Homeಕರ್ನಾಟಕಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

- Advertisement -
- Advertisement -

ಮಂಗಳೂರಿನ ಪಂಪ್‌ವೆಲ್‌ನ ಮಹಾವೀರ ಸರ್ಕಲ್‌‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಟೀಕೆಗೆ ಗುರಿಯಾಗಿದೆ.

“ಇದು ಕರಾವಳಿಗರಿಗೂ ಶಾಂತಿಯ ಪ್ರತೀಕ ಮಹಾವೀರರಿಗೂ ಮಾಡುವ ಅವಮಾನ ಅಲ್ಲವೇ? ಕರಾವಳಿಯನ್ನು ಲೂಟಿ ಮಾಡಿದವರ, ಕರಾವಳಿಯನ್ನು ಅಭಿವೃದ್ದಿಯಲ್ಲಿ ಹಿಂದೆ ತಳ್ಳಿದವರ ಪ್ರತಿಮೆಯನ್ನು ಕರಾವಳಿಯಲ್ಲಿ ಸ್ಥಾಪಿಸುವುದು ಸರಿಯೇ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ನವೀನ್ ಸೂರಿಂಜೆ, “1665ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಅಕ್ಕಿ, ಕಾಳುಮೆಣಸು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು” ಎಂದು ತಿಳಿಸಿದ್ದಾರೆ.

“ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ.‘ ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು” ಎಂದು ವಿವರಿಸಿದ್ದಾರೆ.

“ಪಂಪ್ ವೆಲ್ ಮಹಾವೀರ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾದರೆ ಕೋಟಿ ಚೆನ್ನಯ್ಯರ ಪ್ರತಿಮೆ ಸ್ಥಾಪನೆ ಮಾಡಬೇಕು. ಅಲ್ಲೆ ಹತ್ತಿರದಲ್ಲಿ ಕಂಕನಾಡಿ ಗರೋಡಿಯೂ ಇದೆ. ಕರಾವಳಿಗರಿಗೊಂದು ಸ್ವಾಭಿಮಾನದ ಬದುಕು ಕಲಿಸಿದ ಕೋಟಿ ಚೆನ್ನಯ್ಯರು ಪ್ರತಿಮೆ ಸ್ಥಾಪಿಸಬೇಕೆ ಹೊರತು ಮಂಗಳೂರನ್ನು ದರೋಡೆ ಮಾಡಿದ್ದ ಶಿವಾಜಿಯದ್ದಲ್ಲ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನವೀನ್‌ ಸೂರಿಂಜೆಯವರ ಬರಹವನ್ನು ಹತ್ತಾರು ಮಂದಿ ಹಂಚಿಕೊಂಡಿದ್ದಾರೆ. “ತುಳುನಾಡಿಗೆ ಮಾತ್ರವಲ್ಲ ಕನ್ನಡ ನಾಡಿಗೆ ಸಾಹಿತ್ಯ ಪರಂಪರೆಗೆ ಜೈನರ ಕೊಡುಗೆ ಮಹತ್ವದ್ದು. ಮಹಾವೀರರ ಹೆಸರು ಅಳಿಸುವುದು ಸರಿಯಲ್ಲ” ಎಂದು ಮಹಾಂತೇಶ್‌ ಕರಿಯಪ್ಪ ಎಂಬವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಲ್ಸನ್‌ ಕಿಣ್ಣಿಗೊಲಿ ಎಂಬವರು ಪ್ರತಿಕ್ರಿಯಿಸಿ, “ಇತ್ತೀಚಿಗೆ ಹೆಸರು ಬದಲಿಸುವ/ಪ್ರತಿಮೆ ಸ್ಥಾಪನೆ ನೆಪದಲ್ಲಿ ನಮ್ಮ ನೆಲದ ವಿರೋಧಿಗಳನ್ನೇ ಆರಿಸುವುದು ನೋಡಿದರೆ ಈ ಸರ್ಕಾರಕ್ಕೆ ಸ್ವಾಭಿಮಾನವೇ ಇಲ್ಲದಂತಾಗಿದೆ. ಇವರೊಂದಿಗೆ ನಮಗೂ ಸ್ವಾಭಿಮಾನ ಇಲ್ಲದಂತೆ ಮಾಡಿಬಿಟ್ಟಿದ್ದಾರಲ್ಲ” ಎಂದು ವಿವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...