Homeಕರ್ನಾಟಕಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರು ಎರಡು ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಮೊದಲನೇಯದ್ದು ಶುಕ್ರವಾರ ರಾತ್ರಿ (ಮಾ.18) ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಮತ್ತೊಂದು ರವಿವಾರ (ಮಾ.19) ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ.

ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳ ದಾಳಿ

ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ಭಾನುವಾರ ತುಂಗಾ ನಗರ ಠಾಣೆ ಪೊಲೀಸರ ಸಮ್ಮುಖದಲ್ಲಿ ದಾಳಿ ನಡೆಸಿದರು. ಇಲ್ಲಿ ಹಿಂದೂ ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಬಜರಂಗದಳ ಆರೋಪಿಸಿದೆ.

ಈ ವಿಚಾರವಾಗಿ ಪ್ರಾರ್ಥನಾ ಮಂದಿರ ನಡೆಸುತ್ತಿದ್ದ ಫಾದರ್ ಮಣಿಕಂಠ ಇಮ್ಯಾನ್ಯುಯಲ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ವಾಪಸ್‌ ಕಳುಹಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆ ಬಗ್ಗೆ ಪ್ರತಿಕ್ರಿಸಿಯಿದ ಫಾದರ್ ಮಣಿಕಂಠ ಇಮ್ಯಾನ್ಯುಯಲ್, ”ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. 15 ವರ್ಷಗಳಿಂದ ಟ್ರಸ್ಟ್ ಸ್ಥಾಪಿಸಿ ಪ್ರಾರ್ಥನೆ ನಡೆಸುತ್ತಿದ್ದೇವೆ. ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಸಂದರ್ಭದಲ್ಲಿಯೂ ಪ್ರಾರ್ಥನೆ ನಡೆಸಿದ್ದೆವು” ಎಂದು ಅವರು ತಿಳಿಸಿದರು.

ಬಜರಂಗದಳದ ಕಾರ್ಯಕರ್ತ ರಾಜೇಶ್ ಗೌಡ ಮಾತನಾಡಿ, ”ಇಲ್ಲಿ ನಿರ್ಮಿಸಿರುವ ಶೆಡ್‌ಗೆ ಯಾವುದೇ ಟ್ರಸ್ಟ್‌ನ ನಾಮಫಲಕ ಅಳವಡಿಸಿಲ್ಲ. ಅಲ್ಲದೇ 42 ಜನರ ಪಟ್ಟಿ ದೊರೆತಿದೆ. ಇದು ಹಿಂದೂಗಳನ್ನು ಮತಾಂತರ ಮಾಡಲು ಸಿದ್ಧಪಡಿಸಿದ್ದ ಪಟ್ಟಿ” ಎಂದು ಆರೋಪಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ದಾಳಿ ವೇಳೆ ಬಜರಂಗದಳದ ಜಿಲ್ಲಾ ಸಂಚಾಲಕ ಅಂಕುಶ್, ನಗರ ಕಾರ್ಯದರ್ಶಿ ಸಚಿನ್, ಜಿತೇಂದ್ರಗೌಡ ತುಂಗಾ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಪಿಎಸ್ಐ ರಾಜು ರೆಡ್ಡಿ ಇದ್ದರು.

ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ದಾಳಿ

ಶುಕ್ರವಾರ ರಾತ್ರಿ ಶಿವಮೊಗ್ಗದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನೇ ನಿಲ್ಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ ನಂತರ, ಎಲ್ಲಾ ಮಹಿಳೆಯರು ಮತ್ತು ಅವರ ಜೊತೆಗಿದ್ದ ಪುರುಷರು ಹೋಟೆಲ್‌ನಿಂದ ಹೊರಬಂದಿದ್ದಾರೆ.

ಕ್ಲಿಫ್ ಎಂಬಸಿ ಹೋಟೆಲ್‌ನ ಹೈವ್‌ ಸೈಬಾರ್‌ನಲ್ಲಿ ಲೇಡಿಸ್ ನೈಟ್ ಪಾರ್ಟಿ ಆಯೋಜಿಸಲಾಗಿತ್ತು. ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು, ಹೋಟೆಲ್ ಬಳಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಪಾರ್ಟಿಯನ್ನು ನಿಲ್ಲಿಸಿದ್ದಾರೆ. ಹೆಣ್ಣು ಮಕ್ಕಳನ್ನು ಕರೆಯಿಸಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಅವರು ಮಾತನಾಡಿದ್ದು, ”ಇದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಶಿವಮೊಗ್ಗದಲ್ಲಿ ಅವಕಾಶ ಕೊಡಲ್ಲ. ಮಲೆನಾಡಿನ ಜನರು ಸುಸಂಸ್ಕೃತರು, ಇಂತಹ ಕಾರ್ಯಕ್ರಮ ಆಯೋಜಿಸಿದರೆ ಸುಮ್ಮನಿರುವುದಿಲ್ಲ. ಲೇಟ್ ನೈಟ್ ಲೇಡಿಸ್ ಪಾರ್ಟಿ ಬಗ್ಗೆ ಈ ಮೊದಲೇ ಪೊಲೀಸರ ಗಮನಕ್ಕೆ ತಂದಿದ್ದೆವು. ಆದ್ದರಿಂದ ಪೊಲೀಸರ ಜತೆ ಬಂದು ಕಾರ್ಯಕ್ರಮ ನಿಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.

”ಶಿವಮೊಗ್ಗದಲ್ಲಿ ಇಂತಹ ಕಾರ್ಯಕ್ರಮಗಳಿಗೆ ನಾವು ಅವಕಾಶ ನೀಡುವುದಿಲ್ಲ ಏಕೆಂದರೆ ನಮ್ಮ ನಗರವು ಮತ್ತೊಂದು ಮಣಿಪಾಲವಾಗುವುದು ನಮಗೆ ಇಷ್ಟವಿಲ್ಲ. ಇಂತಹ ಘಟನೆಗಳನ್ನು ಭಜರಂಗದಳ ಸಹಿಸುವುದಿಲ್ಲ” ಎಂದು ಹೇಳಿದ ಅವರು, ಪಾರ್ಟಿಯಲ್ಲಿ ಮಹಿಳೆಯರ ಉಡುಗೆಯನ್ನೂ ಆಕ್ಷೇಪಿಸಿದ್ದಾರೆ.

”ನಮ್ಮ ಸಂಘಟನೆಯು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲಿಲ್ಲ. ಬದಲಿಗೆ ಪೊಲೀಸರಿಗೆ ಮಾಹಿತಿ ನೀಡಿದರು, ಅವರು ಪಾರ್ಟಿಯನ್ನು ನಿಲ್ಲಿಸಿದ್ದಾರೆ ಎಂದು ರಾಜೇಶ್ ಗೌಡ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ ಮಿಥುನ್ ಕುಮಾರ್, ”ನಮ್ಮ ಪೊಲೀಸರು ಪಾರ್ಟಿಯನ್ನು ನಿಲ್ಲಿಸಲಿಲ್ಲ ಎಂದು ಹೇಳಿದ್ದಾರೆ.

”ಕೆಲವು ವ್ಯಕ್ತಿಗಳು ಪಾರ್ಟಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಬಳಿಕ ನಮ್ಮ ಅಧಿಕಾರಿಗಳು ಹೋಟೆಲ್‌ಗೆ ತೆರಳಿದರು” ಎಂದು ಅವರು ತಿಳಿಸಿದ್ದಾರೆ.

”ನಮ್ಮ ಪೊಲೀಸರು ಯಾವುದೇ ಕಾರಣಕ್ಕೂ ಆ ಪಾರ್ಟಿಯನ್ನು ನಿಲ್ಲಿಸಲು ಅಲ್ಲಿಗೆ ಹೋಗಿರಲಿಲ್ಲ. ಅಲ್ಲಿ ಗಲಾಟೆ ನಡೆಯಬಾರದು ಎನ್ನುವ ಉದ್ದೇಶದಿಂದ ಹೋಗಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ” ಎಂದು ಕುಮಾರ್ ಹೇಳಿದರು.

”ಪಾರ್ಟಿಯಲ್ಲಿ ಆಕ್ಷೇಪಾರ್ಹವಾಗುವಂತಹ ವಿಚಾರ ಏನೂ ಇರಲಿಲ್ಲ. ಆದರೆ ಪೊಲೀಸರು ಮತ್ತು ಕಾರ್ಯಕರ್ತರು ಪಾರ್ಟಿಯನ್ನು ಏಕೆ ತಡೆದರು ಎಂಬುದು ನಮಗೆ ತಿಳಿದಿಲ್ಲ” ಎಂದು ಹೋಟೆಲ್ ಜನರಲ್ ಮ್ಯಾನೇಜರ್ ಶಂಕರ್ ಕೆ. ಹೇಳಿದ್ದಾರೆ.

”ನಮ್ಮ ಹೋಟೆಲ್ ಅತ್ಯುತ್ತಮ ಹೆಸರು ಗಳಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಧಾನಿ ಕಚೇರಿಯ ಜನರು ಸೇರಿದಂತೆ ವಿಐಪಿಗಳಿಗೆ ಇಲ್ಲಿ ನಾವು ಆತಿಥ್ಯ ನೀಡಿದ್ದೇವೆ. ಈ ಬಗ್ಗೆ ಜಿಲ್ಲಾಡಳಿತದ ಎಲ್ಲ ಹಿರಿಯ ಅಧಿಕಾರಿಗಳಿಗೆ ತಿಳಿದಿದೆ. ನಾವೇನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಲು ಸಿದ್ಧ. ಆದರೆ ನಾವು ಆ ರೀತಿಯ ಯಾವ ತಪ್ಪನ್ನೂ ಮಾಡಿಲ್ಲ. ಆದರೂ ಏಕೆ ಅವರು ನಮ್ಮ ವ್ಯವಹಾರಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ನಮಗೆ ತಿಳಿದಿಲ್ಲ” ಎಂದು ಶಂಕರ್ ಅಸಮಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...