Homeಕರ್ನಾಟಕಶಿವಕುಮಾರ ಸ್ವಾಮಿ ಪ್ರತಿಮೆ ವಿರೂಪ ಪ್ರಕರಣ; 'ಯೇಸು ಕ್ರಿಸ್ತ ಕನಸಲ್ಲಿ ಹೇಳಿದ್ದಕ್ಕೆ ದಾಳಿ' ಎಂದ ಕಿಡಿಗೇಡಿ

ಶಿವಕುಮಾರ ಸ್ವಾಮಿ ಪ್ರತಿಮೆ ವಿರೂಪ ಪ್ರಕರಣ; ‘ಯೇಸು ಕ್ರಿಸ್ತ ಕನಸಲ್ಲಿ ಹೇಳಿದ್ದಕ್ಕೆ ದಾಳಿ’ ಎಂದ ಕಿಡಿಗೇಡಿ

- Advertisement -
- Advertisement -

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಪ್ರತಿಮೆಯನ್ನು ನವೆಂಬರ್ 30 ರಂದು ಬೆಂಗಳೂರಿನಲ್ಲಿ ವಿರೂಪಗೊಳಿಸಲಾಗಿತ್ತು. 37 ವರ್ಷದ ಆರೋಪಿ, ಡೆಲಿವರಿ ಎಕ್ಸಿಕ್ಯೂಟಿವ್ ಶ್ರೀಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಕೃತ್ಯಕ್ಕೆ ಆತ ನೀಡಿದ ಸಮರ್ಥನೆಯು ಪೊಲೀಸರು ಮತ್ತು ಜನರಿಗೆ ಆಘಾತ ಮೂಡಿಸಿದೆ.

ಆಂಧ್ರಪ್ರದೇಶ ಮೂಲದ ಶ್ರೀಕೃಷ್ಣ ಎಂಬಾತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ತನ್ನ ಕನಸಿನಲ್ಲಿ ಯೇಸುಕ್ರಿಸ್ತನ ಬಂದು ಪ್ರತಿಮೆಯನ್ನು ಧ್ವಂಸಗೊಳಿಸಲು ಪ್ರೇರೇಪಿಸಿರುವುದಾಗಿ ಹೇಳಿದ್ದಾನೆ.

ಬೆಂಗಳೂರಿನ ವೀರಭದ್ರ ನಗರದಲ್ಲಿ ಬೆಳಗಿನ ಜಾವ 1:30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಶ್ರೀಕೃಷ್ಣ ಪ್ರತಿಮೆಯ ಬಳಿಗೆ ಬಂದು ದೃಶ್ಯದಿಂದ ಹೊರಡುವ ಮೊದಲು ಅದನ್ನು ಭಾಗಶಃ ವಿರೂಪಗೊಳಿಸಿದ್ದಾನೆ. ಬೆಳಿಗ್ಗೆ, ಸ್ಥಳೀಯ ನಿವಾಸಿಗಳು ವಿರೂಪಗೊಂಡಿರುವುದನ್ನು ನೋಡಿ ಆಘಾತಗೊಂಡಿದ್ದಾರೆ.

ಈ ಕೃತ್ಯವು ಸ್ಥಳೀಯರನ್ನು ಪ್ರತಿಭಟನೆ ನಡೆಸಲು ಕಾರಣವಾಯಿತು. ನಿವಾಸಿಗಳು ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಶ್ರೀಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೃತ್ಯ ಖಂಡಿಸಿದ ಡಾ.ಪೀಟರ್ ಮಚಾಡೊ

ಬೆಂಗಳೂರಿನ ಆರ್ಚ್‌ಬಿಷಪ್ ಡಾ.ಪೀಟರ್ ಮಚಾಡೊ ಅವರು ಆರೋಪಿಯ ಸಮರ್ಥನೆಯನ್ನು “ಆಧಾರರಹಿತ ಮತ್ತು ಖಂಡನೀಯ” ಎಂದು ಖಂಡಿಸಿದರು. ಕೋಮು ಪ್ರಚೋದನೆಯ ಪ್ರಯತ್ನಗಳಿಗೆ ಬಲಿಯಾಗದಂತೆ ಜನರನ್ನು ಒತ್ತಾಯಿಸಿದರು.

“ಇಂತಹ ಹೇಳಿಕೆಗಳ ಉದ್ದೇಶ ಕೇವಲ ಕೋಮು ಉದ್ವಿಗ್ನತೆ ಮತ್ತು ವೈಷಮ್ಯವನ್ನು ಹರಡುವುದು. ಶಾಂತಿ, ಸಹಾನುಭೂತಿ ಮತ್ತು ಜಾತ್ಯತೀತ ಮೌಲ್ಯಗಳ ಪ್ರತೀಕವಾಗಿದ್ದ ಶಿವಕುಮಾರ ಸ್ವಾಮೀಜಿಯಂತಹ ಮಹಾನ್ ಸಂತರಿಗೆ ಈ ಅಗೌರವ ಸ್ವೀಕಾರಾರ್ಹವಲ್ಲ” ಎಂದು ಆರ್ಚ್ ಬಿಷಪ್ ಹೇಳಿದರು.

ಅಪರಾಧದಲ್ಲಿ ಶ್ರೀಕೃಷ್ಣನ ಮಾನಸಿಕ ಆರೋಗ್ಯದ ಪಾತ್ರವಿದೆಯೇ ಎಂದು ಪೊಲೀಸರು ಈಗ ಪರಿಶೀಲಿಸುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ತುಮಕೂರಿನ ಸಿದ್ದಗಂಗಾ ಮಠದ ಮುಖ್ಯಸ್ಥರಾಗಿದ್ದ ಶಿವಕುಮಾರ್ ಸ್ವಾಮಿಯವರು, ತಮ್ಮ ಲೋಕೋಪಕಾರಿ ಕೆಲಸಕ್ಕೆ ಹೆಸರುವಾಸಿಯಾಗಿದ್ದರು. ವಿಶೇಷವಾಗಿ, ಹಿಂದುಳಿದವರಿಗೆ ವಸತಿ ಮತ್ತು ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಿದ್ದರು. ಅವರು 2019 ರಲ್ಲಿ ತಮ್ಮ 111 ನೇ ವಯಸ್ಸಿನಲ್ಲಿ ನಿಧನರಾದರು.

ಇದನ್ನೂ ಓದಿ; ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ‘ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...