Homeಕರ್ನಾಟಕಶಿವಮೊಗ್ಗ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ, ಸಾವರ್ಕರ್‌ ಫೋಟೋ ಪ್ರತ್ಯಕ್ಷ!

ಶಿವಮೊಗ್ಗ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ, ಸಾವರ್ಕರ್‌ ಫೋಟೋ ಪ್ರತ್ಯಕ್ಷ!

- Advertisement -
- Advertisement -

ಶಿವಮೊಗ್ಗದ ಹಿಂದೂ ಮಹಾಸಭಾದಿಂದ ನಡೆದ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ ಹಾಗೂ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದ ವಿ.ಡಿ.ಸಾವರ್ಕರ್‌ ಫೋಟೋವನ್ನು ಪ್ರದರ್ಶಿಸಲಾಗಿದೆ.

ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ವೇಳೆ ಶುಕ್ರವಾರ ಈ ಫೋಟೋಗಳನ್ನು ಪ್ರದರ್ಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಸುಭಾಷ್‌ಚಂದ್ರ ಬೋಸ್, ಭಗತ್‌ಸಿಂಗ್ ಜೊತೆಗೆ ಶಿವಮೊಗ್ಗದಲ್ಲಿ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ, ವಿ.ಡಿ.ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆಯ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿದೆ.

ಗಣಪತಿಯ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಅಮೀರ್‌ಅಹಮದ್ ವೃತ್ತದಲ್ಲಿ ವೀರಸಾವರ್ಕರ್ ಹೆಸರಿನಲ್ಲಿ ಬೃಹತ್ ಮಹಾದ್ವಾರ ನಿರ್ಮಿಸಲಾಗಿತ್ತು. ವಿಶೇಷವೆಂದರೆ ಕೆಲವು ದಿನಗಳ ಹಿಂದಷ್ಟೇ ಇಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.

ಮೆರವಣಿಗೆಯಲ್ಲಿ ಸಾಗಿ ಬಂದ ಗಣಪತಿ ಮೂರ್ತಿ ಹಿಂಭಾಗದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಅಮೀರ್ ಅಹಮದ್ ವೃತ್ತ ಹಾಗೂ ಬಸ್ ನಿಲ್ದಾಣದ ಎದುರು ಅಶೋಕ ಲಾಂಛನದ ಮೇಲೆ ಕೇಸರಿ ಧ್ವಜಗಳು ಹಾರಾಡಿದವು.

ಮೆರವಣಿಗೆಯಲ್ಲಿ ಡಿಜೆ ಹಾಕಲು ಜಿಲ್ಲಾಡಳಿತ ಮೊದಲು ಅವಕಾಶ ನಿರಾಕರಿಸಿತ್ತು. ನಂತರ ಸಂಘಟಕರ ಒತ್ತಡಕ್ಕೆ ಮಣಿದು ಗೋಪಿ ವೃತ್ತದಲ್ಲಿ ಡಿಜೆಗೆ ಅವಕಾಶ ಕಲ್ಪಿಸಲಾಗಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ಹುರಿದುಂಬಿಸಿದ್ದಾರೆ.

ರಾಷ್ಟ್ರಲಾಂಛನದ ಮೇಲೆ ಕೇಸರಿಧ್ವಜ

ರಾಷ್ಟ್ರ ಲಾಂಛನವಾದ ಅಶೋಕ ಸ್ಥಂಭದ ಮೇಲೆ ದುಷ್ಕರ್ಮಿಗಳು ಕೇಸರಿ ಧ್ವಜವನ್ನು ಹಾರಿಸಿರುವ ಘಟನೆ ಶಿವಮೊಗ್ಗದ ಅಶೋಕ ನಗರದಲ್ಲಿ ನಡೆದಿದೆ. ಧ್ವಜವನ್ನು ವಶಪಡಿಸಿಕೊಂಡಿದ್ದಾಗಿ ನಾನುಗೌರಿ.ಕಾಂಗೆ ಪೊಲೀಸರು ತಿಳಿಸಿದ್ದಾರೆ.

ಈವರೆಗೆ ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ಹೇಳಿದ್ದು, ಯಾರಾದರೂ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಗಣೇಶ ಚತುರ್ಥಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ರಾಷ್ಟ್ರ ಲಾಂಛನದ ಮೇಲೆ ಕೂಡಾ ಕೇಸರಿ ಧ್ವಜವನ್ನು ಕಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಿವಮೊಗ್ಗೆ ಡಿಎಸ್‌ಪಿ ಬಾಲರಾಜ್,“ಧ್ವಜವನ್ನು ವಿಡಿಯೊಗ್ರಾಫ್ ಮಾಡಿ ಕಾರ್ಪೋರೇಷನ್ ಕಡೆಯಿಂದ ತೆಗೆಸಿ ಅವನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಯಾರಾದರೂ ದೂರು ನೀಡಿದರೆ ಎಫ್‌ಐಆರ್‌ ದಾಖಲಿಸುತ್ತೇವೆ. ಇದೀಗ ಕಾನೂನು ತಜ್ಞರ ಸಹಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...