Homeಮುಖಪುಟಪೊಲೀಸರ ರಕ್ತದಲ್ಲಿ ತೊಯ್ದ 'ಉತ್ತಮ'ಪ್ರದೇಶ : ಶಿವಸೇನೆ ಟೀಕೆ

ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

- Advertisement -
- Advertisement -

ಕಳೆದ ವಾರ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮತ್ತು ಅವನ ಸಹಚರರು ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಶಿವಸೇನೆ ಟೀಕಿಸಿದೆ. ಅವನು ಭಾರತಕ್ಕೆ ‘ನೇಪಾಳದ ದಾವೂದ್ (ಇಬ್ರಾಹಿಂ)’ ಆಗಬಾರದು ಎಂದು ಎಚ್ಚರಿಸಿದೆ.

ಕಳೆದ ವಾರ ಕಾನ್ಪುರ ಸಮೀಪದ ಡಿಕ್ರು ಎಂಬ ಹಳ್ಳಿಯೊಂದರಲ್ಲಿ ದುಬೆಯ ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿದ್ದರು. ಸದ್ಯಕ್ಕೆ ದುಬೆ ಪರಾರಿಯಾಗಿದ್ದು, ಆತನ ಸಹಚರನನ್ನು ಬಂಧಿಸಲಾಗಿದೆ.

ದುಬೆ ನೆರೆಯ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ ಎಂದು ಸಾಮನಾ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಭಾರತ ಮತ್ತು ನೇಪಾಳ ಗಡಿ ಸಂಬಂಧಗಳ ಬಗ್ಗೆ ಸೂಚಿಸುತ್ತಾ “ನೇಪಾಳದೊಂದಿಗಿನ ಭಾರತದ ಗಡಿಯಲ್ಲಿ ಯಾವಾಗಲೂ ಇಂತಹ ಘಟನೆಗಳು ಜರುಗುತ್ತವೆ. ಈ ಸಮಯದಲ್ಲಿ ನೇಪಾಳದೊಂದಿಗಿನ ನಮ್ಮ ಸಂಬಂಧವೂ ಉತ್ತಮವಾಗಿಲ್ಲ. ಈ ದೃಷ್ಟಿಯಲ್ಲಿ ವಿಕಾಸ್ ದುಬೆ ನಾಳೆ ನಮಗೆ ‘ನೇಪಾಳದ ದಾವೂದ್’ ಆಗಬಾರದು ಎಂದು ಅದು ಎಚ್ಚರಿಸಿದೆ.

ಉತ್ತರ ಪ್ರದೇಶವನ್ನು ಸಾಮಾನ್ಯವಾಗಿ ‘ಉತ್ತಮ ಪ್ರದೇಶ’ ಎಂದು ಕರೆಯಲಾಗುತ್ತದೆ. ಆದರೆ ಈಗ ಅದು ಪೊಲೀಸರ ರಕ್ತದಲ್ಲಿ ತೊಯ್ದು, ಭಾರತದ ಆಘಾತ ರಾಜ್ಯವಾಗಿದೆ ಎಂದು ಶಿವಸೇನೆ ಟೀಕಿಸಿದೆ.

‘ಎನ್‌ಕೌಂಟರ್‌’ಗಳಲ್ಲಿ ದರೋಡೆಕೋರರನ್ನು ಮುಗಿಸಲು ಹೆಸರುವಾಸಿಯಾದ ಯುಪಿ ಸರ್ಕಾರದ ಪಟ್ಟಿಯಲ್ಲಿ ದುಬೆ ಅವರ ಹೆಸರು ಹೇಗೆ ಕಾಣಿಸಿಕೊಂಡಿಲ್ಲ ಎಂದು ಸಂಪಾದಕೀಯವು ಆದಿತ್ಯನಾಥ್ ಅವರ ಸರ್ಕಾರಕ್ಕೆ ಹಲವಾರು ಪ್ರಶ್ನೆಗಳನ್ನು ಕೇಳಿದೆ.

ಆದಿತ್ಯನಾಥ್ ಅವರ ಮೂರು ವರ್ಷಗಳ ಅಧಿಕಾರಾವಧಿಯಲ್ಲಿ, 113 ಕ್ಕೂ ಹೆಚ್ಚು ದರೋಡೆಕೋರರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಆದರೆ ದುಬೆ ಅನಧಿಕೃತ ಬಂಗಲೆ ನಿರ್ಮಿಸಿದ್ದಾನೆ. ಅದು ದರೋಡೆಕೋರರು ಪೊಲೀಸರ ಹತ್ಯೆಯನ್ನು ಆಯೋಜಿಸಿದ ನಂತರವೇ ಸರ್ಕಾರದ ಗಮನಕ್ಕೆ ಬಂದಿತು. ಇದು “ದುರದೃಷ್ಟಕರ” ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

ಸರ್ಕಾರದ ಹಿಟ್ ಲಿಸ್ಟ್‌ನಲ್ಲಿ ವಿಕಾಸ್ ದುಬೆ ಹೆಸರನ್ನು ಹೇಗೆ ಬಿಡಲಾಯಿತು? ಕೊಲೆ ಮತ್ತು ದರೋಡೆ ಸೇರಿದಂತೆ 60 ಕ್ಕೂ ಹೆಚ್ಚು ಗಂಭೀರ ಅಪರಾಧಗಳನ್ನು ಆತ ಹೊಂದಿದ್ದಾನೆ. ಆದರೂ ಸಾಕ್ಷ್ಯಾಧಾರದ ಕೊರತೆಯಿಂದ ಹೇಗೆ ಹೊರಗಿದ್ದಾನೆ? ಆತನ ಪರವಾಗಿ ಪೊಲೀಸರು ಹೇಗೆ ಸಾಕ್ಷಿಗಳಾದರು? ಉತ್ತರ ಪ್ರದೇಶ ಪೊಲೀಸರು ಮತ್ತು ಸರ್ಕಾರದ ಅನುಕೂಲಕ್ಕೆ ಅನುಗುಣವಾಗಿ ಎನ್‌ಕೌಂಟರ್‌ಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆಯೇ? ಯಾರಾದರೂ ಅಂತಹ ಆರೋಪ ಮಾಡಿದರೆ, ಈ ಬಗ್ಗೆ ಯೋಗಿ ಸರ್ಕಾರ ಏನು ಹೇಳಬೇಕು? ಎಂದು ಸಂಪಾದಕೀಯ ಪ್ರಶ್ನಿಸಿದೆ.

ಈ ಘಟನೆಯು ನಾಲ್ಕು ದಶಕಗಳ ಹಿಂದೆ ಯುಪಿಯ ಕಥುಪುರದಲ್ಲಿ ಚಾವಿರಾಮ್ ಎಂಬ ಡಕಾಯಿತನಿಂದ 11 ಪೊಲೀಸರನ್ನು ಹತ್ಯೆ ಮಾಡಿದ ನೆನಪುಗಳನ್ನು ಮರಕಳಿಸಿದೆ. “40 ವರ್ಷಗಳ ನಂತರವೂ, ಯೋಗಿ ಮಹಾರಾಜರ ಉತ್ತರ ಪ್ರದೇಶದಲ್ಲಿ ಬದಲಾದ ದರೋಡೆಕೋರರು ಈ ರೀತಿ ಪೊಲೀಸರನ್ನು ಕೊಲ್ಲಲು ಸಾಧ್ಯವಾದರೆ … ಯೋಗಿ ಸರ್ಕಾರವು ಉತ್ತರಿಸಬೇಕಾದ ಹಲವಾರು ಪ್ರಶ್ನೆಗಳಿವೆ ಏಕೆಂದರೆ ‘ಉತ್ತರ ಪ್ರದೇಶ’ ಈಗ ಪೊಲೀಸರ ರಕ್ತದಲ್ಲಿ ತೊಯ್ದಿದೆ” ಎಂದು ಶಿವಸೇನೆ ತನ್ನ ಸಂಪಾದಕೀಯದಲ್ಲಿ ಹೇಳಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...