Homeಕರ್ನಾಟಕಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ನಗರದಲ್ಲಿ ಮಂಗಳವಾರವೂ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 1,200 ಪೊಲೀಸ್ ಸಿಬ್ಬಂದಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ನಗರದಲ್ಲಿ ಗಸ್ತು ತಿರುಗುತ್ತಿದೆ. ಆದರೆ ಕೆಲ ಕಿಡಿಗೇಡಿಗಳು ಮಂಗಳವಾರ ಮುಂಜಾವಿನಲ್ಲಿ ಮೂರು ಆಟೋರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಂಧಿತರನ್ನು ಆಸಿಫ್ ಉಲ್ಲಾ ಖಾನ್, ರಿಹಾನ್ ಷರೀಫ್, ನಿಹಾನ್ ಮತ್ತು ಅಬ್ದುಲ್ ಅಫ್ನಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮೊಹಮ್ಮದ್ ಖಾಸಿಫ್ (30) ಮತ್ತು ಸೈಯದ್ ನದೀಮ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಮೊಹಮ್ಮದ್ ಖಾಸಿಫ್ ಪ್ರಮುಖ ಆರೋಪಿಯಾಗಿದ್ದು, ನದೀಮ್ ಆರೋಪಿ ನಂ.2 ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

ಆಸಿಫ್ ಉಲ್ಲಾ ಖಾನ್ – ಆರೋಪಿ ನಂ.3, ರಿಹಾನ್ ಷರೀಫ್- ಆರೋಪಿ ನಂ.4, ನಿಹಾನ್- ಆರೋಪಿ ನಂ.5 ಮತ್ತು ಅಫ್ನಾನ್ -ಆರೋಪಿ ನಂ.6. ಖಾಸಿಫ್ ಹೊರತುಪಡಿಸಿ ಉಳಿದ ಆರೋಪಿಗಳು 21 ರಿಂದ 22 ವರ್ಷ ವಯಸ್ಸಿನವರಾಗಿದ್ದಾರೆ.

“ಎಲ್ಲಾ ಆರೋಪಿಗಳು ಶಿವಮೊಗ್ಗ ನಗರದ ನಿವಾಸಿಗಳು. ನಾವು 12 ಜನರನ್ನು ವಶಕ್ಕೆ ಪಡೆದಿದ್ದೇವೆ. ಅದರಲ್ಲಿ ಆರು ಮಂದಿ ಕೊಲೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಆರು ಮಂದಿಯಲ್ಲಿ ನಾಲ್ವರು ಹಲ್ಲೆ, ಕೊಲೆ ಯತ್ನ ಮತ್ತು ಗಲಭೆ ಸೇರಿದಂತೆ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಮೃತ ಹರ್ಷ 2016 ಮತ್ತು 2017ರಲ್ಲಿ ದಾಖಲಾದ ಗಲಭೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಕೊಲೆಯ ಉದ್ದೇಶವನ್ನು ತಿಳಿದುಕೊಳ್ಳಲು ನಾವು ಎಲ್ಲಾ ಆರು ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದೇವೆ. ಈಗಾಗಲೇ ನಾಲ್ವರು ಆರೋಪಿಗಳ ಅಪರಾಧ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, ಉಳಿದ ಇಬ್ಬರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎಡಿಜಿಪಿಗಳಾದ ಪ್ರತಾಪ್ ರೆಡ್ಡಿ, ಎಸ್. ಮುರುಗನ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು, ಶಿವಮೊಗ್ಗ ಎಸ್‌ಪಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸೇರಿದಂತೆ ಮೂವರು ಪೊಲೀಸ್ ವರಿಷ್ಠಾಧಿಕಾರಿಗಳು, ಒಬ್ಬರು ಹೆಚ್ಚುವರಿ ಎಸ್ಪಿ ಮತ್ತು 12 ಡೆಪ್ಯುಟಿ ಎಸ್ಪಿಗಳು ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಹರ್ಷ ಹತ್ಯೆಯ ನಂತರ ಗಲಭೆ, ಬೆಂಕಿ ಹಚ್ಚುವಿಕೆ ಮತ್ತು ಕಲ್ಲು ತೂರಾಟದ ಘಟನೆಗಳಿಗೆ ಸಂಬಂಧಿಸಿದಂತೆ 14 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆ ಬಹಿಷ್ಕರಿಸಬೇಡಿ: ಜಮ್ಮು-ಕಾಶ್ಮೀರದ ಜನತೆಗೆ ಮೆಹಬೂಬಾ ಮುಫ್ತಿ ಮನವಿ

0
'ದಕ್ಷಿಣ ಕಾಶ್ಮೀರದಲ್ಲಿ ಚುನಾವಣೆಯನ್ನು ಬಹಿಷ್ಕರಿಸಲು, ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳನ್ನು ಬಂಧಿತ ಕಾರ್ಮಿಕರನ್ನಾಗಿ ಮಾಡಲು ಅನಾಮಧೇಯ ಶಕ್ತಿಗಳು ಪ್ರಯತ್ನಿಸುತ್ತಿವೆ' ಎಂದು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆತಂಕ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್ ರಜೌರಿ...