Homeಕರ್ನಾಟಕಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

- Advertisement -
- Advertisement -

ಮಂಗಳೂರಿನ ಪಂಪ್‌ವೆಲ್‌ನ ಮಹಾವೀರ ಸರ್ಕಲ್‌‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಟೀಕೆಗೆ ಗುರಿಯಾಗಿದೆ.

“ಇದು ಕರಾವಳಿಗರಿಗೂ ಶಾಂತಿಯ ಪ್ರತೀಕ ಮಹಾವೀರರಿಗೂ ಮಾಡುವ ಅವಮಾನ ಅಲ್ಲವೇ? ಕರಾವಳಿಯನ್ನು ಲೂಟಿ ಮಾಡಿದವರ, ಕರಾವಳಿಯನ್ನು ಅಭಿವೃದ್ದಿಯಲ್ಲಿ ಹಿಂದೆ ತಳ್ಳಿದವರ ಪ್ರತಿಮೆಯನ್ನು ಕರಾವಳಿಯಲ್ಲಿ ಸ್ಥಾಪಿಸುವುದು ಸರಿಯೇ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ನವೀನ್ ಸೂರಿಂಜೆ, “1665ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಅಕ್ಕಿ, ಕಾಳುಮೆಣಸು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು” ಎಂದು ತಿಳಿಸಿದ್ದಾರೆ.

“ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ.‘ ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು” ಎಂದು ವಿವರಿಸಿದ್ದಾರೆ.

“ಪಂಪ್ ವೆಲ್ ಮಹಾವೀರ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾದರೆ ಕೋಟಿ ಚೆನ್ನಯ್ಯರ ಪ್ರತಿಮೆ ಸ್ಥಾಪನೆ ಮಾಡಬೇಕು. ಅಲ್ಲೆ ಹತ್ತಿರದಲ್ಲಿ ಕಂಕನಾಡಿ ಗರೋಡಿಯೂ ಇದೆ. ಕರಾವಳಿಗರಿಗೊಂದು ಸ್ವಾಭಿಮಾನದ ಬದುಕು ಕಲಿಸಿದ ಕೋಟಿ ಚೆನ್ನಯ್ಯರು ಪ್ರತಿಮೆ ಸ್ಥಾಪಿಸಬೇಕೆ ಹೊರತು ಮಂಗಳೂರನ್ನು ದರೋಡೆ ಮಾಡಿದ್ದ ಶಿವಾಜಿಯದ್ದಲ್ಲ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನವೀನ್‌ ಸೂರಿಂಜೆಯವರ ಬರಹವನ್ನು ಹತ್ತಾರು ಮಂದಿ ಹಂಚಿಕೊಂಡಿದ್ದಾರೆ. “ತುಳುನಾಡಿಗೆ ಮಾತ್ರವಲ್ಲ ಕನ್ನಡ ನಾಡಿಗೆ ಸಾಹಿತ್ಯ ಪರಂಪರೆಗೆ ಜೈನರ ಕೊಡುಗೆ ಮಹತ್ವದ್ದು. ಮಹಾವೀರರ ಹೆಸರು ಅಳಿಸುವುದು ಸರಿಯಲ್ಲ” ಎಂದು ಮಹಾಂತೇಶ್‌ ಕರಿಯಪ್ಪ ಎಂಬವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಲ್ಸನ್‌ ಕಿಣ್ಣಿಗೊಲಿ ಎಂಬವರು ಪ್ರತಿಕ್ರಿಯಿಸಿ, “ಇತ್ತೀಚಿಗೆ ಹೆಸರು ಬದಲಿಸುವ/ಪ್ರತಿಮೆ ಸ್ಥಾಪನೆ ನೆಪದಲ್ಲಿ ನಮ್ಮ ನೆಲದ ವಿರೋಧಿಗಳನ್ನೇ ಆರಿಸುವುದು ನೋಡಿದರೆ ಈ ಸರ್ಕಾರಕ್ಕೆ ಸ್ವಾಭಿಮಾನವೇ ಇಲ್ಲದಂತಾಗಿದೆ. ಇವರೊಂದಿಗೆ ನಮಗೂ ಸ್ವಾಭಿಮಾನ ಇಲ್ಲದಂತೆ ಮಾಡಿಬಿಟ್ಟಿದ್ದಾರಲ್ಲ” ಎಂದು ವಿವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...