Homeಕರ್ನಾಟಕಶಿವಮೊಗ್ಗ: ಕುವೆಂಪು ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು- ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ಕುವೆಂಪು ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು- ಬಿ.ಕೆ.ಹರಿಪ್ರಸಾದ್

- Advertisement -
- Advertisement -

“ಕುವೆಂಪುರವರು ವಿಶ್ವ ಮಾನವ ಸಂದೇಶ ನೀಡಿದವರು. ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು ಅವರಿಗೆ ಅವಮಾನವಾದಾಗ ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು, ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು” ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಮಸ್ಯೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸುತ್ತಿದ್ದಾರೆ. ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು, ಕುವೆಂಪುರವರು ವಿಶ್ವ ಮಾನವ ಸಂದೇಶ ನೀಡಿದವರು. ಕುವೆಂಪು ಅವರಿಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿದಾಗ ಇಲ್ಲಿನ ಶಾಸಕ-ಗೃಹ ಸಚಿವ ಬಾಯಿ ಮುಚ್ಚಿಕೊಂಡಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರೇನು ಕಾಂಗ್ರೆಸ್ ಪಕ್ಷದವರಲ್ಲ” ಎಂದು ಸ್ಥಳೀಯ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ಹೊರಹಾಕಿರುವ ಹರಿಪ್ರಸಾದ್, “ಕುವೆಂಪು ಅವರಿಗೆ ಅಪಮಾನವಾದಾಗ ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು. ಆರಗ ಜ್ಞಾನೇಂದ್ರ ರಾಜ್ಯದ ಇತಿಹಾಸದಲ್ಲೇ‌ ಕಳಪೆ ಗೃಹಸಚಿವ. ಗೃಹಸಚಿವರಾದ ನಂತರ ಆರಗ ಜ್ಞಾನೇಂದ್ರ ಅವರ ಕುಖ್ಯಾತಿ ಹೆಚ್ಚುತ್ತಲೇ ಇದೆ. ಅವರಿಂದಾಗಿ ಕರ್ನಾಟಕ ಉತ್ತರ ಪ್ರದೇಶದಂತೆ ಆಗಿದೆ” ಎಂದರು.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

ಮುಂದುವರೆದು, “ರಾಜ್ಯದಲ್ಲಿ ಕಾನೂನು ಸುವ್ಯವಸ್ತೆ ಹದಗೆಟ್ಟಿದೆ. ಪಿಎಸ್ ಐ ಹಗರಣದಲ್ಲಿ ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಮೊದಲ ದೂರು ದಾಖಲಾಗಬೇಕಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು” ಎಂದಿದ್ದಾರೆ.

“ಇದೀಗ ಬಿಜೆಪಿ ಪಠ್ಯ ಪರಿಷ್ಕರಣೆ ಮೂಲಕ ನಾಗಪುರ ಯೂನಿವರ್ಸಿಟಿ ಅಂಶಗಳನ್ನು ಮಕ್ಕಳ ಮೇಲೆ ಹೇರುತ್ತಿದೆ. ಬಿಜೆಪಿ ಜಾಯಮಾನವೇ ಬರಿ ಸುಳ್ಳು ಹೇಳುವುದು. ಇತಿಹಾಸವನ್ನು ರಸ್ತೆಯಲ್ಲಿ ಹೋಗುವ ಪೋಕರಿಗಳು ಮಾಡುವಂತದ್ದಲ್ಲ. ಇತಿಹಾಸವನ್ನು ತಜ್ಞರು, ವಿದ್ವಾಂಸರು ರಚಿಸಬೇಕು. ಈಗ ಪಠ್ಯ ಪುಸ್ತಕ ಪರಿಷ್ಕರಣೆ 200 ಕೋಟಿ ಖರ್ಚಾಗಿರಬಹುದು. ಎಳೆಯ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಪಠ್ಯ ಪುಸ್ತಕವನ್ನ ಕೂಡಲೇ ಹಿಂತೆಗೆದುಕೊಳ್ಳಬೇಕು. ಮಕ್ಕಳ ಭವಿಷ್ಯದ ಮೇಲೆ ಆಟ ಆಡುವುದು ಬಿಜೆಪಿಗೆ ಸಾಮಾನ್ಯವಾಗಿದೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಬೆಂಬಲಿತ ಟ್ರೋಲರ್‌‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ವಿರೋಧಿಸಿ, ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಸ್ಮಾರಕವಾದ ಕವಿಶೈಲದಲ್ಲಿ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ ಬುಧವಾರ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಕವಿಶೈಲದಲ್ಲಿ ಕುವೆಂಪು ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಪ್ರಾರಂಭವಾದ ಪಾದಯಾತ್ರೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಆವರಣದಲ್ಲಿ ಸೇರಿ ಸಾರ್ವಜನಿಕ ಸಭೆ ನಡೆಸಲಿದೆ.


ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...