Homeಕರ್ನಾಟಕಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ 'ಭಗವದ್ಗೀತೆ..' ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

ಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ..’ ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

- Advertisement -
- Advertisement -

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ಶೀರ್ಷಿಕೆಯ ವಿಚಾರ ಸಂಕಿರಣ ಏರ್ಪಡಿಸಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ವಿವಿ ಮುಂದೆ ಪ್ರತಿಭಟನೆ ನಡೆಸಿತು.

ಸ್ವರ್ಣ ರಶ್ಮಿ ಟ್ರಸ್ಟ್, ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯದ ಬಸವ ಮಂಟಪದಲ್ಲಿ ಕಾರ್ಯಕ್ರಮವ ಆಯೋಜಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆಡಿಎಸ್ಎಸ್ ರಾಜ್ಯ ಸಂಚಾಲಕ ಎಂ ಗುರುಮೂರ್ತಿ, “ಈ ವಿಚಾರ ಸಂಕಿರಣವು ಬಲಪಂಥೀಯ ಸೈದ್ಧಾಂತಿಕ ಕಾರ್ಯಸೂಚಿಯನ್ನು ಉತ್ತೇಜಿಸುತ್ತದೆ, ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳು ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಚೈತನ್ಯಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.

“ಭಗವದ್ಗೀತೆ ಎನ್ನುವುದೇ ಒಂದು ಅಪ್ರಸ್ತುತ ಹಾಗೂ ಹಳೆಯ ವಿಚಾರ, ಶತಶತಮಾನಗಳಿಂದ ವರ್ಣಾಶ್ರಮವನ್ನು ಪಾಲಿಸಿಕೊಂಡು ಬಂದಿರುವ ಸಿದ್ಧಾಂತ. ಈಗ, ದೇಶದಲ್ಲಿ ಸಂವಿಧಾನ ಜಾರಿಯಲ್ಲಿದೆ. ಗಂಭೀರ ಅಪರಾಧವೊಂದನ್ನು ಮಾಡುವುದಕ್ಕೆ ಉರಿದುಂಬಿಸುವ ಜೊತೆಗೆ ವರ್ಣಾಶ್ರಮವನ್ನು ಸಮರ್ಥನೆ ಮಾಡಿಕೊಳ್ಳುವುದೇ ಭಗದ್ಗೀತೆಯ ಒಟ್ಟು ಸಾರಾಂಶ. ಆದ್ದರಿಂದ, ವಿಶ್ವವಿದ್ಯಾಲಯದ ಒಳಗೆ ಈ ಕುರಿತ ಕಾರ್ಯಕ್ರಮ ಆಯೋಜಿಸಿರುವುದು ಸರಿಯಲ್ಲ. ಏಕೆಂದರೆ, ಇಲ್ಲಿ ಬೇರೆಬೇರೆ ಜಾತಿ ಮತ್ತು ಧರ್ಮದ ಮಕ್ಕಳು ಓದುತ್ತಿದ್ದಾರೆ. ನಾಳೆ ಬೇರೆಯವರು ಬಂದು ಕುರಾನ್-ಬೈಬಲ್ ನಲ್ಲಿ ಒಳ್ಳೆಯ ಅಂಶಗಳಿವೆ ಎಂದು ಕೇಳಿದರೆ ವಿವಿ ಏನು ಮಾಡುತ್ತದೆ” ಎಂದು ಪ್ರಶ್ನಿಸಿದರು.

ನಾಳಿನ ಕಾರ್ಯಕ್ರಮವನ್ನು ಬರಗೂರು ರಾಮಚಂದ್ರಪ್ಪ ಬಹಿಷ್ಕರಿಸಲಿ

“ಉಪ ಕುಲಪತಿಗಳು ಮೂಲಭೂತವಾದಿತನವನ್ನು ಮೈಗೂಡಿಸಿಕೊಂಡಿದ್ದಾರೆ. ನಾಳೆ ವಿವಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಇಷ್ಟು ವರ್ಷ ನಾಡು ಕಟ್ಟುವ ಕೆಲಸ ಮಾಡಿರುವ ಬರಗೂರು ರಾಮಚಂದ್ರಪ್ಪ ಅವರು, ಇಂತಹ ಕೋಮುವಾದಿ, ಜಾತಿವಾದಿ ಹಾಗೂ ಮೂಲಭೂತವಾದಿಯಾಗಿರುವ ವಿಸಿ ಶರತ್ ಅನಂತ್‌ಮೂರ್ತಿ ಅವರ ಜೊತೆಗೆ ವೇದಿಕೆ ಹಂಚಿಕೊಳ್ಳಬಾರದು. ಅವರು ಕಾರ್ಯಕ್ರಮಕ್ಕೆ ಬರಬಾರದು ಎಂದು ನಾನು ಮನವಿ ಮಾಡುತ್ತಿದ್ದೇನೆ” ಎಂದರು.

“ಕರ್ನಾಟಕ ಸರ್ಕಾರ ವಿಸಿ ಶರತ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಏಕೆಂದರೆ, ನನ್ನದು ‘ಮಾನವ ಜಾತಿ’ ಎಂದು ಕುವೆಂಪು ಹೇಳಿದ್ದರು. ಯಾವುದೇ ಧರ್ಮಗ್ರಂಥ ಪೂಜನೀಯ ಆಗಬಾರದು ಎಂದು ಹೇಳಿದ್ದರು. ಅವರ ಹೆಸರಿನ ವಿಶ್ವವಿದ್ಯಾಲಯದೊಳಗೆ ಸನಾತನಕ್ಕೆ ಸಂಬಂಧಿಸಿದ ವಿಚಾರ ಸಂಕಿರಣ ನಡೆಯಬಾರದಿತ್ತು. ಅಂಬೇಡ್ಕರ್ ಮತ್ತು ಕುವೆಂಪು ಅವರೂ ಸಹ ಸನಾತನ ಧರ್ಮವನ್ನು ವಿರೋಧಿದ್ದರು. ಇಷ್ಟೆಲ್ಲಾ ಇರುವಾಗ ಆರ್‌ಎಸ್‌ಎಸ್‌ ವಿಚಾರವನ್ನು ಮುನ್ನೆಲೆಗೆ ತರುವುದು ಸರಿಯಲ್ಲ. ವಿಶ್ವವಿದ್ಯಾಲಯದ ಯಾವುದೇ ವಿದ್ವಾಂಸರಿಲ್ಲದೇ, ಕದ್ದುಮುಚ್ಚಿ ಕಾರ್ಯಕ್ರಮ ಮಾಡುತ್ತಿರುವುದು ಯಾಕೆ? ವಿವಿ ಆವರಣಕ್ಕೆ ಪೊಲೀಸ್ ಸರ್ಪಗಾವಲು ಹಾಕಿ ಕಾರ್ಯಕ್ರಮ ಮಾಡುವ ಮೂಲಕ ಉಪ ಕುಲಪತಿಗಳು ಕುವೆಂಪು ಆಶಯಗಳಿಗೆ ವಿರುದ್ಧವಾಗಿ ನಿತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...