Homeಕರ್ನಾಟಕಶಿವಕುಮಾರ ಸ್ವಾಮಿ ಪ್ರತಿಮೆ ವಿರೂಪ ಪ್ರಕರಣ; 'ಯೇಸು ಕ್ರಿಸ್ತ ಕನಸಲ್ಲಿ ಹೇಳಿದ್ದಕ್ಕೆ ದಾಳಿ' ಎಂದ ಕಿಡಿಗೇಡಿ

ಶಿವಕುಮಾರ ಸ್ವಾಮಿ ಪ್ರತಿಮೆ ವಿರೂಪ ಪ್ರಕರಣ; ‘ಯೇಸು ಕ್ರಿಸ್ತ ಕನಸಲ್ಲಿ ಹೇಳಿದ್ದಕ್ಕೆ ದಾಳಿ’ ಎಂದ ಕಿಡಿಗೇಡಿ

- Advertisement -
- Advertisement -

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಪ್ರತಿಮೆಯನ್ನು ನವೆಂಬರ್ 30 ರಂದು ಬೆಂಗಳೂರಿನಲ್ಲಿ ವಿರೂಪಗೊಳಿಸಲಾಗಿತ್ತು. 37 ವರ್ಷದ ಆರೋಪಿ, ಡೆಲಿವರಿ ಎಕ್ಸಿಕ್ಯೂಟಿವ್ ಶ್ರೀಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಕೃತ್ಯಕ್ಕೆ ಆತ ನೀಡಿದ ಸಮರ್ಥನೆಯು ಪೊಲೀಸರು ಮತ್ತು ಜನರಿಗೆ ಆಘಾತ ಮೂಡಿಸಿದೆ.

ಆಂಧ್ರಪ್ರದೇಶ ಮೂಲದ ಶ್ರೀಕೃಷ್ಣ ಎಂಬಾತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ತನ್ನ ಕನಸಿನಲ್ಲಿ ಯೇಸುಕ್ರಿಸ್ತನ ಬಂದು ಪ್ರತಿಮೆಯನ್ನು ಧ್ವಂಸಗೊಳಿಸಲು ಪ್ರೇರೇಪಿಸಿರುವುದಾಗಿ ಹೇಳಿದ್ದಾನೆ.

ಬೆಂಗಳೂರಿನ ವೀರಭದ್ರ ನಗರದಲ್ಲಿ ಬೆಳಗಿನ ಜಾವ 1:30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಶ್ರೀಕೃಷ್ಣ ಪ್ರತಿಮೆಯ ಬಳಿಗೆ ಬಂದು ದೃಶ್ಯದಿಂದ ಹೊರಡುವ ಮೊದಲು ಅದನ್ನು ಭಾಗಶಃ ವಿರೂಪಗೊಳಿಸಿದ್ದಾನೆ. ಬೆಳಿಗ್ಗೆ, ಸ್ಥಳೀಯ ನಿವಾಸಿಗಳು ವಿರೂಪಗೊಂಡಿರುವುದನ್ನು ನೋಡಿ ಆಘಾತಗೊಂಡಿದ್ದಾರೆ.

ಈ ಕೃತ್ಯವು ಸ್ಥಳೀಯರನ್ನು ಪ್ರತಿಭಟನೆ ನಡೆಸಲು ಕಾರಣವಾಯಿತು. ನಿವಾಸಿಗಳು ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಶ್ರೀಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೃತ್ಯ ಖಂಡಿಸಿದ ಡಾ.ಪೀಟರ್ ಮಚಾಡೊ

ಬೆಂಗಳೂರಿನ ಆರ್ಚ್‌ಬಿಷಪ್ ಡಾ.ಪೀಟರ್ ಮಚಾಡೊ ಅವರು ಆರೋಪಿಯ ಸಮರ್ಥನೆಯನ್ನು “ಆಧಾರರಹಿತ ಮತ್ತು ಖಂಡನೀಯ” ಎಂದು ಖಂಡಿಸಿದರು. ಕೋಮು ಪ್ರಚೋದನೆಯ ಪ್ರಯತ್ನಗಳಿಗೆ ಬಲಿಯಾಗದಂತೆ ಜನರನ್ನು ಒತ್ತಾಯಿಸಿದರು.

“ಇಂತಹ ಹೇಳಿಕೆಗಳ ಉದ್ದೇಶ ಕೇವಲ ಕೋಮು ಉದ್ವಿಗ್ನತೆ ಮತ್ತು ವೈಷಮ್ಯವನ್ನು ಹರಡುವುದು. ಶಾಂತಿ, ಸಹಾನುಭೂತಿ ಮತ್ತು ಜಾತ್ಯತೀತ ಮೌಲ್ಯಗಳ ಪ್ರತೀಕವಾಗಿದ್ದ ಶಿವಕುಮಾರ ಸ್ವಾಮೀಜಿಯಂತಹ ಮಹಾನ್ ಸಂತರಿಗೆ ಈ ಅಗೌರವ ಸ್ವೀಕಾರಾರ್ಹವಲ್ಲ” ಎಂದು ಆರ್ಚ್ ಬಿಷಪ್ ಹೇಳಿದರು.

ಅಪರಾಧದಲ್ಲಿ ಶ್ರೀಕೃಷ್ಣನ ಮಾನಸಿಕ ಆರೋಗ್ಯದ ಪಾತ್ರವಿದೆಯೇ ಎಂದು ಪೊಲೀಸರು ಈಗ ಪರಿಶೀಲಿಸುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ತುಮಕೂರಿನ ಸಿದ್ದಗಂಗಾ ಮಠದ ಮುಖ್ಯಸ್ಥರಾಗಿದ್ದ ಶಿವಕುಮಾರ್ ಸ್ವಾಮಿಯವರು, ತಮ್ಮ ಲೋಕೋಪಕಾರಿ ಕೆಲಸಕ್ಕೆ ಹೆಸರುವಾಸಿಯಾಗಿದ್ದರು. ವಿಶೇಷವಾಗಿ, ಹಿಂದುಳಿದವರಿಗೆ ವಸತಿ ಮತ್ತು ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಿದ್ದರು. ಅವರು 2019 ರಲ್ಲಿ ತಮ್ಮ 111 ನೇ ವಯಸ್ಸಿನಲ್ಲಿ ನಿಧನರಾದರು.

ಇದನ್ನೂ ಓದಿ; ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ‘ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...