Homeಕರ್ನಾಟಕಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

- Advertisement -
- Advertisement -

ಮಂಗಳೂರಿನ ಪಂಪ್‌ವೆಲ್‌ನ ಮಹಾವೀರ ಸರ್ಕಲ್‌‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಟೀಕೆಗೆ ಗುರಿಯಾಗಿದೆ.

“ಇದು ಕರಾವಳಿಗರಿಗೂ ಶಾಂತಿಯ ಪ್ರತೀಕ ಮಹಾವೀರರಿಗೂ ಮಾಡುವ ಅವಮಾನ ಅಲ್ಲವೇ? ಕರಾವಳಿಯನ್ನು ಲೂಟಿ ಮಾಡಿದವರ, ಕರಾವಳಿಯನ್ನು ಅಭಿವೃದ್ದಿಯಲ್ಲಿ ಹಿಂದೆ ತಳ್ಳಿದವರ ಪ್ರತಿಮೆಯನ್ನು ಕರಾವಳಿಯಲ್ಲಿ ಸ್ಥಾಪಿಸುವುದು ಸರಿಯೇ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ನವೀನ್ ಸೂರಿಂಜೆ, “1665ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಅಕ್ಕಿ, ಕಾಳುಮೆಣಸು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು” ಎಂದು ತಿಳಿಸಿದ್ದಾರೆ.

“ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ.‘ ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು” ಎಂದು ವಿವರಿಸಿದ್ದಾರೆ.

“ಪಂಪ್ ವೆಲ್ ಮಹಾವೀರ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾದರೆ ಕೋಟಿ ಚೆನ್ನಯ್ಯರ ಪ್ರತಿಮೆ ಸ್ಥಾಪನೆ ಮಾಡಬೇಕು. ಅಲ್ಲೆ ಹತ್ತಿರದಲ್ಲಿ ಕಂಕನಾಡಿ ಗರೋಡಿಯೂ ಇದೆ. ಕರಾವಳಿಗರಿಗೊಂದು ಸ್ವಾಭಿಮಾನದ ಬದುಕು ಕಲಿಸಿದ ಕೋಟಿ ಚೆನ್ನಯ್ಯರು ಪ್ರತಿಮೆ ಸ್ಥಾಪಿಸಬೇಕೆ ಹೊರತು ಮಂಗಳೂರನ್ನು ದರೋಡೆ ಮಾಡಿದ್ದ ಶಿವಾಜಿಯದ್ದಲ್ಲ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನವೀನ್‌ ಸೂರಿಂಜೆಯವರ ಬರಹವನ್ನು ಹತ್ತಾರು ಮಂದಿ ಹಂಚಿಕೊಂಡಿದ್ದಾರೆ. “ತುಳುನಾಡಿಗೆ ಮಾತ್ರವಲ್ಲ ಕನ್ನಡ ನಾಡಿಗೆ ಸಾಹಿತ್ಯ ಪರಂಪರೆಗೆ ಜೈನರ ಕೊಡುಗೆ ಮಹತ್ವದ್ದು. ಮಹಾವೀರರ ಹೆಸರು ಅಳಿಸುವುದು ಸರಿಯಲ್ಲ” ಎಂದು ಮಹಾಂತೇಶ್‌ ಕರಿಯಪ್ಪ ಎಂಬವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಲ್ಸನ್‌ ಕಿಣ್ಣಿಗೊಲಿ ಎಂಬವರು ಪ್ರತಿಕ್ರಿಯಿಸಿ, “ಇತ್ತೀಚಿಗೆ ಹೆಸರು ಬದಲಿಸುವ/ಪ್ರತಿಮೆ ಸ್ಥಾಪನೆ ನೆಪದಲ್ಲಿ ನಮ್ಮ ನೆಲದ ವಿರೋಧಿಗಳನ್ನೇ ಆರಿಸುವುದು ನೋಡಿದರೆ ಈ ಸರ್ಕಾರಕ್ಕೆ ಸ್ವಾಭಿಮಾನವೇ ಇಲ್ಲದಂತಾಗಿದೆ. ಇವರೊಂದಿಗೆ ನಮಗೂ ಸ್ವಾಭಿಮಾನ ಇಲ್ಲದಂತೆ ಮಾಡಿಬಿಟ್ಟಿದ್ದಾರಲ್ಲ” ಎಂದು ವಿವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...