Homeಕರ್ನಾಟಕಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

- Advertisement -
- Advertisement -

ಮಂಗಳೂರಿನ ಪಂಪ್‌ವೆಲ್‌ನ ಮಹಾವೀರ ಸರ್ಕಲ್‌‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಟೀಕೆಗೆ ಗುರಿಯಾಗಿದೆ.

“ಇದು ಕರಾವಳಿಗರಿಗೂ ಶಾಂತಿಯ ಪ್ರತೀಕ ಮಹಾವೀರರಿಗೂ ಮಾಡುವ ಅವಮಾನ ಅಲ್ಲವೇ? ಕರಾವಳಿಯನ್ನು ಲೂಟಿ ಮಾಡಿದವರ, ಕರಾವಳಿಯನ್ನು ಅಭಿವೃದ್ದಿಯಲ್ಲಿ ಹಿಂದೆ ತಳ್ಳಿದವರ ಪ್ರತಿಮೆಯನ್ನು ಕರಾವಳಿಯಲ್ಲಿ ಸ್ಥಾಪಿಸುವುದು ಸರಿಯೇ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ನವೀನ್ ಸೂರಿಂಜೆ, “1665ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಅಕ್ಕಿ, ಕಾಳುಮೆಣಸು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು” ಎಂದು ತಿಳಿಸಿದ್ದಾರೆ.

“ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ.‘ ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು” ಎಂದು ವಿವರಿಸಿದ್ದಾರೆ.

“ಪಂಪ್ ವೆಲ್ ಮಹಾವೀರ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾದರೆ ಕೋಟಿ ಚೆನ್ನಯ್ಯರ ಪ್ರತಿಮೆ ಸ್ಥಾಪನೆ ಮಾಡಬೇಕು. ಅಲ್ಲೆ ಹತ್ತಿರದಲ್ಲಿ ಕಂಕನಾಡಿ ಗರೋಡಿಯೂ ಇದೆ. ಕರಾವಳಿಗರಿಗೊಂದು ಸ್ವಾಭಿಮಾನದ ಬದುಕು ಕಲಿಸಿದ ಕೋಟಿ ಚೆನ್ನಯ್ಯರು ಪ್ರತಿಮೆ ಸ್ಥಾಪಿಸಬೇಕೆ ಹೊರತು ಮಂಗಳೂರನ್ನು ದರೋಡೆ ಮಾಡಿದ್ದ ಶಿವಾಜಿಯದ್ದಲ್ಲ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನವೀನ್‌ ಸೂರಿಂಜೆಯವರ ಬರಹವನ್ನು ಹತ್ತಾರು ಮಂದಿ ಹಂಚಿಕೊಂಡಿದ್ದಾರೆ. “ತುಳುನಾಡಿಗೆ ಮಾತ್ರವಲ್ಲ ಕನ್ನಡ ನಾಡಿಗೆ ಸಾಹಿತ್ಯ ಪರಂಪರೆಗೆ ಜೈನರ ಕೊಡುಗೆ ಮಹತ್ವದ್ದು. ಮಹಾವೀರರ ಹೆಸರು ಅಳಿಸುವುದು ಸರಿಯಲ್ಲ” ಎಂದು ಮಹಾಂತೇಶ್‌ ಕರಿಯಪ್ಪ ಎಂಬವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಲ್ಸನ್‌ ಕಿಣ್ಣಿಗೊಲಿ ಎಂಬವರು ಪ್ರತಿಕ್ರಿಯಿಸಿ, “ಇತ್ತೀಚಿಗೆ ಹೆಸರು ಬದಲಿಸುವ/ಪ್ರತಿಮೆ ಸ್ಥಾಪನೆ ನೆಪದಲ್ಲಿ ನಮ್ಮ ನೆಲದ ವಿರೋಧಿಗಳನ್ನೇ ಆರಿಸುವುದು ನೋಡಿದರೆ ಈ ಸರ್ಕಾರಕ್ಕೆ ಸ್ವಾಭಿಮಾನವೇ ಇಲ್ಲದಂತಾಗಿದೆ. ಇವರೊಂದಿಗೆ ನಮಗೂ ಸ್ವಾಭಿಮಾನ ಇಲ್ಲದಂತೆ ಮಾಡಿಬಿಟ್ಟಿದ್ದಾರಲ್ಲ” ಎಂದು ವಿವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...