Homeಕರ್ನಾಟಕಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಹರ್ಷ ಬಳಸುತ್ತಿದ್ದ ಫೋನ್ ಘಟನಾ ಸ್ಥಳದಿಂದ ನಾಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಇಬ್ಬರನ್ನು ಫರಾಜ್ ಪಾಷಾ (24) ಮತ್ತು ಅಬ್ದುಲ್ ಖಾದರ್ ಜಿಲಾನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಬೀಡುಬಿಟ್ಟಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶ್ರೇಣಿಯ ಇಬ್ಬರು ಅಧಿಕಾರಿಗಳು ವಿಚಾರಣೆಯ ನೇತೃತ್ವ ವಹಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬುಧವಾರ ಯಾವುದೇ ಅಹಿತಕರ ಘಟನೆಗಳ ವರದಿಯಾಗದೆ ಶಾಂತಿಯುತವಾಗಿತ್ತು. ಹೆಚ್ಚುವರಿ ನಿಗಾ ಇರಿಸಲು ಡ್ರೋನ್‌ಗಳನ್ನು ಬಳಸಲಾಗುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಮತ್ತು ಆರ್‌ಎಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ಸದ್ಯ ನಗರದಲ್ಲಿರುವ ಪರಿಸ್ಥಿತಿಯನ್ನು ಪರಿಗಣಿಸಿ ಶನಿವಾರ ಬೆಳಿಗ್ಗೆ 9 ರವರೆಗೆ ಕರ್ಫ್ಯೂ ವಿಸ್ತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್ ಸೆಲ್ವಮಣಿ ಘೋಷಿಸಿದ್ದಾರೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಎಲ್ಲಾ ಮೆರವಣಿಗೆಗಳು, ಕಾರ್ಯಕ್ರಮಗಳು, ವಿಜಯೋತ್ಸವ ಮೆರವಣಿಗೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಐದಕ್ಕಿಂತ ಹೆಚ್ಚು ಜನರು ಒಂದೇ ಸ್ಥಳದಲ್ಲಿ ಸೇರುವಂತಿಲ್ಲ. ಎಲ್ಲಾ ಅಂಗಡಿಗಳನ್ನು ಮುಚ್ಚಲಾಗುವುದು, ಆದರೆ ಹಾಲು, ದಿನಸಿ ಮತ್ತು ತರಕಾರಿಗಳನ್ನು ಬೆಳಿಗ್ಗೆ 6 ರಿಂದ 8 ರವರೆಗೆ ಮಾರಾಟ ಮಾಡಲಾಗುವುದು ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

“ನಗರದಲ್ಲಿ ನಿನ್ನೆ ಸಂಜೆಯವರೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ 27 ಎಫ್‌ಐಆರ್‌ಗಳು ದಾಖಲಾಗಿವೆ. ಹಾಗಾಗಿ ಆ ನಿಟ್ಟಿನಲ್ಲಿ ಪ್ರತ್ಯೇಕ ತಂಡ ರಚಿಸಲಾಗಿದೆ. ಅವರು ಲಭ್ಯವಿರುವ ಎಲ್ಲಾ ವೀಡಿಯೊಗಳನ್ನು ವಿಶ್ಲೇಷಿಸುತ್ತಾರೆ. ಅದರ ಆಧಾರದ ಮೇಲೆ ನಾವು ಆರೋಪಿಗಳನ್ನು ಬಂಧಿಸುತ್ತೇವೆ” ಎಂದು ಶಿವಮೊಗ್ಗ ಎಸ್ಪಿ, ಬಿ.ಎಂ.ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ಹರ್ಷನ ಸ್ನೇಹಿತರೊಬ್ಬರ ಹೇಳಿಕೆ ಆಧರಿಸಿ ಇಬ್ಬರು ಹುಡುಗಿಯರು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಸಾರವಾಗುತ್ತಿದ್ದು, ಈ ಬಗ್ಗೆ ಪೊಲೀಸರು ಅಧಿಕೃತವಾಗಿ ದೃಢಪಡಿಸಿಲ್ಲ.  ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್, ’ಕೆಲವು ಹುಡುಗಿಯರು ಹರ್ಷಗೆ ಕರೆ ಮಾಡಿದ್ದಾರೆ ಎಂಬ ವರದಿಗಳನ್ನು  ಖಚಿತಪಡಿಸಲು ಸಾಧ್ಯವಿಲ್ಲ. ಆದರೆ ಹರ್ಷ ಅವರ ಫೋನ್ ಕಾಣೆಯಾಗಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...