Homeಅಂಕಣಗಳುಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

- Advertisement -
- Advertisement -

ಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ ಮುಖ್ಯಮಂತ್ರಿ ಪಟ್ಟಸಿಕ್ಕಿತು. ಒಂದು ವೇಳೆ ಅವರು ಹೈಕಮಾಂಡ್ ಮೆಚ್ಚುವಂತಹ ಆಡಳಿತ ನೀಡಿದ್ದರೆ ಈ ಜನ್ಮದಲ್ಲಿ ನಾನು ಮುಖ್ಯಮಂತ್ರಿಯಾಗುವಂತಿರಲಿಲ್ಲ. ಈ ಜನ್ಮದಲ್ಲಿ ತೀರಿಸಲಾಗದಂತಹ ಉಪಕಾರ ಮಾಡಿರುವ ಎಡೂರಪ್ಪನವರಿಗೆ ತಕ್ಕ ಉಪಕಾರ ಎಂದರೆ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡುವುದು. ಎಡೂರಪ್ಪನವರ ಇನ್ನೊಂದು ಸಾಧನೆಯೂ ಇಲ್ಲಿ ಪರಿಗಣಿತವಾಗುತ್ತದೆ. ಎಂತಹವರನ್ನೇ ಆಗಲಿ ಮುಖ್ಯಮಂತ್ರಿ ಮಾಡುವುದರಲ್ಲಿ ಅವರು ಎತ್ತಿದ ಕೈ. ಅವರು ಮನಸ್ಸು ಮಾಡಿದ್ದರಿಂದಲೇ ಕುಮಾರಸ್ವಾಮಿ ಮುಖ್ಯಮಂತ್ರಿಯಾದದ್ದು, ಅವರಿಂದಲೇ ಅಲ್ಲವೆ ಸದಾನಂದಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಮತ್ತೆ ನನ್ನಂಥವನು ಮುಖ್ಯಮಂತ್ರಿಯಾಗಿ ಹೆಲಿಕಾಪ್ಟರಿನಲ್ಲಿ ಹಾರಾಡುವಂತಾದದ್ದು. ಅದಕ್ಕೆ ವಿಮಾನ ನಿಲ್ದಾಣಕ್ಕೆ ಎಡೂರಪ್ಪನ ಹೆಸರಿಟ್ಟದ್ದದು ಎಂದರಂತಲ್ಲಾ, ಥೂತ್ತೇರಿ.

******

ವಿಮಾನ ನಿಲ್ದಾಣಕ್ಕೆ ಎಡೂರಪ್ಪನ ಹೆಸರಿಡಲು ಮುಖ್ಯ ಕಾರಣ ಕೊಡುವ ಅವರ ಭಕ್ತರ ಪ್ರಕಾರ, “ನೋಡಿ ಸಾರ್ ಎಡೂರಪ್ಪ ಬೂಕನಕೆರೆಯಿಂದ ಬರಿಗೈಲಿ ಶಿಕಾರಿಪುರಕ್ಕೆ ಬಂದು ಶಿಕಾರಿ ಶುರುಮಾಡಿಕೊಂಡ್ರು; ಶಿಕಾರಿಪುರದ ಮುನಿಸಿಪಾಲಿಟಿಯಿಂದ ವಿಧಾನಸೌಧಕ್ಕೆ ಹೋದ್ರು. ವಿರೋಧಪಕ್ಷದ ನಾಯಕರಾದ್ರು; ಒಂದಲ್ಲ ಅಂತ ಮೂರುಸಲ ಮುಖ್ಯಮಂತ್ರಿಯಾದ್ರು. ಬೇಕಾದಷ್ಟು ಹಣ ಆಸ್ತಿ ಮಾಡಬಹುದಿತ್ತು ಮಾಡಲಿಲ್ಲ. ಕಾಲೇಜು, ಕಾಲೇಜಿಗೆ ಹಾಸ್ಟಲು, ಸ್ಟಾರ್ ಹೋಟ್ಲು ಕಟ್ಟಬಹುದಿತ್ತು, ಕಟ್ಟಲಿಲ್ಲ. ಯಾವನೋ ಚೆಕ್ ಮುಖಾಂತರ ಲಂಚಕೊಡಕ್ಕೆ ಬಂದ, ತಗಳ್ಳಿಲ್ಲ. ಪರಿಣಾಮ ಇವುರೇ ಜೈಲಿಗೋಗುವ ಸ್ಥಿತಿ ಬಂತು, ಹೆದರಲಿಲ್ಲ. ಹೋಗಿ ಬಂದ್ರು. ನಮ್ಮ ಶೋಭಕ್ಕನ್ನ ಬೆಳೆಸಿದ್ರು, ಕೈ ಬಿಡಲಿಲ್ಲ. ಇವತ್ತು ಯಾವುದೇ ನಾಯಕನಿಗೆ ನಮ್ಮ ಎಡೂರಪ್ಪನೋರ ಹೋಲಸಂಗೇಯಿಲ್ಲ. ಅದ್ಕೆ ವಿಮಾನ ನಿಲ್ದಾಣಕ್ಕೆ ಅವರೆಸರೇ ಸೂಕ್ತ ಸಾರು” ಅಂದನಲ್ಲ, ಥೂತ್ತೇರಿ.

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಖಾಲಿ ವಿಮಾನ!
PC: ISTOCK

******

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ ಎಂಬ ಚರ್ಚೆ ನಡೆದಿರುವ ಸಮಯದಲ್ಲಿ, ಹಲವಾರು ದಿಕ್ಕಿನಿಂದ ಸಲಹೆ ಸೂಚನೆ ಬರತೊಡಗಿವೆಯೆಲ್ಲಾ. ಸಾಹಿತಿಗಳ ದಿಕ್ಕಿನಿಂದ “ನೋಡಿ ಸಾರ್ ನಮ್ಮ ಕುವೆಂಪು ಕಾವ್ಯ ಬರೀಬೇಕಾದ್ರೆ ಲೌಖಿಕ ಜೀವನದಿಂದ ಶುರುಮಾಡಿ ಪಾರಮಾರ್ಥಿಕಕ್ಕೆ ಹೋಗತಿದ್ರು. ಉದಾಹರಣೆಗೆ: ’ನಾನಿನಗೆ ನೀನನಗೆ ಜೇನಾಗುವ, ರಸದೇವಗಂಗೆಯಲ್ಲಿ ಮೀನಾಗುವ’ ಅಂತ ಎರಡನೇ ಜಿಗಿತಕ್ಕೆ ಆಕಾಶಕ್ಕೆ ಹಾರತಿದ್ರು, ಜೊತೆಗೆ ಎತ್ತರದ ಕನಸು ಕಾಣತಿದ್ರು, ಅವರು ಯಾವಾಗಲೂ ಊರ್ದ್ವಮುಖಿ. ’ನಾನೇರುವೆತ್ತರಕೆ ನೀನೇರಬಲ್ಲೆಯ’ ಅಂತಿದ್ರು. ’ಮನುಜಮತ ವಿಶ್ವಪಥ’ ಅಂತಿದ್ರು” ಅನ್ನುವ ವಾದ ಬಂತಂತೆಲ್ಲಾ. ಅವುರೆಸರು ಸೂಕ್ತ ಅನ್ನುವುದಾದರೆ ಅಳಿದುಳಿದ ರಾಜಕಾರಣಿಗಳ ಪ್ರಕಾರ, ಈ ದೇಶಕಂಡ ಅಪ್ರತಿಮ ರಾಜಕಾರಣಿ
ಗೋಪಾಲಗೌಡ ಹೆಸರಿಡಲು ಕೊಡುವ ಕಾರಣವೆಂದರೆ: “ಗೋಪಾಲಗೌಡ ಗುಡಿಸಲಿಂದ ಬಂದವರು. ಮೂರುಬಾರಿ ಶಾಸಕರಾದರೂ ಮನೆ ಇರಲಿಲ್ಲ, ಸೈಟ್ ಇರಲಿಲ್ಲ. ಬ್ಯಾಂಕ್‌ನ ಅಕೌಂಟೇ ಇರಲಿಲ್ಲ. ಇದ್ದ ಎರಡು ಮೂರು ಜುಬ್ಬ ಅಜೀಜ್ ಸೇಠ್ ಹೊಲಿಸಿಕೊಟ್ಟಿದ್ದು. ಇಂತಹ ವ್ಯಕ್ತಿಯ ನೆನಪನ್ನು ಹಸಿರಾಗಿಡಬೇಕಾದರೆ ಅಕಾಶದಲ್ಲಿ ಹಾರಾಡುವ ವಿಮಾನ ನಿಲ್ದಾಣಕ್ಕೆ ಅವರ ಹೆಸರು ಇಡಬೇಕೆಂದರಲ್ಲಾ”, ಥೂತ್ತೇರಿ.

*****

ಅಜೀಜ್ ಸೇಠ್ ಎಂದಕೂಡಲೇ ನೆನಪಾಯ್ತು. ಗೋಪಾಲಗೌಡರ ಹರಿದ ಜುಬ್ಬ ನೋಡಿ ಮನಕರಗಿದ ಸೇಠ್ ಜುಬ್ಬ ಹೊಲಿಸಿಕೊಟ್ಟಂತೆ, ನಮ್ಮ ನಡುವಿನ ಸಾಬರು ಹಳ್ಳಿಗಾಡಿನ ರೈತನ ಪಾಡಿನಲ್ಲಿ ಅನಾದಿಕಾಲದಿಂದ ಭಾಗಿಯಾಗುತ್ತ ಬಂದಿರುವುದು ಸಂಘಿಗಳ ಗಮನಕ್ಕೆ ಬಂದಿಲ್ಲವಂತಲ್ಲಾ. ಈಗ ಸಾಬರ ಬಳಿ ಮಾವಿನ ಹಣ್ಣು ಕೊಳ್ಳಬೇಡಿ ಎಂದು ಫತ್ವಾ ಹೊರಡಿಸಿರುವುದರ ಪರಿಣಾಮ ಮಾವಿನ ಹಣ್ಣಿನ ಕಂಟ್ರಾಕ್ಟಿಗೆ ಸಾಬರು ಬರುತ್ತಿಲ್ಲವಲ್ಲಾ. ಈ ಪುರೋಹಿತಶಾಹಿಗಳ ತಲೆಯಿಂದ ಮಂತ್ರಗಳು ಮಾಯವಾಗಿ ಮುಸ್ಲಿಂ ದ್ವೇಷ ತುಂಬಿಕೊಂಡ ಫಲವಾಗಿ ರೈತ ಬೆಳೆದ ಮಾವಿನಹಣ್ಣು, ವಾಣಿಜ್ಯ ಬೆಳೆಗಳಾದ ಹೊಂಗೆಬೀಜ, ಇಪ್ಪೆ ಅಳ್ಳು, ಬೇವಿನಬೀಜ, ಹಲಸಿನಹಣ್ಣು ಕೊಳ್ಳುವವರಿಲ್ಲವಾಗಿದೆಯಂತಲ್ಲಾ. ಇದಿನ್ನೂ ದೊಡ್ಡದಾಗಿ ಬೆಳೆದು, ಸದ್ಯದಲ್ಲೇ ದೇಶ ದಿವಾಳಿ ಎದ್ದು ಶ್ರೀಲಂಕಾದಂತಾಗುವ ಎಲ್ಲಾ ಸೂಚನೆಗಳು ಕಾಣುತ್ತಿವೆಯಲ್ಲಾ. ಅದಕ್ಕಿಂತ ಮುಖ್ಯ ಎತ್ತಿಗೆ ಲಾಳ ಕಟ್ಟುತ್ತಿದ್ದ ಸಾಬರು ಹಳ್ಳಿಕಡೆ ಬಾರದೆಯಿರುವುದರಿಂದ ಎತ್ತುಗಳ ಗೊರಸು ಸವೆದು ಕುಂಟತೊಡಗಿವೆ. ಇದೀಗ ರೈತರು ಎಚ್ಚೆತ್ತು “ಬಾರೊ ನಮ್ಮ ಎತ್ತಿಗೆ ಲಾಳ ಕಟ್ಟು” ಅಂದರೆ ಸಂಘಿಗಳ ಕತೆಯೇನೆಂದು ಉದ್ಘಾರ ತೆಗೆದರಲ್ಲಾ, ಥೂತ್ತೇರಿ.

*******

ಈ ಬಿಜೆಪಿಗಳು ಆಡಳಿತ ನಡೆಸಲು ಅಳವಡಿಸಿಕೊಂಡಿರುವುದು ಗೋಳವಲಕರನ ಅರ್ಥ ವ್ಯವಸ್ಥೆಯಂತಲ್ಲಾ. ಆತನ ಅರ್ಥಶಾಸ್ತ್ರದ ಪ್ರಕಾರ ನಾವು ಸುಖವಾಗಿ ಭೋಜನ ಬಾರಿಸುತ್ತ ಗರ್ಭಗುಡಿಯಲ್ಲಿರಬೇಕಾದರೆ ಈ ದೇಶದಲ್ಲಿ ಬಡವರಿರಬೇಕು ಅವರು ಆಸ್ತಿವಂತರಾಗಬಾರದು, ಅಕಸ್ಮಾತ್ ಆದರೆ ನಮ್ಮ ಮಾತನ್ನ ಕೇಳುವುದಿಲ್ಲ; ನಾವೇಳಿದ ಕೆಲಸ ಮಾಡುವುದಿಲ್ಲ; ಆದ್ದರಿಂದ ಅವರು ಆಸ್ತಿವಂತರಾಗದಂತೆ ನೋಡಿಕೊಳ್ಳಬೇಕು; ಅದರಲ್ಲೂ ಮುಸ್ಲಿಮರು ಆರ್ಥಿಕವಾಗಿ ಮುಂದೆ ಬರಲೇಬಾರದು ಎಂದಿದೆಯಂತಲ್ಲಾ. ಅದರ ಫಲವಾಗಿ ಚರ್ಮೋದ್ಯಮ ನಾಶವಾಯ್ತು. ಹಳ್ಳಿಗಳ ಕಡೆ ಹಬ್ಬವಾದರೆ ಚರ್ಮ ಕೊಳ್ಳಲು ಸಾಬರು ಬರುತ್ತಿದ್ದರು. ಈಗ ಗುಂಡಿ ತೆಗೆದು ಚರ್ಮವನ್ನೂ ಹೂಳುತ್ತಿದ್ದಾರೆ. ಇಲ್ಲಿಂದ ಶುರುವಾದ ಮುಸ್ಲಿಮರ ಆರ್ಥಿಕ ಅವನತಿ, ರೈತರ ಕಡೆಗೂ ತಿರುಗಿ ಸದ್ಯದಲ್ಲೇ ರೈತರ ಪತನವಾಗಿ ಅವರೆಲ್ಲಾ ಇನ್ನೂ ಬಡವರಾಗುವುದರಲ್ಲಿ ಯಾವ ಸಂಶಯವೂ ಇಲ್ಲವಂತಲ್ಲಾ, ಥೂಥೂ ಥೂತ್ತೇರಿ.


ಇದನ್ನೂ ಓದಿ: ಈಶ್ವರಪ್ಪ ಪರಸೆಂಟೇಜಲ್ಲಿ ಜಗದ್ಗುರುಗಳ ಪಾಲಿತ್ತಂತಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...