Homeಕರ್ನಾಟಕಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ 'ಭಗವದ್ಗೀತೆ..' ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

ಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ..’ ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

- Advertisement -
- Advertisement -

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ಶೀರ್ಷಿಕೆಯ ವಿಚಾರ ಸಂಕಿರಣ ಏರ್ಪಡಿಸಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ವಿವಿ ಮುಂದೆ ಪ್ರತಿಭಟನೆ ನಡೆಸಿತು.

ಸ್ವರ್ಣ ರಶ್ಮಿ ಟ್ರಸ್ಟ್, ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯದ ಬಸವ ಮಂಟಪದಲ್ಲಿ ಕಾರ್ಯಕ್ರಮವ ಆಯೋಜಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆಡಿಎಸ್ಎಸ್ ರಾಜ್ಯ ಸಂಚಾಲಕ ಎಂ ಗುರುಮೂರ್ತಿ, “ಈ ವಿಚಾರ ಸಂಕಿರಣವು ಬಲಪಂಥೀಯ ಸೈದ್ಧಾಂತಿಕ ಕಾರ್ಯಸೂಚಿಯನ್ನು ಉತ್ತೇಜಿಸುತ್ತದೆ, ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳು ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಚೈತನ್ಯಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.

“ಭಗವದ್ಗೀತೆ ಎನ್ನುವುದೇ ಒಂದು ಅಪ್ರಸ್ತುತ ಹಾಗೂ ಹಳೆಯ ವಿಚಾರ, ಶತಶತಮಾನಗಳಿಂದ ವರ್ಣಾಶ್ರಮವನ್ನು ಪಾಲಿಸಿಕೊಂಡು ಬಂದಿರುವ ಸಿದ್ಧಾಂತ. ಈಗ, ದೇಶದಲ್ಲಿ ಸಂವಿಧಾನ ಜಾರಿಯಲ್ಲಿದೆ. ಗಂಭೀರ ಅಪರಾಧವೊಂದನ್ನು ಮಾಡುವುದಕ್ಕೆ ಉರಿದುಂಬಿಸುವ ಜೊತೆಗೆ ವರ್ಣಾಶ್ರಮವನ್ನು ಸಮರ್ಥನೆ ಮಾಡಿಕೊಳ್ಳುವುದೇ ಭಗದ್ಗೀತೆಯ ಒಟ್ಟು ಸಾರಾಂಶ. ಆದ್ದರಿಂದ, ವಿಶ್ವವಿದ್ಯಾಲಯದ ಒಳಗೆ ಈ ಕುರಿತ ಕಾರ್ಯಕ್ರಮ ಆಯೋಜಿಸಿರುವುದು ಸರಿಯಲ್ಲ. ಏಕೆಂದರೆ, ಇಲ್ಲಿ ಬೇರೆಬೇರೆ ಜಾತಿ ಮತ್ತು ಧರ್ಮದ ಮಕ್ಕಳು ಓದುತ್ತಿದ್ದಾರೆ. ನಾಳೆ ಬೇರೆಯವರು ಬಂದು ಕುರಾನ್-ಬೈಬಲ್ ನಲ್ಲಿ ಒಳ್ಳೆಯ ಅಂಶಗಳಿವೆ ಎಂದು ಕೇಳಿದರೆ ವಿವಿ ಏನು ಮಾಡುತ್ತದೆ” ಎಂದು ಪ್ರಶ್ನಿಸಿದರು.

ನಾಳಿನ ಕಾರ್ಯಕ್ರಮವನ್ನು ಬರಗೂರು ರಾಮಚಂದ್ರಪ್ಪ ಬಹಿಷ್ಕರಿಸಲಿ

“ಉಪ ಕುಲಪತಿಗಳು ಮೂಲಭೂತವಾದಿತನವನ್ನು ಮೈಗೂಡಿಸಿಕೊಂಡಿದ್ದಾರೆ. ನಾಳೆ ವಿವಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಇಷ್ಟು ವರ್ಷ ನಾಡು ಕಟ್ಟುವ ಕೆಲಸ ಮಾಡಿರುವ ಬರಗೂರು ರಾಮಚಂದ್ರಪ್ಪ ಅವರು, ಇಂತಹ ಕೋಮುವಾದಿ, ಜಾತಿವಾದಿ ಹಾಗೂ ಮೂಲಭೂತವಾದಿಯಾಗಿರುವ ವಿಸಿ ಶರತ್ ಅನಂತ್‌ಮೂರ್ತಿ ಅವರ ಜೊತೆಗೆ ವೇದಿಕೆ ಹಂಚಿಕೊಳ್ಳಬಾರದು. ಅವರು ಕಾರ್ಯಕ್ರಮಕ್ಕೆ ಬರಬಾರದು ಎಂದು ನಾನು ಮನವಿ ಮಾಡುತ್ತಿದ್ದೇನೆ” ಎಂದರು.

“ಕರ್ನಾಟಕ ಸರ್ಕಾರ ವಿಸಿ ಶರತ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಏಕೆಂದರೆ, ನನ್ನದು ‘ಮಾನವ ಜಾತಿ’ ಎಂದು ಕುವೆಂಪು ಹೇಳಿದ್ದರು. ಯಾವುದೇ ಧರ್ಮಗ್ರಂಥ ಪೂಜನೀಯ ಆಗಬಾರದು ಎಂದು ಹೇಳಿದ್ದರು. ಅವರ ಹೆಸರಿನ ವಿಶ್ವವಿದ್ಯಾಲಯದೊಳಗೆ ಸನಾತನಕ್ಕೆ ಸಂಬಂಧಿಸಿದ ವಿಚಾರ ಸಂಕಿರಣ ನಡೆಯಬಾರದಿತ್ತು. ಅಂಬೇಡ್ಕರ್ ಮತ್ತು ಕುವೆಂಪು ಅವರೂ ಸಹ ಸನಾತನ ಧರ್ಮವನ್ನು ವಿರೋಧಿದ್ದರು. ಇಷ್ಟೆಲ್ಲಾ ಇರುವಾಗ ಆರ್‌ಎಸ್‌ಎಸ್‌ ವಿಚಾರವನ್ನು ಮುನ್ನೆಲೆಗೆ ತರುವುದು ಸರಿಯಲ್ಲ. ವಿಶ್ವವಿದ್ಯಾಲಯದ ಯಾವುದೇ ವಿದ್ವಾಂಸರಿಲ್ಲದೇ, ಕದ್ದುಮುಚ್ಚಿ ಕಾರ್ಯಕ್ರಮ ಮಾಡುತ್ತಿರುವುದು ಯಾಕೆ? ವಿವಿ ಆವರಣಕ್ಕೆ ಪೊಲೀಸ್ ಸರ್ಪಗಾವಲು ಹಾಕಿ ಕಾರ್ಯಕ್ರಮ ಮಾಡುವ ಮೂಲಕ ಉಪ ಕುಲಪತಿಗಳು ಕುವೆಂಪು ಆಶಯಗಳಿಗೆ ವಿರುದ್ಧವಾಗಿ ನಿತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...