Homeಕರ್ನಾಟಕಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

- Advertisement -
- Advertisement -

ಮಂಗಳೂರಿನ ಪಂಪ್‌ವೆಲ್‌ನ ಮಹಾವೀರ ಸರ್ಕಲ್‌‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಟೀಕೆಗೆ ಗುರಿಯಾಗಿದೆ.

“ಇದು ಕರಾವಳಿಗರಿಗೂ ಶಾಂತಿಯ ಪ್ರತೀಕ ಮಹಾವೀರರಿಗೂ ಮಾಡುವ ಅವಮಾನ ಅಲ್ಲವೇ? ಕರಾವಳಿಯನ್ನು ಲೂಟಿ ಮಾಡಿದವರ, ಕರಾವಳಿಯನ್ನು ಅಭಿವೃದ್ದಿಯಲ್ಲಿ ಹಿಂದೆ ತಳ್ಳಿದವರ ಪ್ರತಿಮೆಯನ್ನು ಕರಾವಳಿಯಲ್ಲಿ ಸ್ಥಾಪಿಸುವುದು ಸರಿಯೇ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ನವೀನ್ ಸೂರಿಂಜೆ, “1665ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಅಕ್ಕಿ, ಕಾಳುಮೆಣಸು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು” ಎಂದು ತಿಳಿಸಿದ್ದಾರೆ.

“ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ.‘ ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು” ಎಂದು ವಿವರಿಸಿದ್ದಾರೆ.

“ಪಂಪ್ ವೆಲ್ ಮಹಾವೀರ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾದರೆ ಕೋಟಿ ಚೆನ್ನಯ್ಯರ ಪ್ರತಿಮೆ ಸ್ಥಾಪನೆ ಮಾಡಬೇಕು. ಅಲ್ಲೆ ಹತ್ತಿರದಲ್ಲಿ ಕಂಕನಾಡಿ ಗರೋಡಿಯೂ ಇದೆ. ಕರಾವಳಿಗರಿಗೊಂದು ಸ್ವಾಭಿಮಾನದ ಬದುಕು ಕಲಿಸಿದ ಕೋಟಿ ಚೆನ್ನಯ್ಯರು ಪ್ರತಿಮೆ ಸ್ಥಾಪಿಸಬೇಕೆ ಹೊರತು ಮಂಗಳೂರನ್ನು ದರೋಡೆ ಮಾಡಿದ್ದ ಶಿವಾಜಿಯದ್ದಲ್ಲ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನವೀನ್‌ ಸೂರಿಂಜೆಯವರ ಬರಹವನ್ನು ಹತ್ತಾರು ಮಂದಿ ಹಂಚಿಕೊಂಡಿದ್ದಾರೆ. “ತುಳುನಾಡಿಗೆ ಮಾತ್ರವಲ್ಲ ಕನ್ನಡ ನಾಡಿಗೆ ಸಾಹಿತ್ಯ ಪರಂಪರೆಗೆ ಜೈನರ ಕೊಡುಗೆ ಮಹತ್ವದ್ದು. ಮಹಾವೀರರ ಹೆಸರು ಅಳಿಸುವುದು ಸರಿಯಲ್ಲ” ಎಂದು ಮಹಾಂತೇಶ್‌ ಕರಿಯಪ್ಪ ಎಂಬವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಲ್ಸನ್‌ ಕಿಣ್ಣಿಗೊಲಿ ಎಂಬವರು ಪ್ರತಿಕ್ರಿಯಿಸಿ, “ಇತ್ತೀಚಿಗೆ ಹೆಸರು ಬದಲಿಸುವ/ಪ್ರತಿಮೆ ಸ್ಥಾಪನೆ ನೆಪದಲ್ಲಿ ನಮ್ಮ ನೆಲದ ವಿರೋಧಿಗಳನ್ನೇ ಆರಿಸುವುದು ನೋಡಿದರೆ ಈ ಸರ್ಕಾರಕ್ಕೆ ಸ್ವಾಭಿಮಾನವೇ ಇಲ್ಲದಂತಾಗಿದೆ. ಇವರೊಂದಿಗೆ ನಮಗೂ ಸ್ವಾಭಿಮಾನ ಇಲ್ಲದಂತೆ ಮಾಡಿಬಿಟ್ಟಿದ್ದಾರಲ್ಲ” ಎಂದು ವಿವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...