Homeಕರ್ನಾಟಕಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

- Advertisement -
- Advertisement -

ಮಂಗಳೂರಿನ ಪಂಪ್‌ವೆಲ್‌ನ ಮಹಾವೀರ ಸರ್ಕಲ್‌‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಟೀಕೆಗೆ ಗುರಿಯಾಗಿದೆ.

“ಇದು ಕರಾವಳಿಗರಿಗೂ ಶಾಂತಿಯ ಪ್ರತೀಕ ಮಹಾವೀರರಿಗೂ ಮಾಡುವ ಅವಮಾನ ಅಲ್ಲವೇ? ಕರಾವಳಿಯನ್ನು ಲೂಟಿ ಮಾಡಿದವರ, ಕರಾವಳಿಯನ್ನು ಅಭಿವೃದ್ದಿಯಲ್ಲಿ ಹಿಂದೆ ತಳ್ಳಿದವರ ಪ್ರತಿಮೆಯನ್ನು ಕರಾವಳಿಯಲ್ಲಿ ಸ್ಥಾಪಿಸುವುದು ಸರಿಯೇ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ನವೀನ್ ಸೂರಿಂಜೆ, “1665ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಅಕ್ಕಿ, ಕಾಳುಮೆಣಸು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು” ಎಂದು ತಿಳಿಸಿದ್ದಾರೆ.

“ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ.‘ ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು” ಎಂದು ವಿವರಿಸಿದ್ದಾರೆ.

“ಪಂಪ್ ವೆಲ್ ಮಹಾವೀರ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾದರೆ ಕೋಟಿ ಚೆನ್ನಯ್ಯರ ಪ್ರತಿಮೆ ಸ್ಥಾಪನೆ ಮಾಡಬೇಕು. ಅಲ್ಲೆ ಹತ್ತಿರದಲ್ಲಿ ಕಂಕನಾಡಿ ಗರೋಡಿಯೂ ಇದೆ. ಕರಾವಳಿಗರಿಗೊಂದು ಸ್ವಾಭಿಮಾನದ ಬದುಕು ಕಲಿಸಿದ ಕೋಟಿ ಚೆನ್ನಯ್ಯರು ಪ್ರತಿಮೆ ಸ್ಥಾಪಿಸಬೇಕೆ ಹೊರತು ಮಂಗಳೂರನ್ನು ದರೋಡೆ ಮಾಡಿದ್ದ ಶಿವಾಜಿಯದ್ದಲ್ಲ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನವೀನ್‌ ಸೂರಿಂಜೆಯವರ ಬರಹವನ್ನು ಹತ್ತಾರು ಮಂದಿ ಹಂಚಿಕೊಂಡಿದ್ದಾರೆ. “ತುಳುನಾಡಿಗೆ ಮಾತ್ರವಲ್ಲ ಕನ್ನಡ ನಾಡಿಗೆ ಸಾಹಿತ್ಯ ಪರಂಪರೆಗೆ ಜೈನರ ಕೊಡುಗೆ ಮಹತ್ವದ್ದು. ಮಹಾವೀರರ ಹೆಸರು ಅಳಿಸುವುದು ಸರಿಯಲ್ಲ” ಎಂದು ಮಹಾಂತೇಶ್‌ ಕರಿಯಪ್ಪ ಎಂಬವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಲ್ಸನ್‌ ಕಿಣ್ಣಿಗೊಲಿ ಎಂಬವರು ಪ್ರತಿಕ್ರಿಯಿಸಿ, “ಇತ್ತೀಚಿಗೆ ಹೆಸರು ಬದಲಿಸುವ/ಪ್ರತಿಮೆ ಸ್ಥಾಪನೆ ನೆಪದಲ್ಲಿ ನಮ್ಮ ನೆಲದ ವಿರೋಧಿಗಳನ್ನೇ ಆರಿಸುವುದು ನೋಡಿದರೆ ಈ ಸರ್ಕಾರಕ್ಕೆ ಸ್ವಾಭಿಮಾನವೇ ಇಲ್ಲದಂತಾಗಿದೆ. ಇವರೊಂದಿಗೆ ನಮಗೂ ಸ್ವಾಭಿಮಾನ ಇಲ್ಲದಂತೆ ಮಾಡಿಬಿಟ್ಟಿದ್ದಾರಲ್ಲ” ಎಂದು ವಿವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...