Homeಅಂಕಣಗಳುಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

- Advertisement -
- Advertisement -

ಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ ಮುಖ್ಯಮಂತ್ರಿ ಪಟ್ಟಸಿಕ್ಕಿತು. ಒಂದು ವೇಳೆ ಅವರು ಹೈಕಮಾಂಡ್ ಮೆಚ್ಚುವಂತಹ ಆಡಳಿತ ನೀಡಿದ್ದರೆ ಈ ಜನ್ಮದಲ್ಲಿ ನಾನು ಮುಖ್ಯಮಂತ್ರಿಯಾಗುವಂತಿರಲಿಲ್ಲ. ಈ ಜನ್ಮದಲ್ಲಿ ತೀರಿಸಲಾಗದಂತಹ ಉಪಕಾರ ಮಾಡಿರುವ ಎಡೂರಪ್ಪನವರಿಗೆ ತಕ್ಕ ಉಪಕಾರ ಎಂದರೆ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡುವುದು. ಎಡೂರಪ್ಪನವರ ಇನ್ನೊಂದು ಸಾಧನೆಯೂ ಇಲ್ಲಿ ಪರಿಗಣಿತವಾಗುತ್ತದೆ. ಎಂತಹವರನ್ನೇ ಆಗಲಿ ಮುಖ್ಯಮಂತ್ರಿ ಮಾಡುವುದರಲ್ಲಿ ಅವರು ಎತ್ತಿದ ಕೈ. ಅವರು ಮನಸ್ಸು ಮಾಡಿದ್ದರಿಂದಲೇ ಕುಮಾರಸ್ವಾಮಿ ಮುಖ್ಯಮಂತ್ರಿಯಾದದ್ದು, ಅವರಿಂದಲೇ ಅಲ್ಲವೆ ಸದಾನಂದಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಮತ್ತೆ ನನ್ನಂಥವನು ಮುಖ್ಯಮಂತ್ರಿಯಾಗಿ ಹೆಲಿಕಾಪ್ಟರಿನಲ್ಲಿ ಹಾರಾಡುವಂತಾದದ್ದು. ಅದಕ್ಕೆ ವಿಮಾನ ನಿಲ್ದಾಣಕ್ಕೆ ಎಡೂರಪ್ಪನ ಹೆಸರಿಟ್ಟದ್ದದು ಎಂದರಂತಲ್ಲಾ, ಥೂತ್ತೇರಿ.

******

ವಿಮಾನ ನಿಲ್ದಾಣಕ್ಕೆ ಎಡೂರಪ್ಪನ ಹೆಸರಿಡಲು ಮುಖ್ಯ ಕಾರಣ ಕೊಡುವ ಅವರ ಭಕ್ತರ ಪ್ರಕಾರ, “ನೋಡಿ ಸಾರ್ ಎಡೂರಪ್ಪ ಬೂಕನಕೆರೆಯಿಂದ ಬರಿಗೈಲಿ ಶಿಕಾರಿಪುರಕ್ಕೆ ಬಂದು ಶಿಕಾರಿ ಶುರುಮಾಡಿಕೊಂಡ್ರು; ಶಿಕಾರಿಪುರದ ಮುನಿಸಿಪಾಲಿಟಿಯಿಂದ ವಿಧಾನಸೌಧಕ್ಕೆ ಹೋದ್ರು. ವಿರೋಧಪಕ್ಷದ ನಾಯಕರಾದ್ರು; ಒಂದಲ್ಲ ಅಂತ ಮೂರುಸಲ ಮುಖ್ಯಮಂತ್ರಿಯಾದ್ರು. ಬೇಕಾದಷ್ಟು ಹಣ ಆಸ್ತಿ ಮಾಡಬಹುದಿತ್ತು ಮಾಡಲಿಲ್ಲ. ಕಾಲೇಜು, ಕಾಲೇಜಿಗೆ ಹಾಸ್ಟಲು, ಸ್ಟಾರ್ ಹೋಟ್ಲು ಕಟ್ಟಬಹುದಿತ್ತು, ಕಟ್ಟಲಿಲ್ಲ. ಯಾವನೋ ಚೆಕ್ ಮುಖಾಂತರ ಲಂಚಕೊಡಕ್ಕೆ ಬಂದ, ತಗಳ್ಳಿಲ್ಲ. ಪರಿಣಾಮ ಇವುರೇ ಜೈಲಿಗೋಗುವ ಸ್ಥಿತಿ ಬಂತು, ಹೆದರಲಿಲ್ಲ. ಹೋಗಿ ಬಂದ್ರು. ನಮ್ಮ ಶೋಭಕ್ಕನ್ನ ಬೆಳೆಸಿದ್ರು, ಕೈ ಬಿಡಲಿಲ್ಲ. ಇವತ್ತು ಯಾವುದೇ ನಾಯಕನಿಗೆ ನಮ್ಮ ಎಡೂರಪ್ಪನೋರ ಹೋಲಸಂಗೇಯಿಲ್ಲ. ಅದ್ಕೆ ವಿಮಾನ ನಿಲ್ದಾಣಕ್ಕೆ ಅವರೆಸರೇ ಸೂಕ್ತ ಸಾರು” ಅಂದನಲ್ಲ, ಥೂತ್ತೇರಿ.

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಖಾಲಿ ವಿಮಾನ!
PC: ISTOCK

******

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ ಎಂಬ ಚರ್ಚೆ ನಡೆದಿರುವ ಸಮಯದಲ್ಲಿ, ಹಲವಾರು ದಿಕ್ಕಿನಿಂದ ಸಲಹೆ ಸೂಚನೆ ಬರತೊಡಗಿವೆಯೆಲ್ಲಾ. ಸಾಹಿತಿಗಳ ದಿಕ್ಕಿನಿಂದ “ನೋಡಿ ಸಾರ್ ನಮ್ಮ ಕುವೆಂಪು ಕಾವ್ಯ ಬರೀಬೇಕಾದ್ರೆ ಲೌಖಿಕ ಜೀವನದಿಂದ ಶುರುಮಾಡಿ ಪಾರಮಾರ್ಥಿಕಕ್ಕೆ ಹೋಗತಿದ್ರು. ಉದಾಹರಣೆಗೆ: ’ನಾನಿನಗೆ ನೀನನಗೆ ಜೇನಾಗುವ, ರಸದೇವಗಂಗೆಯಲ್ಲಿ ಮೀನಾಗುವ’ ಅಂತ ಎರಡನೇ ಜಿಗಿತಕ್ಕೆ ಆಕಾಶಕ್ಕೆ ಹಾರತಿದ್ರು, ಜೊತೆಗೆ ಎತ್ತರದ ಕನಸು ಕಾಣತಿದ್ರು, ಅವರು ಯಾವಾಗಲೂ ಊರ್ದ್ವಮುಖಿ. ’ನಾನೇರುವೆತ್ತರಕೆ ನೀನೇರಬಲ್ಲೆಯ’ ಅಂತಿದ್ರು. ’ಮನುಜಮತ ವಿಶ್ವಪಥ’ ಅಂತಿದ್ರು” ಅನ್ನುವ ವಾದ ಬಂತಂತೆಲ್ಲಾ. ಅವುರೆಸರು ಸೂಕ್ತ ಅನ್ನುವುದಾದರೆ ಅಳಿದುಳಿದ ರಾಜಕಾರಣಿಗಳ ಪ್ರಕಾರ, ಈ ದೇಶಕಂಡ ಅಪ್ರತಿಮ ರಾಜಕಾರಣಿ
ಗೋಪಾಲಗೌಡ ಹೆಸರಿಡಲು ಕೊಡುವ ಕಾರಣವೆಂದರೆ: “ಗೋಪಾಲಗೌಡ ಗುಡಿಸಲಿಂದ ಬಂದವರು. ಮೂರುಬಾರಿ ಶಾಸಕರಾದರೂ ಮನೆ ಇರಲಿಲ್ಲ, ಸೈಟ್ ಇರಲಿಲ್ಲ. ಬ್ಯಾಂಕ್‌ನ ಅಕೌಂಟೇ ಇರಲಿಲ್ಲ. ಇದ್ದ ಎರಡು ಮೂರು ಜುಬ್ಬ ಅಜೀಜ್ ಸೇಠ್ ಹೊಲಿಸಿಕೊಟ್ಟಿದ್ದು. ಇಂತಹ ವ್ಯಕ್ತಿಯ ನೆನಪನ್ನು ಹಸಿರಾಗಿಡಬೇಕಾದರೆ ಅಕಾಶದಲ್ಲಿ ಹಾರಾಡುವ ವಿಮಾನ ನಿಲ್ದಾಣಕ್ಕೆ ಅವರ ಹೆಸರು ಇಡಬೇಕೆಂದರಲ್ಲಾ”, ಥೂತ್ತೇರಿ.

*****

ಅಜೀಜ್ ಸೇಠ್ ಎಂದಕೂಡಲೇ ನೆನಪಾಯ್ತು. ಗೋಪಾಲಗೌಡರ ಹರಿದ ಜುಬ್ಬ ನೋಡಿ ಮನಕರಗಿದ ಸೇಠ್ ಜುಬ್ಬ ಹೊಲಿಸಿಕೊಟ್ಟಂತೆ, ನಮ್ಮ ನಡುವಿನ ಸಾಬರು ಹಳ್ಳಿಗಾಡಿನ ರೈತನ ಪಾಡಿನಲ್ಲಿ ಅನಾದಿಕಾಲದಿಂದ ಭಾಗಿಯಾಗುತ್ತ ಬಂದಿರುವುದು ಸಂಘಿಗಳ ಗಮನಕ್ಕೆ ಬಂದಿಲ್ಲವಂತಲ್ಲಾ. ಈಗ ಸಾಬರ ಬಳಿ ಮಾವಿನ ಹಣ್ಣು ಕೊಳ್ಳಬೇಡಿ ಎಂದು ಫತ್ವಾ ಹೊರಡಿಸಿರುವುದರ ಪರಿಣಾಮ ಮಾವಿನ ಹಣ್ಣಿನ ಕಂಟ್ರಾಕ್ಟಿಗೆ ಸಾಬರು ಬರುತ್ತಿಲ್ಲವಲ್ಲಾ. ಈ ಪುರೋಹಿತಶಾಹಿಗಳ ತಲೆಯಿಂದ ಮಂತ್ರಗಳು ಮಾಯವಾಗಿ ಮುಸ್ಲಿಂ ದ್ವೇಷ ತುಂಬಿಕೊಂಡ ಫಲವಾಗಿ ರೈತ ಬೆಳೆದ ಮಾವಿನಹಣ್ಣು, ವಾಣಿಜ್ಯ ಬೆಳೆಗಳಾದ ಹೊಂಗೆಬೀಜ, ಇಪ್ಪೆ ಅಳ್ಳು, ಬೇವಿನಬೀಜ, ಹಲಸಿನಹಣ್ಣು ಕೊಳ್ಳುವವರಿಲ್ಲವಾಗಿದೆಯಂತಲ್ಲಾ. ಇದಿನ್ನೂ ದೊಡ್ಡದಾಗಿ ಬೆಳೆದು, ಸದ್ಯದಲ್ಲೇ ದೇಶ ದಿವಾಳಿ ಎದ್ದು ಶ್ರೀಲಂಕಾದಂತಾಗುವ ಎಲ್ಲಾ ಸೂಚನೆಗಳು ಕಾಣುತ್ತಿವೆಯಲ್ಲಾ. ಅದಕ್ಕಿಂತ ಮುಖ್ಯ ಎತ್ತಿಗೆ ಲಾಳ ಕಟ್ಟುತ್ತಿದ್ದ ಸಾಬರು ಹಳ್ಳಿಕಡೆ ಬಾರದೆಯಿರುವುದರಿಂದ ಎತ್ತುಗಳ ಗೊರಸು ಸವೆದು ಕುಂಟತೊಡಗಿವೆ. ಇದೀಗ ರೈತರು ಎಚ್ಚೆತ್ತು “ಬಾರೊ ನಮ್ಮ ಎತ್ತಿಗೆ ಲಾಳ ಕಟ್ಟು” ಅಂದರೆ ಸಂಘಿಗಳ ಕತೆಯೇನೆಂದು ಉದ್ಘಾರ ತೆಗೆದರಲ್ಲಾ, ಥೂತ್ತೇರಿ.

*******

ಈ ಬಿಜೆಪಿಗಳು ಆಡಳಿತ ನಡೆಸಲು ಅಳವಡಿಸಿಕೊಂಡಿರುವುದು ಗೋಳವಲಕರನ ಅರ್ಥ ವ್ಯವಸ್ಥೆಯಂತಲ್ಲಾ. ಆತನ ಅರ್ಥಶಾಸ್ತ್ರದ ಪ್ರಕಾರ ನಾವು ಸುಖವಾಗಿ ಭೋಜನ ಬಾರಿಸುತ್ತ ಗರ್ಭಗುಡಿಯಲ್ಲಿರಬೇಕಾದರೆ ಈ ದೇಶದಲ್ಲಿ ಬಡವರಿರಬೇಕು ಅವರು ಆಸ್ತಿವಂತರಾಗಬಾರದು, ಅಕಸ್ಮಾತ್ ಆದರೆ ನಮ್ಮ ಮಾತನ್ನ ಕೇಳುವುದಿಲ್ಲ; ನಾವೇಳಿದ ಕೆಲಸ ಮಾಡುವುದಿಲ್ಲ; ಆದ್ದರಿಂದ ಅವರು ಆಸ್ತಿವಂತರಾಗದಂತೆ ನೋಡಿಕೊಳ್ಳಬೇಕು; ಅದರಲ್ಲೂ ಮುಸ್ಲಿಮರು ಆರ್ಥಿಕವಾಗಿ ಮುಂದೆ ಬರಲೇಬಾರದು ಎಂದಿದೆಯಂತಲ್ಲಾ. ಅದರ ಫಲವಾಗಿ ಚರ್ಮೋದ್ಯಮ ನಾಶವಾಯ್ತು. ಹಳ್ಳಿಗಳ ಕಡೆ ಹಬ್ಬವಾದರೆ ಚರ್ಮ ಕೊಳ್ಳಲು ಸಾಬರು ಬರುತ್ತಿದ್ದರು. ಈಗ ಗುಂಡಿ ತೆಗೆದು ಚರ್ಮವನ್ನೂ ಹೂಳುತ್ತಿದ್ದಾರೆ. ಇಲ್ಲಿಂದ ಶುರುವಾದ ಮುಸ್ಲಿಮರ ಆರ್ಥಿಕ ಅವನತಿ, ರೈತರ ಕಡೆಗೂ ತಿರುಗಿ ಸದ್ಯದಲ್ಲೇ ರೈತರ ಪತನವಾಗಿ ಅವರೆಲ್ಲಾ ಇನ್ನೂ ಬಡವರಾಗುವುದರಲ್ಲಿ ಯಾವ ಸಂಶಯವೂ ಇಲ್ಲವಂತಲ್ಲಾ, ಥೂಥೂ ಥೂತ್ತೇರಿ.


ಇದನ್ನೂ ಓದಿ: ಈಶ್ವರಪ್ಪ ಪರಸೆಂಟೇಜಲ್ಲಿ ಜಗದ್ಗುರುಗಳ ಪಾಲಿತ್ತಂತಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...