Homeಕರ್ನಾಟಕಶಿವಕುಮಾರ ಸ್ವಾಮಿ ಪ್ರತಿಮೆ ವಿರೂಪ ಪ್ರಕರಣ; 'ಯೇಸು ಕ್ರಿಸ್ತ ಕನಸಲ್ಲಿ ಹೇಳಿದ್ದಕ್ಕೆ ದಾಳಿ' ಎಂದ ಕಿಡಿಗೇಡಿ

ಶಿವಕುಮಾರ ಸ್ವಾಮಿ ಪ್ರತಿಮೆ ವಿರೂಪ ಪ್ರಕರಣ; ‘ಯೇಸು ಕ್ರಿಸ್ತ ಕನಸಲ್ಲಿ ಹೇಳಿದ್ದಕ್ಕೆ ದಾಳಿ’ ಎಂದ ಕಿಡಿಗೇಡಿ

- Advertisement -
- Advertisement -

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಪ್ರತಿಮೆಯನ್ನು ನವೆಂಬರ್ 30 ರಂದು ಬೆಂಗಳೂರಿನಲ್ಲಿ ವಿರೂಪಗೊಳಿಸಲಾಗಿತ್ತು. 37 ವರ್ಷದ ಆರೋಪಿ, ಡೆಲಿವರಿ ಎಕ್ಸಿಕ್ಯೂಟಿವ್ ಶ್ರೀಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಕೃತ್ಯಕ್ಕೆ ಆತ ನೀಡಿದ ಸಮರ್ಥನೆಯು ಪೊಲೀಸರು ಮತ್ತು ಜನರಿಗೆ ಆಘಾತ ಮೂಡಿಸಿದೆ.

ಆಂಧ್ರಪ್ರದೇಶ ಮೂಲದ ಶ್ರೀಕೃಷ್ಣ ಎಂಬಾತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ತನ್ನ ಕನಸಿನಲ್ಲಿ ಯೇಸುಕ್ರಿಸ್ತನ ಬಂದು ಪ್ರತಿಮೆಯನ್ನು ಧ್ವಂಸಗೊಳಿಸಲು ಪ್ರೇರೇಪಿಸಿರುವುದಾಗಿ ಹೇಳಿದ್ದಾನೆ.

ಬೆಂಗಳೂರಿನ ವೀರಭದ್ರ ನಗರದಲ್ಲಿ ಬೆಳಗಿನ ಜಾವ 1:30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಶ್ರೀಕೃಷ್ಣ ಪ್ರತಿಮೆಯ ಬಳಿಗೆ ಬಂದು ದೃಶ್ಯದಿಂದ ಹೊರಡುವ ಮೊದಲು ಅದನ್ನು ಭಾಗಶಃ ವಿರೂಪಗೊಳಿಸಿದ್ದಾನೆ. ಬೆಳಿಗ್ಗೆ, ಸ್ಥಳೀಯ ನಿವಾಸಿಗಳು ವಿರೂಪಗೊಂಡಿರುವುದನ್ನು ನೋಡಿ ಆಘಾತಗೊಂಡಿದ್ದಾರೆ.

ಈ ಕೃತ್ಯವು ಸ್ಥಳೀಯರನ್ನು ಪ್ರತಿಭಟನೆ ನಡೆಸಲು ಕಾರಣವಾಯಿತು. ನಿವಾಸಿಗಳು ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಶ್ರೀಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೃತ್ಯ ಖಂಡಿಸಿದ ಡಾ.ಪೀಟರ್ ಮಚಾಡೊ

ಬೆಂಗಳೂರಿನ ಆರ್ಚ್‌ಬಿಷಪ್ ಡಾ.ಪೀಟರ್ ಮಚಾಡೊ ಅವರು ಆರೋಪಿಯ ಸಮರ್ಥನೆಯನ್ನು “ಆಧಾರರಹಿತ ಮತ್ತು ಖಂಡನೀಯ” ಎಂದು ಖಂಡಿಸಿದರು. ಕೋಮು ಪ್ರಚೋದನೆಯ ಪ್ರಯತ್ನಗಳಿಗೆ ಬಲಿಯಾಗದಂತೆ ಜನರನ್ನು ಒತ್ತಾಯಿಸಿದರು.

“ಇಂತಹ ಹೇಳಿಕೆಗಳ ಉದ್ದೇಶ ಕೇವಲ ಕೋಮು ಉದ್ವಿಗ್ನತೆ ಮತ್ತು ವೈಷಮ್ಯವನ್ನು ಹರಡುವುದು. ಶಾಂತಿ, ಸಹಾನುಭೂತಿ ಮತ್ತು ಜಾತ್ಯತೀತ ಮೌಲ್ಯಗಳ ಪ್ರತೀಕವಾಗಿದ್ದ ಶಿವಕುಮಾರ ಸ್ವಾಮೀಜಿಯಂತಹ ಮಹಾನ್ ಸಂತರಿಗೆ ಈ ಅಗೌರವ ಸ್ವೀಕಾರಾರ್ಹವಲ್ಲ” ಎಂದು ಆರ್ಚ್ ಬಿಷಪ್ ಹೇಳಿದರು.

ಅಪರಾಧದಲ್ಲಿ ಶ್ರೀಕೃಷ್ಣನ ಮಾನಸಿಕ ಆರೋಗ್ಯದ ಪಾತ್ರವಿದೆಯೇ ಎಂದು ಪೊಲೀಸರು ಈಗ ಪರಿಶೀಲಿಸುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ತುಮಕೂರಿನ ಸಿದ್ದಗಂಗಾ ಮಠದ ಮುಖ್ಯಸ್ಥರಾಗಿದ್ದ ಶಿವಕುಮಾರ್ ಸ್ವಾಮಿಯವರು, ತಮ್ಮ ಲೋಕೋಪಕಾರಿ ಕೆಲಸಕ್ಕೆ ಹೆಸರುವಾಸಿಯಾಗಿದ್ದರು. ವಿಶೇಷವಾಗಿ, ಹಿಂದುಳಿದವರಿಗೆ ವಸತಿ ಮತ್ತು ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಿದ್ದರು. ಅವರು 2019 ರಲ್ಲಿ ತಮ್ಮ 111 ನೇ ವಯಸ್ಸಿನಲ್ಲಿ ನಿಧನರಾದರು.

ಇದನ್ನೂ ಓದಿ; ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ‘ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...