Homeಮುಖಪುಟಪೊಲೀಸರ ರಕ್ತದಲ್ಲಿ ತೊಯ್ದ 'ಉತ್ತಮ'ಪ್ರದೇಶ : ಶಿವಸೇನೆ ಟೀಕೆ

ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

- Advertisement -
- Advertisement -

ಕಳೆದ ವಾರ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮತ್ತು ಅವನ ಸಹಚರರು ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಶಿವಸೇನೆ ಟೀಕಿಸಿದೆ. ಅವನು ಭಾರತಕ್ಕೆ ‘ನೇಪಾಳದ ದಾವೂದ್ (ಇಬ್ರಾಹಿಂ)’ ಆಗಬಾರದು ಎಂದು ಎಚ್ಚರಿಸಿದೆ.

ಕಳೆದ ವಾರ ಕಾನ್ಪುರ ಸಮೀಪದ ಡಿಕ್ರು ಎಂಬ ಹಳ್ಳಿಯೊಂದರಲ್ಲಿ ದುಬೆಯ ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿದ್ದರು. ಸದ್ಯಕ್ಕೆ ದುಬೆ ಪರಾರಿಯಾಗಿದ್ದು, ಆತನ ಸಹಚರನನ್ನು ಬಂಧಿಸಲಾಗಿದೆ.

ದುಬೆ ನೆರೆಯ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ ಎಂದು ಸಾಮನಾ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಭಾರತ ಮತ್ತು ನೇಪಾಳ ಗಡಿ ಸಂಬಂಧಗಳ ಬಗ್ಗೆ ಸೂಚಿಸುತ್ತಾ “ನೇಪಾಳದೊಂದಿಗಿನ ಭಾರತದ ಗಡಿಯಲ್ಲಿ ಯಾವಾಗಲೂ ಇಂತಹ ಘಟನೆಗಳು ಜರುಗುತ್ತವೆ. ಈ ಸಮಯದಲ್ಲಿ ನೇಪಾಳದೊಂದಿಗಿನ ನಮ್ಮ ಸಂಬಂಧವೂ ಉತ್ತಮವಾಗಿಲ್ಲ. ಈ ದೃಷ್ಟಿಯಲ್ಲಿ ವಿಕಾಸ್ ದುಬೆ ನಾಳೆ ನಮಗೆ ‘ನೇಪಾಳದ ದಾವೂದ್’ ಆಗಬಾರದು ಎಂದು ಅದು ಎಚ್ಚರಿಸಿದೆ.

ಉತ್ತರ ಪ್ರದೇಶವನ್ನು ಸಾಮಾನ್ಯವಾಗಿ ‘ಉತ್ತಮ ಪ್ರದೇಶ’ ಎಂದು ಕರೆಯಲಾಗುತ್ತದೆ. ಆದರೆ ಈಗ ಅದು ಪೊಲೀಸರ ರಕ್ತದಲ್ಲಿ ತೊಯ್ದು, ಭಾರತದ ಆಘಾತ ರಾಜ್ಯವಾಗಿದೆ ಎಂದು ಶಿವಸೇನೆ ಟೀಕಿಸಿದೆ.

‘ಎನ್‌ಕೌಂಟರ್‌’ಗಳಲ್ಲಿ ದರೋಡೆಕೋರರನ್ನು ಮುಗಿಸಲು ಹೆಸರುವಾಸಿಯಾದ ಯುಪಿ ಸರ್ಕಾರದ ಪಟ್ಟಿಯಲ್ಲಿ ದುಬೆ ಅವರ ಹೆಸರು ಹೇಗೆ ಕಾಣಿಸಿಕೊಂಡಿಲ್ಲ ಎಂದು ಸಂಪಾದಕೀಯವು ಆದಿತ್ಯನಾಥ್ ಅವರ ಸರ್ಕಾರಕ್ಕೆ ಹಲವಾರು ಪ್ರಶ್ನೆಗಳನ್ನು ಕೇಳಿದೆ.

ಆದಿತ್ಯನಾಥ್ ಅವರ ಮೂರು ವರ್ಷಗಳ ಅಧಿಕಾರಾವಧಿಯಲ್ಲಿ, 113 ಕ್ಕೂ ಹೆಚ್ಚು ದರೋಡೆಕೋರರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಆದರೆ ದುಬೆ ಅನಧಿಕೃತ ಬಂಗಲೆ ನಿರ್ಮಿಸಿದ್ದಾನೆ. ಅದು ದರೋಡೆಕೋರರು ಪೊಲೀಸರ ಹತ್ಯೆಯನ್ನು ಆಯೋಜಿಸಿದ ನಂತರವೇ ಸರ್ಕಾರದ ಗಮನಕ್ಕೆ ಬಂದಿತು. ಇದು “ದುರದೃಷ್ಟಕರ” ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

ಸರ್ಕಾರದ ಹಿಟ್ ಲಿಸ್ಟ್‌ನಲ್ಲಿ ವಿಕಾಸ್ ದುಬೆ ಹೆಸರನ್ನು ಹೇಗೆ ಬಿಡಲಾಯಿತು? ಕೊಲೆ ಮತ್ತು ದರೋಡೆ ಸೇರಿದಂತೆ 60 ಕ್ಕೂ ಹೆಚ್ಚು ಗಂಭೀರ ಅಪರಾಧಗಳನ್ನು ಆತ ಹೊಂದಿದ್ದಾನೆ. ಆದರೂ ಸಾಕ್ಷ್ಯಾಧಾರದ ಕೊರತೆಯಿಂದ ಹೇಗೆ ಹೊರಗಿದ್ದಾನೆ? ಆತನ ಪರವಾಗಿ ಪೊಲೀಸರು ಹೇಗೆ ಸಾಕ್ಷಿಗಳಾದರು? ಉತ್ತರ ಪ್ರದೇಶ ಪೊಲೀಸರು ಮತ್ತು ಸರ್ಕಾರದ ಅನುಕೂಲಕ್ಕೆ ಅನುಗುಣವಾಗಿ ಎನ್‌ಕೌಂಟರ್‌ಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆಯೇ? ಯಾರಾದರೂ ಅಂತಹ ಆರೋಪ ಮಾಡಿದರೆ, ಈ ಬಗ್ಗೆ ಯೋಗಿ ಸರ್ಕಾರ ಏನು ಹೇಳಬೇಕು? ಎಂದು ಸಂಪಾದಕೀಯ ಪ್ರಶ್ನಿಸಿದೆ.

ಈ ಘಟನೆಯು ನಾಲ್ಕು ದಶಕಗಳ ಹಿಂದೆ ಯುಪಿಯ ಕಥುಪುರದಲ್ಲಿ ಚಾವಿರಾಮ್ ಎಂಬ ಡಕಾಯಿತನಿಂದ 11 ಪೊಲೀಸರನ್ನು ಹತ್ಯೆ ಮಾಡಿದ ನೆನಪುಗಳನ್ನು ಮರಕಳಿಸಿದೆ. “40 ವರ್ಷಗಳ ನಂತರವೂ, ಯೋಗಿ ಮಹಾರಾಜರ ಉತ್ತರ ಪ್ರದೇಶದಲ್ಲಿ ಬದಲಾದ ದರೋಡೆಕೋರರು ಈ ರೀತಿ ಪೊಲೀಸರನ್ನು ಕೊಲ್ಲಲು ಸಾಧ್ಯವಾದರೆ … ಯೋಗಿ ಸರ್ಕಾರವು ಉತ್ತರಿಸಬೇಕಾದ ಹಲವಾರು ಪ್ರಶ್ನೆಗಳಿವೆ ಏಕೆಂದರೆ ‘ಉತ್ತರ ಪ್ರದೇಶ’ ಈಗ ಪೊಲೀಸರ ರಕ್ತದಲ್ಲಿ ತೊಯ್ದಿದೆ” ಎಂದು ಶಿವಸೇನೆ ತನ್ನ ಸಂಪಾದಕೀಯದಲ್ಲಿ ಹೇಳಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...