Homeಮುಖಪುಟಪೊಲೀಸರ ರಕ್ತದಲ್ಲಿ ತೊಯ್ದ 'ಉತ್ತಮ'ಪ್ರದೇಶ : ಶಿವಸೇನೆ ಟೀಕೆ

ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

- Advertisement -
- Advertisement -

ಕಳೆದ ವಾರ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮತ್ತು ಅವನ ಸಹಚರರು ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಶಿವಸೇನೆ ಟೀಕಿಸಿದೆ. ಅವನು ಭಾರತಕ್ಕೆ ‘ನೇಪಾಳದ ದಾವೂದ್ (ಇಬ್ರಾಹಿಂ)’ ಆಗಬಾರದು ಎಂದು ಎಚ್ಚರಿಸಿದೆ.

ಕಳೆದ ವಾರ ಕಾನ್ಪುರ ಸಮೀಪದ ಡಿಕ್ರು ಎಂಬ ಹಳ್ಳಿಯೊಂದರಲ್ಲಿ ದುಬೆಯ ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿದ್ದರು. ಸದ್ಯಕ್ಕೆ ದುಬೆ ಪರಾರಿಯಾಗಿದ್ದು, ಆತನ ಸಹಚರನನ್ನು ಬಂಧಿಸಲಾಗಿದೆ.

ದುಬೆ ನೆರೆಯ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ ಎಂದು ಸಾಮನಾ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಭಾರತ ಮತ್ತು ನೇಪಾಳ ಗಡಿ ಸಂಬಂಧಗಳ ಬಗ್ಗೆ ಸೂಚಿಸುತ್ತಾ “ನೇಪಾಳದೊಂದಿಗಿನ ಭಾರತದ ಗಡಿಯಲ್ಲಿ ಯಾವಾಗಲೂ ಇಂತಹ ಘಟನೆಗಳು ಜರುಗುತ್ತವೆ. ಈ ಸಮಯದಲ್ಲಿ ನೇಪಾಳದೊಂದಿಗಿನ ನಮ್ಮ ಸಂಬಂಧವೂ ಉತ್ತಮವಾಗಿಲ್ಲ. ಈ ದೃಷ್ಟಿಯಲ್ಲಿ ವಿಕಾಸ್ ದುಬೆ ನಾಳೆ ನಮಗೆ ‘ನೇಪಾಳದ ದಾವೂದ್’ ಆಗಬಾರದು ಎಂದು ಅದು ಎಚ್ಚರಿಸಿದೆ.

ಉತ್ತರ ಪ್ರದೇಶವನ್ನು ಸಾಮಾನ್ಯವಾಗಿ ‘ಉತ್ತಮ ಪ್ರದೇಶ’ ಎಂದು ಕರೆಯಲಾಗುತ್ತದೆ. ಆದರೆ ಈಗ ಅದು ಪೊಲೀಸರ ರಕ್ತದಲ್ಲಿ ತೊಯ್ದು, ಭಾರತದ ಆಘಾತ ರಾಜ್ಯವಾಗಿದೆ ಎಂದು ಶಿವಸೇನೆ ಟೀಕಿಸಿದೆ.

‘ಎನ್‌ಕೌಂಟರ್‌’ಗಳಲ್ಲಿ ದರೋಡೆಕೋರರನ್ನು ಮುಗಿಸಲು ಹೆಸರುವಾಸಿಯಾದ ಯುಪಿ ಸರ್ಕಾರದ ಪಟ್ಟಿಯಲ್ಲಿ ದುಬೆ ಅವರ ಹೆಸರು ಹೇಗೆ ಕಾಣಿಸಿಕೊಂಡಿಲ್ಲ ಎಂದು ಸಂಪಾದಕೀಯವು ಆದಿತ್ಯನಾಥ್ ಅವರ ಸರ್ಕಾರಕ್ಕೆ ಹಲವಾರು ಪ್ರಶ್ನೆಗಳನ್ನು ಕೇಳಿದೆ.

ಆದಿತ್ಯನಾಥ್ ಅವರ ಮೂರು ವರ್ಷಗಳ ಅಧಿಕಾರಾವಧಿಯಲ್ಲಿ, 113 ಕ್ಕೂ ಹೆಚ್ಚು ದರೋಡೆಕೋರರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಆದರೆ ದುಬೆ ಅನಧಿಕೃತ ಬಂಗಲೆ ನಿರ್ಮಿಸಿದ್ದಾನೆ. ಅದು ದರೋಡೆಕೋರರು ಪೊಲೀಸರ ಹತ್ಯೆಯನ್ನು ಆಯೋಜಿಸಿದ ನಂತರವೇ ಸರ್ಕಾರದ ಗಮನಕ್ಕೆ ಬಂದಿತು. ಇದು “ದುರದೃಷ್ಟಕರ” ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

ಸರ್ಕಾರದ ಹಿಟ್ ಲಿಸ್ಟ್‌ನಲ್ಲಿ ವಿಕಾಸ್ ದುಬೆ ಹೆಸರನ್ನು ಹೇಗೆ ಬಿಡಲಾಯಿತು? ಕೊಲೆ ಮತ್ತು ದರೋಡೆ ಸೇರಿದಂತೆ 60 ಕ್ಕೂ ಹೆಚ್ಚು ಗಂಭೀರ ಅಪರಾಧಗಳನ್ನು ಆತ ಹೊಂದಿದ್ದಾನೆ. ಆದರೂ ಸಾಕ್ಷ್ಯಾಧಾರದ ಕೊರತೆಯಿಂದ ಹೇಗೆ ಹೊರಗಿದ್ದಾನೆ? ಆತನ ಪರವಾಗಿ ಪೊಲೀಸರು ಹೇಗೆ ಸಾಕ್ಷಿಗಳಾದರು? ಉತ್ತರ ಪ್ರದೇಶ ಪೊಲೀಸರು ಮತ್ತು ಸರ್ಕಾರದ ಅನುಕೂಲಕ್ಕೆ ಅನುಗುಣವಾಗಿ ಎನ್‌ಕೌಂಟರ್‌ಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆಯೇ? ಯಾರಾದರೂ ಅಂತಹ ಆರೋಪ ಮಾಡಿದರೆ, ಈ ಬಗ್ಗೆ ಯೋಗಿ ಸರ್ಕಾರ ಏನು ಹೇಳಬೇಕು? ಎಂದು ಸಂಪಾದಕೀಯ ಪ್ರಶ್ನಿಸಿದೆ.

ಈ ಘಟನೆಯು ನಾಲ್ಕು ದಶಕಗಳ ಹಿಂದೆ ಯುಪಿಯ ಕಥುಪುರದಲ್ಲಿ ಚಾವಿರಾಮ್ ಎಂಬ ಡಕಾಯಿತನಿಂದ 11 ಪೊಲೀಸರನ್ನು ಹತ್ಯೆ ಮಾಡಿದ ನೆನಪುಗಳನ್ನು ಮರಕಳಿಸಿದೆ. “40 ವರ್ಷಗಳ ನಂತರವೂ, ಯೋಗಿ ಮಹಾರಾಜರ ಉತ್ತರ ಪ್ರದೇಶದಲ್ಲಿ ಬದಲಾದ ದರೋಡೆಕೋರರು ಈ ರೀತಿ ಪೊಲೀಸರನ್ನು ಕೊಲ್ಲಲು ಸಾಧ್ಯವಾದರೆ … ಯೋಗಿ ಸರ್ಕಾರವು ಉತ್ತರಿಸಬೇಕಾದ ಹಲವಾರು ಪ್ರಶ್ನೆಗಳಿವೆ ಏಕೆಂದರೆ ‘ಉತ್ತರ ಪ್ರದೇಶ’ ಈಗ ಪೊಲೀಸರ ರಕ್ತದಲ್ಲಿ ತೊಯ್ದಿದೆ” ಎಂದು ಶಿವಸೇನೆ ತನ್ನ ಸಂಪಾದಕೀಯದಲ್ಲಿ ಹೇಳಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...