Homeಕರ್ನಾಟಕಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರು ಎರಡು ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಮೊದಲನೇಯದ್ದು ಶುಕ್ರವಾರ ರಾತ್ರಿ (ಮಾ.18) ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಮತ್ತೊಂದು ರವಿವಾರ (ಮಾ.19) ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ.

ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳ ದಾಳಿ

ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ಭಾನುವಾರ ತುಂಗಾ ನಗರ ಠಾಣೆ ಪೊಲೀಸರ ಸಮ್ಮುಖದಲ್ಲಿ ದಾಳಿ ನಡೆಸಿದರು. ಇಲ್ಲಿ ಹಿಂದೂ ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಬಜರಂಗದಳ ಆರೋಪಿಸಿದೆ.

ಈ ವಿಚಾರವಾಗಿ ಪ್ರಾರ್ಥನಾ ಮಂದಿರ ನಡೆಸುತ್ತಿದ್ದ ಫಾದರ್ ಮಣಿಕಂಠ ಇಮ್ಯಾನ್ಯುಯಲ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ವಾಪಸ್‌ ಕಳುಹಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆ ಬಗ್ಗೆ ಪ್ರತಿಕ್ರಿಸಿಯಿದ ಫಾದರ್ ಮಣಿಕಂಠ ಇಮ್ಯಾನ್ಯುಯಲ್, ”ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. 15 ವರ್ಷಗಳಿಂದ ಟ್ರಸ್ಟ್ ಸ್ಥಾಪಿಸಿ ಪ್ರಾರ್ಥನೆ ನಡೆಸುತ್ತಿದ್ದೇವೆ. ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಸಂದರ್ಭದಲ್ಲಿಯೂ ಪ್ರಾರ್ಥನೆ ನಡೆಸಿದ್ದೆವು” ಎಂದು ಅವರು ತಿಳಿಸಿದರು.

ಬಜರಂಗದಳದ ಕಾರ್ಯಕರ್ತ ರಾಜೇಶ್ ಗೌಡ ಮಾತನಾಡಿ, ”ಇಲ್ಲಿ ನಿರ್ಮಿಸಿರುವ ಶೆಡ್‌ಗೆ ಯಾವುದೇ ಟ್ರಸ್ಟ್‌ನ ನಾಮಫಲಕ ಅಳವಡಿಸಿಲ್ಲ. ಅಲ್ಲದೇ 42 ಜನರ ಪಟ್ಟಿ ದೊರೆತಿದೆ. ಇದು ಹಿಂದೂಗಳನ್ನು ಮತಾಂತರ ಮಾಡಲು ಸಿದ್ಧಪಡಿಸಿದ್ದ ಪಟ್ಟಿ” ಎಂದು ಆರೋಪಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ದಾಳಿ ವೇಳೆ ಬಜರಂಗದಳದ ಜಿಲ್ಲಾ ಸಂಚಾಲಕ ಅಂಕುಶ್, ನಗರ ಕಾರ್ಯದರ್ಶಿ ಸಚಿನ್, ಜಿತೇಂದ್ರಗೌಡ ತುಂಗಾ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಪಿಎಸ್ಐ ರಾಜು ರೆಡ್ಡಿ ಇದ್ದರು.

ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ದಾಳಿ

ಶುಕ್ರವಾರ ರಾತ್ರಿ ಶಿವಮೊಗ್ಗದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನೇ ನಿಲ್ಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ ನಂತರ, ಎಲ್ಲಾ ಮಹಿಳೆಯರು ಮತ್ತು ಅವರ ಜೊತೆಗಿದ್ದ ಪುರುಷರು ಹೋಟೆಲ್‌ನಿಂದ ಹೊರಬಂದಿದ್ದಾರೆ.

ಕ್ಲಿಫ್ ಎಂಬಸಿ ಹೋಟೆಲ್‌ನ ಹೈವ್‌ ಸೈಬಾರ್‌ನಲ್ಲಿ ಲೇಡಿಸ್ ನೈಟ್ ಪಾರ್ಟಿ ಆಯೋಜಿಸಲಾಗಿತ್ತು. ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು, ಹೋಟೆಲ್ ಬಳಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಪಾರ್ಟಿಯನ್ನು ನಿಲ್ಲಿಸಿದ್ದಾರೆ. ಹೆಣ್ಣು ಮಕ್ಕಳನ್ನು ಕರೆಯಿಸಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಅವರು ಮಾತನಾಡಿದ್ದು, ”ಇದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಶಿವಮೊಗ್ಗದಲ್ಲಿ ಅವಕಾಶ ಕೊಡಲ್ಲ. ಮಲೆನಾಡಿನ ಜನರು ಸುಸಂಸ್ಕೃತರು, ಇಂತಹ ಕಾರ್ಯಕ್ರಮ ಆಯೋಜಿಸಿದರೆ ಸುಮ್ಮನಿರುವುದಿಲ್ಲ. ಲೇಟ್ ನೈಟ್ ಲೇಡಿಸ್ ಪಾರ್ಟಿ ಬಗ್ಗೆ ಈ ಮೊದಲೇ ಪೊಲೀಸರ ಗಮನಕ್ಕೆ ತಂದಿದ್ದೆವು. ಆದ್ದರಿಂದ ಪೊಲೀಸರ ಜತೆ ಬಂದು ಕಾರ್ಯಕ್ರಮ ನಿಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.

”ಶಿವಮೊಗ್ಗದಲ್ಲಿ ಇಂತಹ ಕಾರ್ಯಕ್ರಮಗಳಿಗೆ ನಾವು ಅವಕಾಶ ನೀಡುವುದಿಲ್ಲ ಏಕೆಂದರೆ ನಮ್ಮ ನಗರವು ಮತ್ತೊಂದು ಮಣಿಪಾಲವಾಗುವುದು ನಮಗೆ ಇಷ್ಟವಿಲ್ಲ. ಇಂತಹ ಘಟನೆಗಳನ್ನು ಭಜರಂಗದಳ ಸಹಿಸುವುದಿಲ್ಲ” ಎಂದು ಹೇಳಿದ ಅವರು, ಪಾರ್ಟಿಯಲ್ಲಿ ಮಹಿಳೆಯರ ಉಡುಗೆಯನ್ನೂ ಆಕ್ಷೇಪಿಸಿದ್ದಾರೆ.

”ನಮ್ಮ ಸಂಘಟನೆಯು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲಿಲ್ಲ. ಬದಲಿಗೆ ಪೊಲೀಸರಿಗೆ ಮಾಹಿತಿ ನೀಡಿದರು, ಅವರು ಪಾರ್ಟಿಯನ್ನು ನಿಲ್ಲಿಸಿದ್ದಾರೆ ಎಂದು ರಾಜೇಶ್ ಗೌಡ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ ಮಿಥುನ್ ಕುಮಾರ್, ”ನಮ್ಮ ಪೊಲೀಸರು ಪಾರ್ಟಿಯನ್ನು ನಿಲ್ಲಿಸಲಿಲ್ಲ ಎಂದು ಹೇಳಿದ್ದಾರೆ.

”ಕೆಲವು ವ್ಯಕ್ತಿಗಳು ಪಾರ್ಟಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಬಳಿಕ ನಮ್ಮ ಅಧಿಕಾರಿಗಳು ಹೋಟೆಲ್‌ಗೆ ತೆರಳಿದರು” ಎಂದು ಅವರು ತಿಳಿಸಿದ್ದಾರೆ.

”ನಮ್ಮ ಪೊಲೀಸರು ಯಾವುದೇ ಕಾರಣಕ್ಕೂ ಆ ಪಾರ್ಟಿಯನ್ನು ನಿಲ್ಲಿಸಲು ಅಲ್ಲಿಗೆ ಹೋಗಿರಲಿಲ್ಲ. ಅಲ್ಲಿ ಗಲಾಟೆ ನಡೆಯಬಾರದು ಎನ್ನುವ ಉದ್ದೇಶದಿಂದ ಹೋಗಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ” ಎಂದು ಕುಮಾರ್ ಹೇಳಿದರು.

”ಪಾರ್ಟಿಯಲ್ಲಿ ಆಕ್ಷೇಪಾರ್ಹವಾಗುವಂತಹ ವಿಚಾರ ಏನೂ ಇರಲಿಲ್ಲ. ಆದರೆ ಪೊಲೀಸರು ಮತ್ತು ಕಾರ್ಯಕರ್ತರು ಪಾರ್ಟಿಯನ್ನು ಏಕೆ ತಡೆದರು ಎಂಬುದು ನಮಗೆ ತಿಳಿದಿಲ್ಲ” ಎಂದು ಹೋಟೆಲ್ ಜನರಲ್ ಮ್ಯಾನೇಜರ್ ಶಂಕರ್ ಕೆ. ಹೇಳಿದ್ದಾರೆ.

”ನಮ್ಮ ಹೋಟೆಲ್ ಅತ್ಯುತ್ತಮ ಹೆಸರು ಗಳಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಧಾನಿ ಕಚೇರಿಯ ಜನರು ಸೇರಿದಂತೆ ವಿಐಪಿಗಳಿಗೆ ಇಲ್ಲಿ ನಾವು ಆತಿಥ್ಯ ನೀಡಿದ್ದೇವೆ. ಈ ಬಗ್ಗೆ ಜಿಲ್ಲಾಡಳಿತದ ಎಲ್ಲ ಹಿರಿಯ ಅಧಿಕಾರಿಗಳಿಗೆ ತಿಳಿದಿದೆ. ನಾವೇನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಲು ಸಿದ್ಧ. ಆದರೆ ನಾವು ಆ ರೀತಿಯ ಯಾವ ತಪ್ಪನ್ನೂ ಮಾಡಿಲ್ಲ. ಆದರೂ ಏಕೆ ಅವರು ನಮ್ಮ ವ್ಯವಹಾರಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ನಮಗೆ ತಿಳಿದಿಲ್ಲ” ಎಂದು ಶಂಕರ್ ಅಸಮಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...