Homeಮುಖಪುಟಪೊಲೀಸರ ರಕ್ತದಲ್ಲಿ ತೊಯ್ದ 'ಉತ್ತಮ'ಪ್ರದೇಶ : ಶಿವಸೇನೆ ಟೀಕೆ

ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

- Advertisement -
- Advertisement -

ಕಳೆದ ವಾರ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮತ್ತು ಅವನ ಸಹಚರರು ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಶಿವಸೇನೆ ಟೀಕಿಸಿದೆ. ಅವನು ಭಾರತಕ್ಕೆ ‘ನೇಪಾಳದ ದಾವೂದ್ (ಇಬ್ರಾಹಿಂ)’ ಆಗಬಾರದು ಎಂದು ಎಚ್ಚರಿಸಿದೆ.

ಕಳೆದ ವಾರ ಕಾನ್ಪುರ ಸಮೀಪದ ಡಿಕ್ರು ಎಂಬ ಹಳ್ಳಿಯೊಂದರಲ್ಲಿ ದುಬೆಯ ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿದ್ದರು. ಸದ್ಯಕ್ಕೆ ದುಬೆ ಪರಾರಿಯಾಗಿದ್ದು, ಆತನ ಸಹಚರನನ್ನು ಬಂಧಿಸಲಾಗಿದೆ.

ದುಬೆ ನೆರೆಯ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ ಎಂದು ಸಾಮನಾ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಭಾರತ ಮತ್ತು ನೇಪಾಳ ಗಡಿ ಸಂಬಂಧಗಳ ಬಗ್ಗೆ ಸೂಚಿಸುತ್ತಾ “ನೇಪಾಳದೊಂದಿಗಿನ ಭಾರತದ ಗಡಿಯಲ್ಲಿ ಯಾವಾಗಲೂ ಇಂತಹ ಘಟನೆಗಳು ಜರುಗುತ್ತವೆ. ಈ ಸಮಯದಲ್ಲಿ ನೇಪಾಳದೊಂದಿಗಿನ ನಮ್ಮ ಸಂಬಂಧವೂ ಉತ್ತಮವಾಗಿಲ್ಲ. ಈ ದೃಷ್ಟಿಯಲ್ಲಿ ವಿಕಾಸ್ ದುಬೆ ನಾಳೆ ನಮಗೆ ‘ನೇಪಾಳದ ದಾವೂದ್’ ಆಗಬಾರದು ಎಂದು ಅದು ಎಚ್ಚರಿಸಿದೆ.

ಉತ್ತರ ಪ್ರದೇಶವನ್ನು ಸಾಮಾನ್ಯವಾಗಿ ‘ಉತ್ತಮ ಪ್ರದೇಶ’ ಎಂದು ಕರೆಯಲಾಗುತ್ತದೆ. ಆದರೆ ಈಗ ಅದು ಪೊಲೀಸರ ರಕ್ತದಲ್ಲಿ ತೊಯ್ದು, ಭಾರತದ ಆಘಾತ ರಾಜ್ಯವಾಗಿದೆ ಎಂದು ಶಿವಸೇನೆ ಟೀಕಿಸಿದೆ.

‘ಎನ್‌ಕೌಂಟರ್‌’ಗಳಲ್ಲಿ ದರೋಡೆಕೋರರನ್ನು ಮುಗಿಸಲು ಹೆಸರುವಾಸಿಯಾದ ಯುಪಿ ಸರ್ಕಾರದ ಪಟ್ಟಿಯಲ್ಲಿ ದುಬೆ ಅವರ ಹೆಸರು ಹೇಗೆ ಕಾಣಿಸಿಕೊಂಡಿಲ್ಲ ಎಂದು ಸಂಪಾದಕೀಯವು ಆದಿತ್ಯನಾಥ್ ಅವರ ಸರ್ಕಾರಕ್ಕೆ ಹಲವಾರು ಪ್ರಶ್ನೆಗಳನ್ನು ಕೇಳಿದೆ.

ಆದಿತ್ಯನಾಥ್ ಅವರ ಮೂರು ವರ್ಷಗಳ ಅಧಿಕಾರಾವಧಿಯಲ್ಲಿ, 113 ಕ್ಕೂ ಹೆಚ್ಚು ದರೋಡೆಕೋರರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಆದರೆ ದುಬೆ ಅನಧಿಕೃತ ಬಂಗಲೆ ನಿರ್ಮಿಸಿದ್ದಾನೆ. ಅದು ದರೋಡೆಕೋರರು ಪೊಲೀಸರ ಹತ್ಯೆಯನ್ನು ಆಯೋಜಿಸಿದ ನಂತರವೇ ಸರ್ಕಾರದ ಗಮನಕ್ಕೆ ಬಂದಿತು. ಇದು “ದುರದೃಷ್ಟಕರ” ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

ಸರ್ಕಾರದ ಹಿಟ್ ಲಿಸ್ಟ್‌ನಲ್ಲಿ ವಿಕಾಸ್ ದುಬೆ ಹೆಸರನ್ನು ಹೇಗೆ ಬಿಡಲಾಯಿತು? ಕೊಲೆ ಮತ್ತು ದರೋಡೆ ಸೇರಿದಂತೆ 60 ಕ್ಕೂ ಹೆಚ್ಚು ಗಂಭೀರ ಅಪರಾಧಗಳನ್ನು ಆತ ಹೊಂದಿದ್ದಾನೆ. ಆದರೂ ಸಾಕ್ಷ್ಯಾಧಾರದ ಕೊರತೆಯಿಂದ ಹೇಗೆ ಹೊರಗಿದ್ದಾನೆ? ಆತನ ಪರವಾಗಿ ಪೊಲೀಸರು ಹೇಗೆ ಸಾಕ್ಷಿಗಳಾದರು? ಉತ್ತರ ಪ್ರದೇಶ ಪೊಲೀಸರು ಮತ್ತು ಸರ್ಕಾರದ ಅನುಕೂಲಕ್ಕೆ ಅನುಗುಣವಾಗಿ ಎನ್‌ಕೌಂಟರ್‌ಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆಯೇ? ಯಾರಾದರೂ ಅಂತಹ ಆರೋಪ ಮಾಡಿದರೆ, ಈ ಬಗ್ಗೆ ಯೋಗಿ ಸರ್ಕಾರ ಏನು ಹೇಳಬೇಕು? ಎಂದು ಸಂಪಾದಕೀಯ ಪ್ರಶ್ನಿಸಿದೆ.

ಈ ಘಟನೆಯು ನಾಲ್ಕು ದಶಕಗಳ ಹಿಂದೆ ಯುಪಿಯ ಕಥುಪುರದಲ್ಲಿ ಚಾವಿರಾಮ್ ಎಂಬ ಡಕಾಯಿತನಿಂದ 11 ಪೊಲೀಸರನ್ನು ಹತ್ಯೆ ಮಾಡಿದ ನೆನಪುಗಳನ್ನು ಮರಕಳಿಸಿದೆ. “40 ವರ್ಷಗಳ ನಂತರವೂ, ಯೋಗಿ ಮಹಾರಾಜರ ಉತ್ತರ ಪ್ರದೇಶದಲ್ಲಿ ಬದಲಾದ ದರೋಡೆಕೋರರು ಈ ರೀತಿ ಪೊಲೀಸರನ್ನು ಕೊಲ್ಲಲು ಸಾಧ್ಯವಾದರೆ … ಯೋಗಿ ಸರ್ಕಾರವು ಉತ್ತರಿಸಬೇಕಾದ ಹಲವಾರು ಪ್ರಶ್ನೆಗಳಿವೆ ಏಕೆಂದರೆ ‘ಉತ್ತರ ಪ್ರದೇಶ’ ಈಗ ಪೊಲೀಸರ ರಕ್ತದಲ್ಲಿ ತೊಯ್ದಿದೆ” ಎಂದು ಶಿವಸೇನೆ ತನ್ನ ಸಂಪಾದಕೀಯದಲ್ಲಿ ಹೇಳಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...