Homeಮುಖಪುಟಪೊಲೀಸರ ರಕ್ತದಲ್ಲಿ ತೊಯ್ದ 'ಉತ್ತಮ'ಪ್ರದೇಶ : ಶಿವಸೇನೆ ಟೀಕೆ

ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

- Advertisement -
- Advertisement -

ಕಳೆದ ವಾರ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮತ್ತು ಅವನ ಸಹಚರರು ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಶಿವಸೇನೆ ಟೀಕಿಸಿದೆ. ಅವನು ಭಾರತಕ್ಕೆ ‘ನೇಪಾಳದ ದಾವೂದ್ (ಇಬ್ರಾಹಿಂ)’ ಆಗಬಾರದು ಎಂದು ಎಚ್ಚರಿಸಿದೆ.

ಕಳೆದ ವಾರ ಕಾನ್ಪುರ ಸಮೀಪದ ಡಿಕ್ರು ಎಂಬ ಹಳ್ಳಿಯೊಂದರಲ್ಲಿ ದುಬೆಯ ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿದ್ದರು. ಸದ್ಯಕ್ಕೆ ದುಬೆ ಪರಾರಿಯಾಗಿದ್ದು, ಆತನ ಸಹಚರನನ್ನು ಬಂಧಿಸಲಾಗಿದೆ.

ದುಬೆ ನೆರೆಯ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ ಎಂದು ಸಾಮನಾ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಭಾರತ ಮತ್ತು ನೇಪಾಳ ಗಡಿ ಸಂಬಂಧಗಳ ಬಗ್ಗೆ ಸೂಚಿಸುತ್ತಾ “ನೇಪಾಳದೊಂದಿಗಿನ ಭಾರತದ ಗಡಿಯಲ್ಲಿ ಯಾವಾಗಲೂ ಇಂತಹ ಘಟನೆಗಳು ಜರುಗುತ್ತವೆ. ಈ ಸಮಯದಲ್ಲಿ ನೇಪಾಳದೊಂದಿಗಿನ ನಮ್ಮ ಸಂಬಂಧವೂ ಉತ್ತಮವಾಗಿಲ್ಲ. ಈ ದೃಷ್ಟಿಯಲ್ಲಿ ವಿಕಾಸ್ ದುಬೆ ನಾಳೆ ನಮಗೆ ‘ನೇಪಾಳದ ದಾವೂದ್’ ಆಗಬಾರದು ಎಂದು ಅದು ಎಚ್ಚರಿಸಿದೆ.

ಉತ್ತರ ಪ್ರದೇಶವನ್ನು ಸಾಮಾನ್ಯವಾಗಿ ‘ಉತ್ತಮ ಪ್ರದೇಶ’ ಎಂದು ಕರೆಯಲಾಗುತ್ತದೆ. ಆದರೆ ಈಗ ಅದು ಪೊಲೀಸರ ರಕ್ತದಲ್ಲಿ ತೊಯ್ದು, ಭಾರತದ ಆಘಾತ ರಾಜ್ಯವಾಗಿದೆ ಎಂದು ಶಿವಸೇನೆ ಟೀಕಿಸಿದೆ.

‘ಎನ್‌ಕೌಂಟರ್‌’ಗಳಲ್ಲಿ ದರೋಡೆಕೋರರನ್ನು ಮುಗಿಸಲು ಹೆಸರುವಾಸಿಯಾದ ಯುಪಿ ಸರ್ಕಾರದ ಪಟ್ಟಿಯಲ್ಲಿ ದುಬೆ ಅವರ ಹೆಸರು ಹೇಗೆ ಕಾಣಿಸಿಕೊಂಡಿಲ್ಲ ಎಂದು ಸಂಪಾದಕೀಯವು ಆದಿತ್ಯನಾಥ್ ಅವರ ಸರ್ಕಾರಕ್ಕೆ ಹಲವಾರು ಪ್ರಶ್ನೆಗಳನ್ನು ಕೇಳಿದೆ.

ಆದಿತ್ಯನಾಥ್ ಅವರ ಮೂರು ವರ್ಷಗಳ ಅಧಿಕಾರಾವಧಿಯಲ್ಲಿ, 113 ಕ್ಕೂ ಹೆಚ್ಚು ದರೋಡೆಕೋರರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಆದರೆ ದುಬೆ ಅನಧಿಕೃತ ಬಂಗಲೆ ನಿರ್ಮಿಸಿದ್ದಾನೆ. ಅದು ದರೋಡೆಕೋರರು ಪೊಲೀಸರ ಹತ್ಯೆಯನ್ನು ಆಯೋಜಿಸಿದ ನಂತರವೇ ಸರ್ಕಾರದ ಗಮನಕ್ಕೆ ಬಂದಿತು. ಇದು “ದುರದೃಷ್ಟಕರ” ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

ಸರ್ಕಾರದ ಹಿಟ್ ಲಿಸ್ಟ್‌ನಲ್ಲಿ ವಿಕಾಸ್ ದುಬೆ ಹೆಸರನ್ನು ಹೇಗೆ ಬಿಡಲಾಯಿತು? ಕೊಲೆ ಮತ್ತು ದರೋಡೆ ಸೇರಿದಂತೆ 60 ಕ್ಕೂ ಹೆಚ್ಚು ಗಂಭೀರ ಅಪರಾಧಗಳನ್ನು ಆತ ಹೊಂದಿದ್ದಾನೆ. ಆದರೂ ಸಾಕ್ಷ್ಯಾಧಾರದ ಕೊರತೆಯಿಂದ ಹೇಗೆ ಹೊರಗಿದ್ದಾನೆ? ಆತನ ಪರವಾಗಿ ಪೊಲೀಸರು ಹೇಗೆ ಸಾಕ್ಷಿಗಳಾದರು? ಉತ್ತರ ಪ್ರದೇಶ ಪೊಲೀಸರು ಮತ್ತು ಸರ್ಕಾರದ ಅನುಕೂಲಕ್ಕೆ ಅನುಗುಣವಾಗಿ ಎನ್‌ಕೌಂಟರ್‌ಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆಯೇ? ಯಾರಾದರೂ ಅಂತಹ ಆರೋಪ ಮಾಡಿದರೆ, ಈ ಬಗ್ಗೆ ಯೋಗಿ ಸರ್ಕಾರ ಏನು ಹೇಳಬೇಕು? ಎಂದು ಸಂಪಾದಕೀಯ ಪ್ರಶ್ನಿಸಿದೆ.

ಈ ಘಟನೆಯು ನಾಲ್ಕು ದಶಕಗಳ ಹಿಂದೆ ಯುಪಿಯ ಕಥುಪುರದಲ್ಲಿ ಚಾವಿರಾಮ್ ಎಂಬ ಡಕಾಯಿತನಿಂದ 11 ಪೊಲೀಸರನ್ನು ಹತ್ಯೆ ಮಾಡಿದ ನೆನಪುಗಳನ್ನು ಮರಕಳಿಸಿದೆ. “40 ವರ್ಷಗಳ ನಂತರವೂ, ಯೋಗಿ ಮಹಾರಾಜರ ಉತ್ತರ ಪ್ರದೇಶದಲ್ಲಿ ಬದಲಾದ ದರೋಡೆಕೋರರು ಈ ರೀತಿ ಪೊಲೀಸರನ್ನು ಕೊಲ್ಲಲು ಸಾಧ್ಯವಾದರೆ … ಯೋಗಿ ಸರ್ಕಾರವು ಉತ್ತರಿಸಬೇಕಾದ ಹಲವಾರು ಪ್ರಶ್ನೆಗಳಿವೆ ಏಕೆಂದರೆ ‘ಉತ್ತರ ಪ್ರದೇಶ’ ಈಗ ಪೊಲೀಸರ ರಕ್ತದಲ್ಲಿ ತೊಯ್ದಿದೆ” ಎಂದು ಶಿವಸೇನೆ ತನ್ನ ಸಂಪಾದಕೀಯದಲ್ಲಿ ಹೇಳಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...