. ಆದರೆ, ಕಳೆದ ವ‍ರ್ಷ ಜೂನ್‌ನಲ್ಲಿ ಠಾಕ್ರೆ ನಾಯಕತ್ವದ ವಿರುದ್ಧ ಶಿಂಧೆ ಹಾಗೂ ಅವರ ಬೆಂಬಲಿತ ಶಾಸಕರ ಗುಂಪು ಬಂಡಾಯವೆದ್ದಿತು. ಇದರಿಂದ ಶಿವಸೇನೆ ವಿಭಜನೆಯಾಗಿ ಸರ್ಕಾರ ಪತನವಾಯಿತು.

ಇದನ್ನೂ ಓದಿ: ಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

ಭಾರತದ ಚುನಾವಣಾ ಆಯೋಗವು ಫೆಬ್ರವರಿ 17 ರಂದು, ನೀಡಿರುವ ಆದೇಶದಿಂದ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ಭಾರಿ ಹಿನ್ನಡೆಯಾಗಿದೆ. ಪಕ್ಷದ ಹೆಸರು “ಶಿವಸೇನಾ” ಮತ್ತು “ಬಿಲ್ಲು ಮತ್ತು ಬಾಣ” ಚಿಹ್ನೆಯನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನೀಡಿದೆ.

ಚುನಾವಣಾ ಸಮಿತಿಯ ನಿರ್ಧಾರದ ನಂತರ, ಶಿವಸೇನೆಯ ವೆಬ್‌ಸೈಟ್ shivsena.in ಅನ್ನು ಅಳಿಸಲಾಗಿದೆ ಮತ್ತು ಅದರ ಟ್ವಿಟರ್ ಖಾತೆಯ ಹೆಸರನ್ನು ”ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ” ಎಂದು ಬದಲಾಯಿಸಲಾಗಿದೆ.

ಸೋಮವಾರ ಮುಂಬೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳುವಂತೆ ಠಾಕ್ರೆ ಅವರು ತಮ್ಮ ಬಣದ ಎಲ್ಲಾ ಶಾಸಕರನ್ನು ಕೇಳಿಕೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಜಾಗರೂಕರಾಗಿರಿ: ರಾಜಕೀಯ ಪಕ್ಷಗಳಿಗೆ ಠಾಕ್ರೆ ಎಚ್ಚರಿಕೆ

ಚುನಾವಣಾ ಆಯೋಗದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಬೇಕು ಎಂದು ರವಿವಾರ ಠಾಕ್ರೆ ಇತರ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಶಿವಸೇನೆಗೆ ಏನಾಯಿತು, ನಮ್ಮನ್ನು ಹೇಗೆ ನಡೆಸಿಕೊಳ್ಳಲಾಗಿದೆ, ನಿಮಗೂ ಆಗಬಹುದು, ಎಲ್ಲಾ ಪಕ್ಷಗಳು ತಮ್ಮ ಕಣ್ಣುಗಳನ್ನು ತೆರೆದಿರಬೇಕು ಮತ್ತು ಜಾಗರೂಕರಾಗಿರಬೇಕು” ಎಂದು ಠಾಕ್ರೆ ಹೇಳಿದ್ದಾರೆ.

ಶಿಂಧೆಯವರ ಬಂಡಾಯವನ್ನು ನೆನಪಿಸಿಕೊಂಡ ಠಾಕ್ರೆ, ಪಕ್ಷ ಬಿಡಲು ಬಯಸುವವರು ಹೊರಹೋಗಲು ಸ್ವತಂತ್ರರು, ಅವರು ಬೇರೆ ಪಕ್ಷದೊಂದಿಗೆ ವಿಲೀನವಾಗಬೇಕಿತ್ತು. ಆದರೆ ಈ ವ್ಯಕ್ತಿ ನಮ್ಮನ್ನೇ ನಮ್ಮ ಸ್ವಂತ ಮನೆಯಿಂದ ಹೊರಹಾಕಲು ಮತ್ತು ನಮ್ಮ ಮನೆಯನ್ನೇ ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹೇಳಿದರು.

“ನನ್ನ ತಂದೆ [ಬಾಳಾ ಸಾಹೇಬ್ ಠಾಕ್ರೆ] ಈ ಜನರನ್ನು ಬೆಳೆಸಿದರು ಮತ್ತು ಶಿವಸೈನಿಕರು ಅವರನ್ನು ಬೆಂಬಲಿಸಿದರು. ಆದರೆ ಈಗ ಅವರೇ ಮಾಲೀಕರಾಗಲು ಬಯಸುತ್ತಾರೆ ಮತ್ತು ನಮ್ಮ ಸಂಸ್ಥೆಗಳು (ಚುನಾವಣಾ ಆಯೋಗ) ಕಳ್ಳನನ್ನೇ ಮನೆಯ ಮಾಲೀಕರನ್ನಾಗಿ ಮಾಡಿ ನಿರ್ಧಾರ ತಗೆದುಕೊಂಡಿದೆ. ದೇಶದಲ್ಲಿ ಏನಾಗುತ್ತಿದೆ?” ಎಂದು ಪ್ರಶ್ನೆ ಮಾಡಿದ್ದಾರೆ.

ಸರದಿಯ ಆಧಾರದ ಮೇಲೆ ಕೇಸರಿ ಪಕ್ಷವು ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳುವ ತನ್ನ ಬದ್ಧತೆಯನ್ನು ತೋರಿದ್ದರೆ, ಭಾರತೀಯ ಜನತಾ ಪಕ್ಷದೊಂದಿಗಿನ ಶಿವಸೇನೆಯ ಮೈತ್ರಿಯು ಉಳಿಯುತ್ತಿತ್ತು ಎಂದು ಠಾಕ್ರೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...