Homeಕರ್ನಾಟಕಶಿವಮೊಗ್ಗ: ಕುವೆಂಪು ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು- ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ಕುವೆಂಪು ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು- ಬಿ.ಕೆ.ಹರಿಪ್ರಸಾದ್

- Advertisement -
- Advertisement -

“ಕುವೆಂಪುರವರು ವಿಶ್ವ ಮಾನವ ಸಂದೇಶ ನೀಡಿದವರು. ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು ಅವರಿಗೆ ಅವಮಾನವಾದಾಗ ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು, ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು” ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಮಸ್ಯೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸುತ್ತಿದ್ದಾರೆ. ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು, ಕುವೆಂಪುರವರು ವಿಶ್ವ ಮಾನವ ಸಂದೇಶ ನೀಡಿದವರು. ಕುವೆಂಪು ಅವರಿಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿದಾಗ ಇಲ್ಲಿನ ಶಾಸಕ-ಗೃಹ ಸಚಿವ ಬಾಯಿ ಮುಚ್ಚಿಕೊಂಡಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರೇನು ಕಾಂಗ್ರೆಸ್ ಪಕ್ಷದವರಲ್ಲ” ಎಂದು ಸ್ಥಳೀಯ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ಹೊರಹಾಕಿರುವ ಹರಿಪ್ರಸಾದ್, “ಕುವೆಂಪು ಅವರಿಗೆ ಅಪಮಾನವಾದಾಗ ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು. ಆರಗ ಜ್ಞಾನೇಂದ್ರ ರಾಜ್ಯದ ಇತಿಹಾಸದಲ್ಲೇ‌ ಕಳಪೆ ಗೃಹಸಚಿವ. ಗೃಹಸಚಿವರಾದ ನಂತರ ಆರಗ ಜ್ಞಾನೇಂದ್ರ ಅವರ ಕುಖ್ಯಾತಿ ಹೆಚ್ಚುತ್ತಲೇ ಇದೆ. ಅವರಿಂದಾಗಿ ಕರ್ನಾಟಕ ಉತ್ತರ ಪ್ರದೇಶದಂತೆ ಆಗಿದೆ” ಎಂದರು.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

ಮುಂದುವರೆದು, “ರಾಜ್ಯದಲ್ಲಿ ಕಾನೂನು ಸುವ್ಯವಸ್ತೆ ಹದಗೆಟ್ಟಿದೆ. ಪಿಎಸ್ ಐ ಹಗರಣದಲ್ಲಿ ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಮೊದಲ ದೂರು ದಾಖಲಾಗಬೇಕಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು” ಎಂದಿದ್ದಾರೆ.

“ಇದೀಗ ಬಿಜೆಪಿ ಪಠ್ಯ ಪರಿಷ್ಕರಣೆ ಮೂಲಕ ನಾಗಪುರ ಯೂನಿವರ್ಸಿಟಿ ಅಂಶಗಳನ್ನು ಮಕ್ಕಳ ಮೇಲೆ ಹೇರುತ್ತಿದೆ. ಬಿಜೆಪಿ ಜಾಯಮಾನವೇ ಬರಿ ಸುಳ್ಳು ಹೇಳುವುದು. ಇತಿಹಾಸವನ್ನು ರಸ್ತೆಯಲ್ಲಿ ಹೋಗುವ ಪೋಕರಿಗಳು ಮಾಡುವಂತದ್ದಲ್ಲ. ಇತಿಹಾಸವನ್ನು ತಜ್ಞರು, ವಿದ್ವಾಂಸರು ರಚಿಸಬೇಕು. ಈಗ ಪಠ್ಯ ಪುಸ್ತಕ ಪರಿಷ್ಕರಣೆ 200 ಕೋಟಿ ಖರ್ಚಾಗಿರಬಹುದು. ಎಳೆಯ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಪಠ್ಯ ಪುಸ್ತಕವನ್ನ ಕೂಡಲೇ ಹಿಂತೆಗೆದುಕೊಳ್ಳಬೇಕು. ಮಕ್ಕಳ ಭವಿಷ್ಯದ ಮೇಲೆ ಆಟ ಆಡುವುದು ಬಿಜೆಪಿಗೆ ಸಾಮಾನ್ಯವಾಗಿದೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಬೆಂಬಲಿತ ಟ್ರೋಲರ್‌‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ವಿರೋಧಿಸಿ, ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಸ್ಮಾರಕವಾದ ಕವಿಶೈಲದಲ್ಲಿ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ ಬುಧವಾರ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಕವಿಶೈಲದಲ್ಲಿ ಕುವೆಂಪು ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಪ್ರಾರಂಭವಾದ ಪಾದಯಾತ್ರೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಆವರಣದಲ್ಲಿ ಸೇರಿ ಸಾರ್ವಜನಿಕ ಸಭೆ ನಡೆಸಲಿದೆ.


ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...